ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ, ಇನ್ನು 15 ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 40 ಸ್ಥಾನಕ್ಕೆ ನಿಲ್ಲುತ್ತದೆ. ಕಾಂಗ್ರೆಸ್ 150 ಸ್ಥಾನಕ್ಕೆ ಬರುತ್ತದೆ ಎಂದು ವಿಶ್ವಾಸಪಡಿಸಿದರು.
ಯಾರನ್ನೋ ಸೋಲಿಸುವುದೇ ನಿಮ್ಮ ಗುರಿಯೇ? ಬಿಜೆಪಿಯಿಂದ ಯಾರಿಗೆ ಅನುಕೂಲ ಆಗಿದೆ? ರೈತರು, ವರ್ತಕರು, ಯುವಕರಿಗೆ ಮೋಸ ಮಾಡಿದೆ. ಆದ್ದರಿಂದ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ. ಇದನ್ನು ನಾನು ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ ಎಂದು ತಿರುಗೇಟು ನೀಡಿದರು.
ಲಿಂಗಾಯತ ನಾಯಕರ ಜೊತೆಗೆ ಸಭೆ ಬಳಿಕ ಮಾತನಾಡಿದ್ದ ಯಡಿಯೂಪ್ಪ ಅವರು, ಶೆಟ್ಟರ್’ಗೆ ನಾವು ಏನು ಅನ್ಯಾಯ ಮಾಡಿದ್ದೇವೆ. ವಿಶೇಷ ಕಾರಣಕ್ಕೆ ಅಭ್ಯರ್ಥಿ ಮಾಡಲಾಗುತ್ತಿಲ್ಲ. ಬದಲಾಗಿ ಕೇಂದ್ರದಲ್ಲಿ ಸಚಿವ ಸ್ಥಾನ, ಪತ್ನಿಗೆ ಟಿಕೆಟ್ ನೀಡುತ್ತೇವೆಂದು ಹೇಳಿದರೂ ಪಕ್ಷಕ್ಕೆ ದ್ರೋಹ ಎಸಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಎಲ್ಲಾ ಅಧಿಕಾರವನ್ನು ನೀಡಿದಾಗಲೂ ಪಕ್ಷಕ್ಕೆ ದ್ರೋಹ ಮಾಡಿ ಕಾಂಗ್ರೆಸ್ ಸೇರಿರುವ ಜಗದೀಶ ಶೆಟ್ಟರ ಅವರಿಗೆ ತಕ್ಕಪಾಠ ಕಲಿಸಬೇಕು. ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸಲು ಸಾಧ್ಯವಿಲ್ಲ. ಈ ಬಾರಿ ಶೆಟ್ಟರ್ ಗೆಲ್ಲಲು ಸಾಧ್ಯವಿಲ್ಲ. ಇದನ್ನು ನಾನು ನನ್ನ ರಕ್ತದಲ್ಲಿ ಬರೆದುಕೊಡುತ್ತೇನೆ. ಪಕ್ಷದ ಅಭ್ಯರ್ಥಿಗಳ ಗೆಲ್ಲಿಸಲು ನಾನು ನಾಲ್ಕೈದು ಬಾರಿ ಪ್ರಚಾರಕ್ಕೆ ಬರುತ್ತೇನೆಂದು ಹೇಳಿದ್ದರು. ಈ ಹೇಳಿಕೆ ಇಂದು ಡಿಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…