ನಾನು ರಕ್ತದಲ್ಲಿ ಬರೆದು ಕೊಡುತ್ತೇನೆ.. ಕಾಂಗ್ರೆಸ್ 150 ಸ್ಥಾನ ಪಡೆಯಲಿದೆ: ಡಿ.ಕೆ ಶಿವಕುಮಾರ್

April 26, 2023
10:07 PM

ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ, ಇನ್ನು 15 ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 40 ಸ್ಥಾನಕ್ಕೆ ನಿಲ್ಲುತ್ತದೆ. ಕಾಂಗ್ರೆಸ್ 150 ಸ್ಥಾನಕ್ಕೆ ಬರುತ್ತದೆ ಎಂದು ವಿಶ್ವಾಸಪಡಿಸಿದರು.

ಯಾರನ್ನೋ ಸೋಲಿಸುವುದೇ ನಿಮ್ಮ ಗುರಿಯೇ? ಬಿಜೆಪಿಯಿಂದ ಯಾರಿಗೆ ಅನುಕೂಲ ಆಗಿದೆ?  ರೈತರು, ವರ್ತಕರು, ಯುವಕರಿಗೆ ಮೋಸ ಮಾಡಿದೆ. ಆದ್ದರಿಂದ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ. ಇದನ್ನು ನಾನು ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ ಎಂದು ತಿರುಗೇಟು ನೀಡಿದರು.

ಲಿಂಗಾಯತ ನಾಯಕರ ಜೊತೆಗೆ ಸಭೆ ಬಳಿಕ ಮಾತನಾಡಿದ್ದ ಯಡಿಯೂಪ್ಪ ಅವರು, ಶೆಟ್ಟರ್’ಗೆ ನಾವು ಏನು ಅನ್ಯಾಯ ಮಾಡಿದ್ದೇವೆ. ವಿಶೇಷ ಕಾರಣಕ್ಕೆ ಅಭ್ಯರ್ಥಿ ಮಾಡಲಾಗುತ್ತಿಲ್ಲ. ಬದಲಾಗಿ ಕೇಂದ್ರದಲ್ಲಿ ಸಚಿವ ಸ್ಥಾನ, ಪತ್ನಿಗೆ ಟಿಕೆಟ್‌ ನೀಡುತ್ತೇವೆಂದು ಹೇಳಿದರೂ ಪಕ್ಷಕ್ಕೆ ದ್ರೋಹ ಎಸಗಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಎಲ್ಲಾ ಅಧಿಕಾರವನ್ನು ನೀಡಿದಾಗಲೂ ಪಕ್ಷಕ್ಕೆ ದ್ರೋಹ ಮಾಡಿ ಕಾಂಗ್ರೆಸ್‌ ಸೇರಿರುವ ಜಗದೀಶ ಶೆಟ್ಟರ ಅವರಿಗೆ ತಕ್ಕಪಾಠ ಕಲಿಸಬೇಕು. ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸಲು ಸಾಧ್ಯವಿಲ್ಲ. ಈ ಬಾರಿ ಶೆಟ್ಟರ್ ಗೆಲ್ಲಲು ಸಾಧ್ಯವಿಲ್ಲ. ಇದನ್ನು ನಾನು ನನ್ನ ರಕ್ತದಲ್ಲಿ ಬರೆದುಕೊಡುತ್ತೇನೆ. ಪಕ್ಷದ ಅಭ್ಯರ್ಥಿಗಳ ಗೆಲ್ಲಿಸಲು ನಾನು ನಾಲ್ಕೈದು ಬಾರಿ ಪ್ರಚಾರಕ್ಕೆ ಬರುತ್ತೇನೆಂದು ಹೇಳಿದ್ದರು. ಈ ಹೇಳಿಕೆ ಇಂದು ಡಿಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror