ಪ್ರಸಾದ್ (PRASAD) ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆ ಮತ್ತು ಧಾರ್ಮಿಕ ಮಹತ್ವಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದರು.
ಚಾಮುಂಡಿ ಬೆಟ್ಟದ ಅಭಿವೃದ್ಧಿ ಯೋಜನೆಗಳ ಪರಿಶೀಲನೆ ವೇಳೆ ಮಾತನಾಡಿದ ಅವರು, ಐತಿಹಾಸಿಕ ಹಾಗೂ ಧಾರ್ಮಿಕ ಹಿನ್ನೆಲೆ ಹೊಂದಿರುವ ಈ ಪ್ರದೇಶದ ಮೂಲ ಸ್ವರೂಪವನ್ನು ಕಾಪಾಡಿಕೊಂಡು, ಭಕ್ತರು ಮತ್ತು ಪ್ರವಾಸಿಗರಿಗೆ ಉತ್ತಮ ಮೂಲಸೌಕರ್ಯ ಒದಗಿಸುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.
ಪ್ರಸಾದ್ ಯೋಜನೆಯಡಿ ದೇವಾಲಯದ ಸುತ್ತಮುತ್ತ ಸ್ವಚ್ಛತೆ, ಕುಡಿಯುವ ನೀರು, ಪಾದಚಾರಿ ಮಾರ್ಗ, ಬೆಳಕು ವ್ಯವಸ್ಥೆ, ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಸೇರಿದಂತೆ ಹಲವು ಕಾರ್ಯಗಳನ್ನು ಹಂತ ಹಂತವಾಗಿ ಜಾರಿಗೆ ತರಲಾಗುತ್ತಿದೆ. ಈ ಎಲ್ಲ ಅಭಿವೃದ್ಧಿ ಕಾರ್ಯಗಳು ಪಾರಂಪರಿಕ ಮೌಲ್ಯಗಳು ಮತ್ತು ಪರಿಸರ ಸಮತೋಲನವನ್ನು ಗಮನದಲ್ಲಿಟ್ಟುಕೊಂಡೇ ನಡೆಯಲಿವೆ ಎಂದು ಸಚಿವರು ತಿಳಿಸಿದರು.
ಚಾಮುಂಡಿ ಬೆಟ್ಟವು ಕೇವಲ ಧಾರ್ಮಿಕ ಕೇಂದ್ರವಷ್ಟೇ ಅಲ್ಲದೆ, ಮೈಸೂರಿನ ಸಾಂಸ್ಕೃತಿಕ ಗುರುತಾಗಿದ್ದು, ಇದರ ಐತಿಹಾಸಿಕತೆ ಉಳಿಯುವಂತೆ ಅಭಿವೃದ್ಧಿ ಅಗತ್ಯವಾಗಿದೆ ಎಂದು ಮಹದೇವಪ್ಪ ಹೇಳಿದರು. ಸರ್ಕಾರದ ಈ ಯೋಜನೆಯಿಂದ ಭಕ್ತರು ಹಾಗೂ ಪ್ರವಾಸಿಗರಿಗೆ ಸುಲಭ ಪ್ರವೇಶ, ಉತ್ತಮ ಅನುಭವ ದೊರಕಲಿದ್ದು, ಮೈಸೂರಿನ ಪ್ರವಾಸೋದ್ಯಮಕ್ಕೂ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಪ್ರಸಾದ್ ಯೋಜನೆಯಡಿ 45 ಕೋಟಿ 70 ಲಕ್ಷ ಅನುದಾನ ಮಂಜೂರಾಗಿದ್ದು, ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಲು ಸರತಿ ಸಾಲಿಗೆ ಕಲ್ಲಿನ ಕ್ಯೂ ಮಂಟಪ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…