ಕೃಷಿ ಮಾಸಿಕ ಅಡಿಕೆ ಪತ್ರಿಕೆಯ ಸಹ ಸಂಪಾದಕ, ಅಂಕಣಗಾರ, ನಾ. ಕಾರಂತ ಪೆರಾಜೆಯವರ ಎರಡು ಕೃಷಿ ಸಂಬಂಧಿ ಲೇಖನಗಳು ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಸೇರ್ಪಡೆಗೊಂಡಿದೆ. ಈ ಲೇಖನಗಳು ಉದಯವಾಣಿಯ ‘ನೆಲದ ನಾಡಿ’ ಅಂಕಣ ಹಾಗೂ ‘ತರಂಗ’ದಲ್ಲಿ ಪ್ರಕಟವಾದಂತಹುಗಳು.
ಬಿ.ಎಚ್.ಎಂ.ಪ್ರಥಮ ಸೆಮಿಸ್ಟರ್ – ಭಾಷಾ ಕನ್ನಡ ಪಠ್ಯದಲ್ಲಿ ‘ಆಹಾರ ಸಂರಕ್ಷಣೆಯಿಂದ ಬದುಕಿಗೆ ಭದ್ರತೆ’ (ಉದಯವಾಣಿ) ಎನ್ನುವ ಲೇಖನ. ನಮ್ಮ ಹಿರಿಯರ ಆಹಾರ ಸಂರಕ್ಷಣಾ ವಿಧಾನದ ಸುತ್ತ ಹೆಣೆದ ಬರಹವಿದು. ಹಲಸು, ಮಾವು, ಬಾಳೆಹಣ್ಣು, ಭತ್ತ.. ಮೊದಲಾದವುಗಳ ಸಂರಕ್ಷಣೆ, ಅವುಗಳ ಮೌಲ್ಯವರ್ಧನೆಗಳು ಹಳ್ಳಿ ಬದುಕಿನಲ್ಲಿ ಸಹಜವಾಗಿ ಹಾಸುಹೊಕ್ಕಾದ ಕಾಲಘಟ್ಟವನ್ನು ಕಾರಂತರು ಲೇಖನದಲ್ಲಿ ವಿವರಿಸಿದ್ದರು. ಒಂದು ಕಾಲಘಟ್ಟದಲ್ಲಿ ಬದುಕನ್ನು ಆಧರಿಸಿದ ಹಲಸು, ಹಲಸಿನ ಹಣ್ಣು, ಹಲಸಿನ ಕಾಯಿಯ ಉಪ್ಪುಸೊಳೆ, ಪಲ್ಯ, ವಿವಿಧ ಖಾದ್ಯಗಳ ಪರಿಚಯ; ಕಾಡುಮಾವಿನ ಮಾಂಬಳ ತಯಾರಿ, ಹಲಸಿನ ಹಣ್ಣಿನ ಬೆರಟ್ಟಿ, ಹಸಿಮೆಣಸಿನ ಮಜ್ಜಿಗೆ ಮೆಣಸು, ಬಾಳೆಹಣ್ಣಿನ ಸುಕೇಳಿ, ಪುನರ್ಪುಳಿ ಮಂದಸಾರ ಹಾಗೂ ಸಿಪ್ಪೆಯ ಬಳಕೆ, ಅಕ್ಕಿ ಮುಡಿಯ ಬಳಕೆ.. ಇವೆಲ್ಲಾ ಅಲಿಖಿತ ಹಳ್ಳಿ ತಂತ್ರಜ್ಞಾನದಲ್ಲಿ ಕಾಪಾಡಲ್ಪಟ್ಟವುಗಳು. ಯಾವುದೇ ಕೃತಕ ಸಂರಕ್ಷಕಗಳನ್ನು ಬಳಸದ ಹಳ್ಳಿ ಜ್ಞಾನ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…