ಜನವರಿ 2 ರ ವರೆಗೆ ಮೈಸೂರು ಅರಮನೆ ಆವರಣದಲ್ಲಿ ಕ್ರಿಸ್ಮಸ್ ಹಾಗೂ ಹೊಸವರ್ಷದ ಆಚರಣೆಯ ಹಿನ್ನಲೆಯಲ್ಲಿ ಫಲಪುಷ್ಟ ಪ್ರದರ್ಶನ ಏರ್ಪಾಡು ಮಾಡಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಫಲಪುಷ್ಟ ಪ್ರದರ್ಶನಕ್ಕೆ ಚಾಲನೆಯನ್ನು ನೀಡಲಿದ್ದಾರೆ.
ಈ ವರ್ಷ ತಮಿಳುನಾಡಿನಲ್ಲಿ ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಭಾರತೀಯ 3 ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ನಟ ಪುನೀತ್ ರಾಜ್ ಕುಮಾರ್ ಅವರಿಗೆ ವಿಶೇಷವಾಗಿ ಪುಷ್ಪ ನಮನವನ್ನು ಫಲಪುಷ್ಪ ಪ್ರದರ್ಶನದಲ್ಲಿ ಮಾಡಲಾಗಿದೆ. ಈ ವರ್ಷ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾ ಅವರ ಪುಷ್ಪ ಮೂರ್ತಿಯನ್ನು ಸಿದ್ಧ ಮಾಡಲಾಗಿದೆ. ಮತ್ತು ಅಯೋಧ್ಯೆ ಶ್ರೀ ರಾಮ ಮಂದಿರ, ಚಾಮುಂಡೇಶ್ವರಿ ದೇವತೆ, ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಮಾದರಿಯ ಪ್ರತಿಮೆಗಳು ಮೈಸೂರು ಅರಮನೆ ಅವರಣದಲ್ಲಿ ಸಿದ್ಧವಾಗಿದೆ.
ಕೋವಿಡ್ ಹಿನ್ನಲೆಯಿಂದ ಸಾಕಷ್ಟು ಮುಂಜಾಗ್ರತೆಯನ್ನು ತೆಗೆದುಕೊಳ್ಳಲಾಗಿದ್ದು ಫಲಪುಷ್ಪ ಪ್ರದರ್ಶನವನ್ನು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8.30 ರವರೆಗೆ ವೀಕ್ಷಿಸಬಹುದಾಗಿದೆ. ಮಾತ್ರವಲ್ಲದೆ ಪ್ರತಿ ದಿನ 5೦೦ ಮಂದಿಗೆ ಮಾತ್ರ ಪ್ರವೇಶವನ್ನು ನೀಡಲಾಗುತ್ತದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕರು ತಿಳಿಸಿದರೆ.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…