ಸುದ್ದಿಗಳು

ನಾ.ಕಾರಂತ ಪೆರಾಜೆಯವರ ‘ಗುಡ್ಡದ ಜೀವಕ್ಕೆ ಪದ್ಮಶ್ರೀ ಬಾಗಿನ’ ಲೇಖನಕ್ಕೆ ಪ್ರಶಸ್ತಿ

Share

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಪತ್ರಕರ್ತ, ಲೇಖಕ ನಾ. ಕಾರಂತ ಪೆರಾಜೆಯವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮುಂದೆ ಓದಿ

Advertisement

ಪ್ರಶಸ್ತಿಗೆ ಸುಧಾ ಸಾಪ್ತಾಹಿಕದಲ್ಲಿ ಪ್ರಕಟವಾದ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಅವರ ವ್ಯಕ್ತಿಚಿತ್ರ ‘ಗುಡ್ಡದ ಜೀವಕ್ಕೆ ಪದ್ಮಶ್ರೀ ಬಾಗಿನ’ ಲೇಖನವು ಆಯ್ಕೆಯಾಗಿದೆ. ಫೆಬ್ರವರಿ 3, 4 ರಂದು ದಾವಣಗೆರೆಯಲ್ಲಿ ನಡೆಯುವ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ರಾಜ್ಯದ ಐವತ್ತರಷ್ಟು ಪತ್ರಕರ್ತರು ವಿವಿಧ ಪ್ರಶಸ್ತಿಗಳಿಗೆ ಆಯ್ಕೆಯಾಗಿರುತ್ತಾರೆ.
2023ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಆಯೋಜಿಸುವ ‘ಬ್ರ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ನಾ. ಕಾರಂತ ಪೆರಾಜೆಯವರ ‘ಗಾಂಧಿ ಭಾರತ, ಗ್ರಾಮ ಭಾರತ’ ಲೇಖನವು ಆಯ್ಕೆಯಾಗಿತ್ತು.ಮುಂದೆ ಓದಿ

ನಾ. ಕಾರಂತ ಪೆರಾಜೆಯವರು ಕೃಷಿ ಮಾಸಿಕ ‘ಅಡಿಕೆ ಪತ್ರಿಕೆ’ಯಲ್ಲಿ ಸಹಾಯಕ ಸಂಪಾದಕರು. ನಾಡಿನ ವಿವಿಧ ಪತ್ರಿಕೆಗಳಲ್ಲಿ ಅಂಕಣಕಾರರು. ಕೃಷಿ ಹಾಗೂ ಯಕ್ಷಗಾನ ಕುರಿತಾಗಿ ಐವತ್ತರಷ್ಟು ಕೃತಿಗಳು ಪ್ರಕಟವಾಗಿವೆ. ಯಕ್ಷಗಾನಕ್ಕೆ ಸಂಬಂಧಪಟ್ಟಂತೆ ‘ಸಾಮಗ ಪಡಿದನಿ’ ಕೃತಿಗೆ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯು ಪ್ರಶಸ್ತಿ, 2012ರಲ್ಲಿ ಕರ್ನಾಟಕ ಸರಕಾರದ ‘ಪರಿಸರ ಪತ್ರಿಕೋದ್ಯಮ ಪ್ರಶಸ್ತಿ’, ಗ್ರಾಮೀಣ ಪತ್ರಿಕೋದ್ಯಮ ವಿಭಾಗದಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ, ಪ.ಗೋ.ಪ್ರಶಸ್ತಿ, ಲ್ಯಾಡ್ಲಿ ಮೀಡಿಯಾ ಪ್ರಶಸ್ತಿ, ಕೃಷಿ ಮಾಧ್ಯಮ ಕೇಂದ್ರದ ಪ್ರಶಸ್ತಿ.. ಹೀಗೆ ಅನ್ಯಾನ್ಯ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಪದ್ಮಶ್ರೀ ಹರೇಕಳ ಹಾಜಬ್ಬರ ಸಾಧನೆಯ ‘ಅಕ್ಷರ ಯೋಗಿಯ ನೋಡಲ್ಲಿ’ ಲೇಖನವು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ಹಾಗೂ ದಾವಣಗೆರೆ ವಿಶ್ವವಿದ್ಯಾಲಯಗಳ ವಾಣಿಜ್ಯ ವಿಭಾಗದ ಕನ್ನಡ ಪಠ್ಯದಲ್ಲಿ ಸೇರಿದ್ದುವು. ಅಲ್ಲದೆ ಎರಡು ಕೃಷಿ ಸಂಬಂಧಿ ಲೇಖನಗಳು ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಸೇರ್ಪಡೆಗೊಂಡಿದ್ದವು. ನಾ. ಕಾರಂತರು 2017ರಲ್ಲಿ ಪುತ್ತೂರು ತಾಲೂಕು ಹದಿನೇಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಶಾರದಾ ಮಠವು…

4 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.  ಮಂಡ್ಯ ಜಿಲ್ಲೆಯ…

4 hours ago

ಜೀವನ ಪೂರ್ತಿ ಈ ರಾಶಿಯವರ ಮೇಲಿರುವುದು ಗುರು ಬಲ !

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

21 hours ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

1 day ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

1 day ago