Advertisement
ಸುದ್ದಿಗಳು

ನಾ.ಕಾರಂತ ಪೆರಾಜೆಯವರ ‘ಗುಡ್ಡದ ಜೀವಕ್ಕೆ ಪದ್ಮಶ್ರೀ ಬಾಗಿನ’ ಲೇಖನಕ್ಕೆ ಪ್ರಶಸ್ತಿ

Share

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಪತ್ರಕರ್ತ, ಲೇಖಕ ನಾ. ಕಾರಂತ ಪೆರಾಜೆಯವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮುಂದೆ ಓದಿ

ಪ್ರಶಸ್ತಿಗೆ ಸುಧಾ ಸಾಪ್ತಾಹಿಕದಲ್ಲಿ ಪ್ರಕಟವಾದ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಅವರ ವ್ಯಕ್ತಿಚಿತ್ರ ‘ಗುಡ್ಡದ ಜೀವಕ್ಕೆ ಪದ್ಮಶ್ರೀ ಬಾಗಿನ’ ಲೇಖನವು ಆಯ್ಕೆಯಾಗಿದೆ. ಫೆಬ್ರವರಿ 3, 4 ರಂದು ದಾವಣಗೆರೆಯಲ್ಲಿ ನಡೆಯುವ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ರಾಜ್ಯದ ಐವತ್ತರಷ್ಟು ಪತ್ರಕರ್ತರು ವಿವಿಧ ಪ್ರಶಸ್ತಿಗಳಿಗೆ ಆಯ್ಕೆಯಾಗಿರುತ್ತಾರೆ.
2023ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಆಯೋಜಿಸುವ ‘ಬ್ರ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ನಾ. ಕಾರಂತ ಪೆರಾಜೆಯವರ ‘ಗಾಂಧಿ ಭಾರತ, ಗ್ರಾಮ ಭಾರತ’ ಲೇಖನವು ಆಯ್ಕೆಯಾಗಿತ್ತು.ಮುಂದೆ ಓದಿ

ನಾ. ಕಾರಂತ ಪೆರಾಜೆಯವರು ಕೃಷಿ ಮಾಸಿಕ ‘ಅಡಿಕೆ ಪತ್ರಿಕೆ’ಯಲ್ಲಿ ಸಹಾಯಕ ಸಂಪಾದಕರು. ನಾಡಿನ ವಿವಿಧ ಪತ್ರಿಕೆಗಳಲ್ಲಿ ಅಂಕಣಕಾರರು. ಕೃಷಿ ಹಾಗೂ ಯಕ್ಷಗಾನ ಕುರಿತಾಗಿ ಐವತ್ತರಷ್ಟು ಕೃತಿಗಳು ಪ್ರಕಟವಾಗಿವೆ. ಯಕ್ಷಗಾನಕ್ಕೆ ಸಂಬಂಧಪಟ್ಟಂತೆ ‘ಸಾಮಗ ಪಡಿದನಿ’ ಕೃತಿಗೆ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯು ಪ್ರಶಸ್ತಿ, 2012ರಲ್ಲಿ ಕರ್ನಾಟಕ ಸರಕಾರದ ‘ಪರಿಸರ ಪತ್ರಿಕೋದ್ಯಮ ಪ್ರಶಸ್ತಿ’, ಗ್ರಾಮೀಣ ಪತ್ರಿಕೋದ್ಯಮ ವಿಭಾಗದಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ, ಪ.ಗೋ.ಪ್ರಶಸ್ತಿ, ಲ್ಯಾಡ್ಲಿ ಮೀಡಿಯಾ ಪ್ರಶಸ್ತಿ, ಕೃಷಿ ಮಾಧ್ಯಮ ಕೇಂದ್ರದ ಪ್ರಶಸ್ತಿ.. ಹೀಗೆ ಅನ್ಯಾನ್ಯ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಪದ್ಮಶ್ರೀ ಹರೇಕಳ ಹಾಜಬ್ಬರ ಸಾಧನೆಯ ‘ಅಕ್ಷರ ಯೋಗಿಯ ನೋಡಲ್ಲಿ’ ಲೇಖನವು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ಹಾಗೂ ದಾವಣಗೆರೆ ವಿಶ್ವವಿದ್ಯಾಲಯಗಳ ವಾಣಿಜ್ಯ ವಿಭಾಗದ ಕನ್ನಡ ಪಠ್ಯದಲ್ಲಿ ಸೇರಿದ್ದುವು. ಅಲ್ಲದೆ ಎರಡು ಕೃಷಿ ಸಂಬಂಧಿ ಲೇಖನಗಳು ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಸೇರ್ಪಡೆಗೊಂಡಿದ್ದವು. ನಾ. ಕಾರಂತರು 2017ರಲ್ಲಿ ಪುತ್ತೂರು ತಾಲೂಕು ಹದಿನೇಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

5 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

13 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago