Advertisement
MIRROR FOCUS

4 ದಶಕಗಳಲ್ಲೇ ಬರೋಬ್ಬರಿ 1500 ಕೋಟಿ ವಹಿವಾಟು | ಮೈಸೂರು ಸ್ಯಾಂಡಲ್ ಸೋಪ್ ಉತ್ಪಾದಕ ಸಂಸ್ಧೆ KSDLನಿಂದ ಮಹತ್ತರ ಸಾಧನೆ |

Share

ಸೋಪ್‌(Soap) ಅಂದ್ರೆ ಅದು ಮೈಸೂರು ಸ್ಯಾಂಡಲ್‌ ಸೋಪು(Mysore sandal soap). ದಿಕಳೆದಂತೆ ಮಾರುಕಟ್ಟೆಗೆ ಹೊಸ ಹೊಸ ನಮೂನೆ ಪರಿಮಳ ಬೀರುವ ಸಾಬೂನುಗಳು ಲಗ್ಗೆ ಇಟ್ಟವೂ. ಆಗ ನಮ್ಮ ರಾಜ್ಯದ ಹೆಮ್ಮೆಯ ಮೈಸೂರು ಸ್ಯಾಟಂಲ್‌ ಸೋಪ್‌ ಬದಿಗೆ ಸರಿಯಿತು. ಆದರೆ ಸರ್ಕಾರ(Govt) ಹಾಗೂ ಆಡಳಿತ ಮಂಡಳಿ ಇತರ ಸಾಬೂನುಗಳೊಂದಿಗೆ ಮಾರುಕಟ್ಟೆಯಲ್ಲಿ(Market) ನಿಲ್ಲಲ್ಲು ಅವಿರತ ಪ್ರಯತ್ನವನ್ನು ಮಾಡಿದ ಫಲವಾಗಿ ಇಂದು ವಿಶ್ವ ವಿಖ್ಯಾತ ಮೈಸೂರು ಸ್ಯಾಂಡಲ್ ಸೋಪ್​ ಉತ್ಪಾದಕ ಸಂಸ್ಥೆ KSDL ಮತ್ತೊಂದು ಮಹತ್ತರ ಸಾಧನೆ ಮಾಡಿದೆ. ಇದೇ ಮಾರ್ಚ್ 31ಕ್ಕೆ ಅಂತ್ಯಗೊಳ್ಳುವಂತೆ 4 ದಶಕಗಳಲ್ಲೇ ಅತ್ಯಧಿಕ ಎನಿಸುವ ರೂ. 1,500 ಕೋಟಿ ವಹಿವಾಟು(Business) ನಡೆಸಿ ಹೊಸ ಇತಿಹಾಸ ಸೃಷ್ಟಿಸಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸಂತಸ ವ್ಯಕ್ತಪಡಿಸಿದ  ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್, ಇದೇ ವೇಳೆ “ರಾಜ್ಯದ ಉದ್ಯಮಗಳನ್ನು ಉಳಿಸಿ, ಬೆಳೆಸುವಲ್ಲಿ ನಮ್ಮ ಸರ್ಕಾರ ಬದ್ಧತೆಯನ್ನು ಪ್ರದರ್ಶಿಸುತ್ತಿದೆ ಮತ್ತು ಈ ಅಭಿವೃದ್ಧಿಯ ಪರ್ವ ಮುಂದುವರೆಯಲಿದೆ” ಎಂದಿದ್ದಾರೆ. ಪಾರಂಪರಿಕ ಹೆಗ್ಗುರುತಾಗಿರುವ ಮೈಸೂರು ಸ್ಯಾಂಡಲ್ ಸೋಪ್​ಗೆ ವಿಶ್ವದಾದ್ಯಂತ ಗ್ರಾಹಕರಿದ್ದಾರೆ. ಸರ್ಕಾರದ ಅಧೀನ ಸಂಸ್ಥೆಯಾದ ಕರ್ನಾಟಕ ಸೋಪ್ಸ್ ಆ್ಯಂಡ್​ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್)ನಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಾಗುತ್ತಿದೆ. ಮೈಸೂರು ಸ್ಯಾಂಡಲ್ ಸೋಪ್ ಕರ್ನಾಟಕ ರಾಜ್ಯದ ಹೆಮ್ಮೆಯ ಉತ್ಪನ್ನವಾಗಿದೆ. ಸರ್ಕಾರದ ಸಂಸ್ಥೆಯಾಗಿ ಲಾಭ ಗಳಿಕೆ ಮಾಡುತ್ತಿರುವುದು ಕನ್ನಡಿಗರಾದ ನಾವು ಹೆಮ್ಮೆ ಪಡುವ ವಿಷಯವಾಗಿದೆ ಎಂದು ಮಧ್ಯಮ ಕೈಗಾರಿಕೆಗಳ ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

ಮೈಸೂರು ಸ್ಯಾಂಡಲ್ ಸೋಪ್ ಕಳೆದ 40 ವರ್ಷಗಳಲ್ಲಿ ಗರಿಷ್ಠ ಮಾರಾಟ ವಹಿವಾಟು ದಾಖಲಿಸಿದೆ. ಮಾರ್ಚ್ 2024ರ ವೇಳೆಗೆ 1,500 ಕೋಟಿ ರೂ.ಗಳನ್ನು ಮೀರಿ ವಹಿವಾಟು ನಡೆಸಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮಾರಾಟದಲ್ಲಿ 195 ಕೋಟಿ ರೂಪಾಯಿ ಏರಿಕೆಯಾಗಿದ್ದು, ಇದು ಶೇಕಡಾ 14.25 ರಷ್ಟು ಬೆಳವಣಿಗೆಯಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕೆಎಸ್‌ಡಿಎಲ್ ಸಂಸ್ಥೆ ಶವರ್ ಜೆಲ್‌ಗಳು, ಮೈಸೂರು ಸ್ಯಾಂಡಲ್ ವೇವ್ ಡಿಯೋ ಸೋಪ್, ಗ್ಲಿಸರಿನ್ ಆಧಾರಿತ ಪಾರದರ್ಶಕ ಸ್ನಾನದ ಬಾರ್ ಮತ್ತು ಸೂಪರ್ ಪ್ರೀಮಿಯಂ ಬಾತ್ ಸೋಪ್ ಸೇರಿದಂತೆ 21 ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಉತ್ಪನ್ನಗಳಲ್ಲಿ ಮೈಸೂರು ಸ್ಯಾಂಡಲ್ ಮಿಲೇನಿಯಂ ಗೋಲ್ಡ್ ವಿಶೇಷತೆ ಹೊಂದಿದ್ದು, 100 ಗ್ರಾಂ ಸೋಪಿನ ಬೆಲೆ 1,000 ರೂಪಾಯಿ ಇದೆ. ಮೈಸೂರು ಸ್ಯಾಂಡಲ್ ಸೋಪ್ ತನ್ನ ಸಾಬೂನುಗಳಲ್ಲಿ ಶುದ್ಧ ಶ್ರೀಗಂಧದ ಎಣ್ಣೆಯನ್ನು ಬಳಸುವುದಕ್ಕೆ ಹೆಸರುವಾಸಿಯಾಗಿದೆ. ಸರ್ಕಾರದ ಸ್ವಾದೀನದಲ್ಲಿರುವ ಕಂಪನಿ ಉತ್ತಮ ವಹಿವಾಟು ನಡೆಸಿರುವುದು ರಾಜ್ಯಕ್ಕೆ ಹೆಮ್ಮೆಯ ವಿಷಯವೂ ಹೌದು.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

12 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

14 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

21 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago