ಕೃಷಿ ಮಾಸಿಕ ಅಡಿಕೆ ಪತ್ರಿಕೆಯ ಸಹ ಸಂಪಾದಕ, ಅಂಕಣಗಾರ, ನಾ. ಕಾರಂತ ಪೆರಾಜೆಯವರ ಎರಡು ಕೃಷಿ ಸಂಬಂಧಿ ಲೇಖನಗಳು ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಸೇರ್ಪಡೆಗೊಂಡಿದೆ. ಈ ಲೇಖನಗಳು ಉದಯವಾಣಿಯ ‘ನೆಲದ ನಾಡಿ’ ಅಂಕಣ ಹಾಗೂ ‘ತರಂಗ’ದಲ್ಲಿ ಪ್ರಕಟವಾದಂತಹುಗಳು.
ಬಿ.ಎಚ್.ಎಂ.ಪ್ರಥಮ ಸೆಮಿಸ್ಟರ್ – ಭಾಷಾ ಕನ್ನಡ ಪಠ್ಯದಲ್ಲಿ ‘ಆಹಾರ ಸಂರಕ್ಷಣೆಯಿಂದ ಬದುಕಿಗೆ ಭದ್ರತೆ’ (ಉದಯವಾಣಿ) ಎನ್ನುವ ಲೇಖನ. ನಮ್ಮ ಹಿರಿಯರ ಆಹಾರ ಸಂರಕ್ಷಣಾ ವಿಧಾನದ ಸುತ್ತ ಹೆಣೆದ ಬರಹವಿದು. ಹಲಸು, ಮಾವು, ಬಾಳೆಹಣ್ಣು, ಭತ್ತ.. ಮೊದಲಾದವುಗಳ ಸಂರಕ್ಷಣೆ, ಅವುಗಳ ಮೌಲ್ಯವರ್ಧನೆಗಳು ಹಳ್ಳಿ ಬದುಕಿನಲ್ಲಿ ಸಹಜವಾಗಿ ಹಾಸುಹೊಕ್ಕಾದ ಕಾಲಘಟ್ಟವನ್ನು ಕಾರಂತರು ಲೇಖನದಲ್ಲಿ ವಿವರಿಸಿದ್ದರು. ಒಂದು ಕಾಲಘಟ್ಟದಲ್ಲಿ ಬದುಕನ್ನು ಆಧರಿಸಿದ ಹಲಸು, ಹಲಸಿನ ಹಣ್ಣು, ಹಲಸಿನ ಕಾಯಿಯ ಉಪ್ಪುಸೊಳೆ, ಪಲ್ಯ, ವಿವಿಧ ಖಾದ್ಯಗಳ ಪರಿಚಯ; ಕಾಡುಮಾವಿನ ಮಾಂಬಳ ತಯಾರಿ, ಹಲಸಿನ ಹಣ್ಣಿನ ಬೆರಟ್ಟಿ, ಹಸಿಮೆಣಸಿನ ಮಜ್ಜಿಗೆ ಮೆಣಸು, ಬಾಳೆಹಣ್ಣಿನ ಸುಕೇಳಿ, ಪುನರ್ಪುಳಿ ಮಂದಸಾರ ಹಾಗೂ ಸಿಪ್ಪೆಯ ಬಳಕೆ, ಅಕ್ಕಿ ಮುಡಿಯ ಬಳಕೆ.. ಇವೆಲ್ಲಾ ಅಲಿಖಿತ ಹಳ್ಳಿ ತಂತ್ರಜ್ಞಾನದಲ್ಲಿ ಕಾಪಾಡಲ್ಪಟ್ಟವುಗಳು. ಯಾವುದೇ ಕೃತಕ ಸಂರಕ್ಷಕಗಳನ್ನು ಬಳಸದ ಹಳ್ಳಿ ಜ್ಞಾನ.
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…