ಸುದ್ದಿಗಳು

ನಾನು ರಕ್ತದಲ್ಲಿ ಬರೆದು ಕೊಡುತ್ತೇನೆ.. ಕಾಂಗ್ರೆಸ್ 150 ಸ್ಥಾನ ಪಡೆಯಲಿದೆ: ಡಿ.ಕೆ ಶಿವಕುಮಾರ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ, ಇನ್ನು 15 ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

Advertisement
Advertisement

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 40 ಸ್ಥಾನಕ್ಕೆ ನಿಲ್ಲುತ್ತದೆ. ಕಾಂಗ್ರೆಸ್ 150 ಸ್ಥಾನಕ್ಕೆ ಬರುತ್ತದೆ ಎಂದು ವಿಶ್ವಾಸಪಡಿಸಿದರು.

ಯಾರನ್ನೋ ಸೋಲಿಸುವುದೇ ನಿಮ್ಮ ಗುರಿಯೇ? ಬಿಜೆಪಿಯಿಂದ ಯಾರಿಗೆ ಅನುಕೂಲ ಆಗಿದೆ?  ರೈತರು, ವರ್ತಕರು, ಯುವಕರಿಗೆ ಮೋಸ ಮಾಡಿದೆ. ಆದ್ದರಿಂದ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ. ಇದನ್ನು ನಾನು ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ ಎಂದು ತಿರುಗೇಟು ನೀಡಿದರು.

ಲಿಂಗಾಯತ ನಾಯಕರ ಜೊತೆಗೆ ಸಭೆ ಬಳಿಕ ಮಾತನಾಡಿದ್ದ ಯಡಿಯೂಪ್ಪ ಅವರು, ಶೆಟ್ಟರ್’ಗೆ ನಾವು ಏನು ಅನ್ಯಾಯ ಮಾಡಿದ್ದೇವೆ. ವಿಶೇಷ ಕಾರಣಕ್ಕೆ ಅಭ್ಯರ್ಥಿ ಮಾಡಲಾಗುತ್ತಿಲ್ಲ. ಬದಲಾಗಿ ಕೇಂದ್ರದಲ್ಲಿ ಸಚಿವ ಸ್ಥಾನ, ಪತ್ನಿಗೆ ಟಿಕೆಟ್‌ ನೀಡುತ್ತೇವೆಂದು ಹೇಳಿದರೂ ಪಕ್ಷಕ್ಕೆ ದ್ರೋಹ ಎಸಗಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಎಲ್ಲಾ ಅಧಿಕಾರವನ್ನು ನೀಡಿದಾಗಲೂ ಪಕ್ಷಕ್ಕೆ ದ್ರೋಹ ಮಾಡಿ ಕಾಂಗ್ರೆಸ್‌ ಸೇರಿರುವ ಜಗದೀಶ ಶೆಟ್ಟರ ಅವರಿಗೆ ತಕ್ಕಪಾಠ ಕಲಿಸಬೇಕು. ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸಲು ಸಾಧ್ಯವಿಲ್ಲ. ಈ ಬಾರಿ ಶೆಟ್ಟರ್ ಗೆಲ್ಲಲು ಸಾಧ್ಯವಿಲ್ಲ. ಇದನ್ನು ನಾನು ನನ್ನ ರಕ್ತದಲ್ಲಿ ಬರೆದುಕೊಡುತ್ತೇನೆ. ಪಕ್ಷದ ಅಭ್ಯರ್ಥಿಗಳ ಗೆಲ್ಲಿಸಲು ನಾನು ನಾಲ್ಕೈದು ಬಾರಿ ಪ್ರಚಾರಕ್ಕೆ ಬರುತ್ತೇನೆಂದು ಹೇಳಿದ್ದರು. ಈ ಹೇಳಿಕೆ ಇಂದು ಡಿಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

23 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

23 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

23 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

24 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

24 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

24 hours ago