ಪ್ರಸಾದ್ (PRASAD) ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆ ಮತ್ತು ಧಾರ್ಮಿಕ ಮಹತ್ವಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದರು.
ಚಾಮುಂಡಿ ಬೆಟ್ಟದ ಅಭಿವೃದ್ಧಿ ಯೋಜನೆಗಳ ಪರಿಶೀಲನೆ ವೇಳೆ ಮಾತನಾಡಿದ ಅವರು, ಐತಿಹಾಸಿಕ ಹಾಗೂ ಧಾರ್ಮಿಕ ಹಿನ್ನೆಲೆ ಹೊಂದಿರುವ ಈ ಪ್ರದೇಶದ ಮೂಲ ಸ್ವರೂಪವನ್ನು ಕಾಪಾಡಿಕೊಂಡು, ಭಕ್ತರು ಮತ್ತು ಪ್ರವಾಸಿಗರಿಗೆ ಉತ್ತಮ ಮೂಲಸೌಕರ್ಯ ಒದಗಿಸುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.
ಪ್ರಸಾದ್ ಯೋಜನೆಯಡಿ ದೇವಾಲಯದ ಸುತ್ತಮುತ್ತ ಸ್ವಚ್ಛತೆ, ಕುಡಿಯುವ ನೀರು, ಪಾದಚಾರಿ ಮಾರ್ಗ, ಬೆಳಕು ವ್ಯವಸ್ಥೆ, ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಸೇರಿದಂತೆ ಹಲವು ಕಾರ್ಯಗಳನ್ನು ಹಂತ ಹಂತವಾಗಿ ಜಾರಿಗೆ ತರಲಾಗುತ್ತಿದೆ. ಈ ಎಲ್ಲ ಅಭಿವೃದ್ಧಿ ಕಾರ್ಯಗಳು ಪಾರಂಪರಿಕ ಮೌಲ್ಯಗಳು ಮತ್ತು ಪರಿಸರ ಸಮತೋಲನವನ್ನು ಗಮನದಲ್ಲಿಟ್ಟುಕೊಂಡೇ ನಡೆಯಲಿವೆ ಎಂದು ಸಚಿವರು ತಿಳಿಸಿದರು.
ಚಾಮುಂಡಿ ಬೆಟ್ಟವು ಕೇವಲ ಧಾರ್ಮಿಕ ಕೇಂದ್ರವಷ್ಟೇ ಅಲ್ಲದೆ, ಮೈಸೂರಿನ ಸಾಂಸ್ಕೃತಿಕ ಗುರುತಾಗಿದ್ದು, ಇದರ ಐತಿಹಾಸಿಕತೆ ಉಳಿಯುವಂತೆ ಅಭಿವೃದ್ಧಿ ಅಗತ್ಯವಾಗಿದೆ ಎಂದು ಮಹದೇವಪ್ಪ ಹೇಳಿದರು. ಸರ್ಕಾರದ ಈ ಯೋಜನೆಯಿಂದ ಭಕ್ತರು ಹಾಗೂ ಪ್ರವಾಸಿಗರಿಗೆ ಸುಲಭ ಪ್ರವೇಶ, ಉತ್ತಮ ಅನುಭವ ದೊರಕಲಿದ್ದು, ಮೈಸೂರಿನ ಪ್ರವಾಸೋದ್ಯಮಕ್ಕೂ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಪ್ರಸಾದ್ ಯೋಜನೆಯಡಿ 45 ಕೋಟಿ 70 ಲಕ್ಷ ಅನುದಾನ ಮಂಜೂರಾಗಿದ್ದು, ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಲು ಸರತಿ ಸಾಲಿಗೆ ಕಲ್ಲಿನ ಕ್ಯೂ ಮಂಟಪ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…