Advertisement
ಸುದ್ದಿಗಳು

ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಧಕ್ಕೆಯಾಗದಂತೆ ಅಭಿವೃದ್ಧಿ – ಸಚಿವ ಡಾ.ಎಚ್.ಸಿ.ಮಹದೇವಪ್ಪ

Share

ಪ್ರಸಾದ್ (PRASAD) ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆ ಮತ್ತು ಧಾರ್ಮಿಕ ಮಹತ್ವಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದರು.

ಚಾಮುಂಡಿ ಬೆಟ್ಟದ ಅಭಿವೃದ್ಧಿ ಯೋಜನೆಗಳ ಪರಿಶೀಲನೆ ವೇಳೆ ಮಾತನಾಡಿದ ಅವರು, ಐತಿಹಾಸಿಕ ಹಾಗೂ ಧಾರ್ಮಿಕ ಹಿನ್ನೆಲೆ ಹೊಂದಿರುವ ಈ ಪ್ರದೇಶದ ಮೂಲ ಸ್ವರೂಪವನ್ನು ಕಾಪಾಡಿಕೊಂಡು, ಭಕ್ತರು ಮತ್ತು ಪ್ರವಾಸಿಗರಿಗೆ ಉತ್ತಮ ಮೂಲಸೌಕರ್ಯ ಒದಗಿಸುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.

ಪ್ರಸಾದ್ ಯೋಜನೆಯಡಿ ದೇವಾಲಯದ ಸುತ್ತಮುತ್ತ ಸ್ವಚ್ಛತೆ, ಕುಡಿಯುವ ನೀರು, ಪಾದಚಾರಿ ಮಾರ್ಗ, ಬೆಳಕು ವ್ಯವಸ್ಥೆ, ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಸೇರಿದಂತೆ ಹಲವು ಕಾರ್ಯಗಳನ್ನು ಹಂತ ಹಂತವಾಗಿ ಜಾರಿಗೆ ತರಲಾಗುತ್ತಿದೆ. ಈ ಎಲ್ಲ ಅಭಿವೃದ್ಧಿ ಕಾರ್ಯಗಳು ಪಾರಂಪರಿಕ ಮೌಲ್ಯಗಳು ಮತ್ತು ಪರಿಸರ ಸಮತೋಲನವನ್ನು ಗಮನದಲ್ಲಿಟ್ಟುಕೊಂಡೇ ನಡೆಯಲಿವೆ ಎಂದು ಸಚಿವರು ತಿಳಿಸಿದರು.

ಚಾಮುಂಡಿ ಬೆಟ್ಟವು ಕೇವಲ ಧಾರ್ಮಿಕ ಕೇಂದ್ರವಷ್ಟೇ ಅಲ್ಲದೆ, ಮೈಸೂರಿನ ಸಾಂಸ್ಕೃತಿಕ ಗುರುತಾಗಿದ್ದು, ಇದರ ಐತಿಹಾಸಿಕತೆ ಉಳಿಯುವಂತೆ ಅಭಿವೃದ್ಧಿ ಅಗತ್ಯವಾಗಿದೆ ಎಂದು ಮಹದೇವಪ್ಪ ಹೇಳಿದರು. ಸರ್ಕಾರದ ಈ ಯೋಜನೆಯಿಂದ ಭಕ್ತರು ಹಾಗೂ ಪ್ರವಾಸಿಗರಿಗೆ ಸುಲಭ ಪ್ರವೇಶ, ಉತ್ತಮ ಅನುಭವ ದೊರಕಲಿದ್ದು, ಮೈಸೂರಿನ ಪ್ರವಾಸೋದ್ಯಮಕ್ಕೂ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಪ್ರಸಾದ್ ಯೋಜನೆಯಡಿ 45 ಕೋಟಿ 70 ಲಕ್ಷ ಅನುದಾನ ಮಂಜೂರಾಗಿದ್ದು, ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಲು ಸರತಿ ಸಾಲಿಗೆ ಕಲ್ಲಿನ ಕ್ಯೂ ಮಂಟಪ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

3 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

8 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

18 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

18 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

19 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

20 hours ago