ಕೃಷಿ ಮಾಸಿಕ ಅಡಿಕೆ ಪತ್ರಿಕೆಯ ಸಹ ಸಂಪಾದಕ, ಅಂಕಣಗಾರ, ನಾ. ಕಾರಂತ ಪೆರಾಜೆಯವರ ಎರಡು ಕೃಷಿ ಸಂಬಂಧಿ ಲೇಖನಗಳು ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಸೇರ್ಪಡೆಗೊಂಡಿದೆ. ಈ ಲೇಖನಗಳು ಉದಯವಾಣಿಯ ‘ನೆಲದ ನಾಡಿ’ ಅಂಕಣ ಹಾಗೂ ‘ತರಂಗ’ದಲ್ಲಿ ಪ್ರಕಟವಾದಂತಹುಗಳು.
ಬಿ.ಎಚ್.ಎಂ.ಪ್ರಥಮ ಸೆಮಿಸ್ಟರ್ – ಭಾಷಾ ಕನ್ನಡ ಪಠ್ಯದಲ್ಲಿ ‘ಆಹಾರ ಸಂರಕ್ಷಣೆಯಿಂದ ಬದುಕಿಗೆ ಭದ್ರತೆ’ (ಉದಯವಾಣಿ) ಎನ್ನುವ ಲೇಖನ. ನಮ್ಮ ಹಿರಿಯರ ಆಹಾರ ಸಂರಕ್ಷಣಾ ವಿಧಾನದ ಸುತ್ತ ಹೆಣೆದ ಬರಹವಿದು. ಹಲಸು, ಮಾವು, ಬಾಳೆಹಣ್ಣು, ಭತ್ತ.. ಮೊದಲಾದವುಗಳ ಸಂರಕ್ಷಣೆ, ಅವುಗಳ ಮೌಲ್ಯವರ್ಧನೆಗಳು ಹಳ್ಳಿ ಬದುಕಿನಲ್ಲಿ ಸಹಜವಾಗಿ ಹಾಸುಹೊಕ್ಕಾದ ಕಾಲಘಟ್ಟವನ್ನು ಕಾರಂತರು ಲೇಖನದಲ್ಲಿ ವಿವರಿಸಿದ್ದರು. ಒಂದು ಕಾಲಘಟ್ಟದಲ್ಲಿ ಬದುಕನ್ನು ಆಧರಿಸಿದ ಹಲಸು, ಹಲಸಿನ ಹಣ್ಣು, ಹಲಸಿನ ಕಾಯಿಯ ಉಪ್ಪುಸೊಳೆ, ಪಲ್ಯ, ವಿವಿಧ ಖಾದ್ಯಗಳ ಪರಿಚಯ; ಕಾಡುಮಾವಿನ ಮಾಂಬಳ ತಯಾರಿ, ಹಲಸಿನ ಹಣ್ಣಿನ ಬೆರಟ್ಟಿ, ಹಸಿಮೆಣಸಿನ ಮಜ್ಜಿಗೆ ಮೆಣಸು, ಬಾಳೆಹಣ್ಣಿನ ಸುಕೇಳಿ, ಪುನರ್ಪುಳಿ ಮಂದಸಾರ ಹಾಗೂ ಸಿಪ್ಪೆಯ ಬಳಕೆ, ಅಕ್ಕಿ ಮುಡಿಯ ಬಳಕೆ.. ಇವೆಲ್ಲಾ ಅಲಿಖಿತ ಹಳ್ಳಿ ತಂತ್ರಜ್ಞಾನದಲ್ಲಿ ಕಾಪಾಡಲ್ಪಟ್ಟವುಗಳು. ಯಾವುದೇ ಕೃತಕ ಸಂರಕ್ಷಕಗಳನ್ನು ಬಳಸದ ಹಳ್ಳಿ ಜ್ಞಾನ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…