Advertisement
ಮಾಹಿತಿ

ನಬಾರ್ಡ್ ನಿಂದ ಕೋಳಿ ಫಾರಂ ಸ್ಥಾಪನೆಗಾಗಿ ಶೇ.33 ರಷ್ಟು ಸಬ್ಸಿಡಿ

Share

ರಾಷ್ಟ್ರೀಯ ಜಾನುವಾರು ಮಿಷನ್ ಉದ್ಯಮಶೀಲತೆ ಅಭಿವೃದ್ಧಿ ಮತ್ತು ಉದ್ಯೋಗ ಯೋಜನೆಯ ಮೂಲಕ ಕೋಳಿ ಸಾಕಣೆಗೆ ಪರೋಕ್ಷ ಬಂಡವಾಳ ಸಹಾಯಧನವನ್ನು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ( ನಬಾರ್ಡ್) ಒದಗಿಸುತ್ತಿದೆ. ಅಂದರೆ ರೈತರು ವಾಣಿಜ್ಯ ಬ್ಯಾಂಕ್‍ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳು ಅಥವಾ ಸಹಕಾರಿ ಬ್ಯಾಂಕ್‍ಗಳಂತಹ ಸಾಲ ನೀಡು ಸಂಸ್ಥೆಗಳ ಮೂಲಕ ಅರ್ಜಿ ಸಲ್ಲಿಸಿ, ಸಾಲವನ್ನು ಮಂಜೂರು ಮಾಡಿ ಬ್ಯಾಂಕಿನಿಂದ ವಿತರಿಸಿದ ನಂತರ ಮತ್ತು ಯೋಜನೆಯನ್ನು ಅನುಷ್ಠಾನಗೊಳಿಸಿದ ನಂತರ ಈ ಸಬ್ಸಿಡಿಯನ್ನು ಸಾಲದ ಖಾತೆಗೆ ಜಮಾ ಮಾಡಲಾಗುತ್ತದೆ.

ಈ ಸಬ್ಸಿಡಿಯು ಸಾಮಾನ್ಯ ವರ್ಗದವರಿಗೆ ಒಟ್ಟು ಯೋಜನಾ ವೆಚ್ಚದ ಶೇ.25 ರಷ್ಟಿದ್ದರೆ, ಪರಿಶಿಷ್ಟ ಜಾತಿ/ ಪಂಗಡದವರಿಗೆ ಶೇ.33.33 ರಷ್ಟು ಲಭ್ಯವಿರುತ್ತದೆ, ಸಬ್ಸಿಡಿಗೆ ಅರ್ಹರಾಗಲು ರೈತರು ಯೋಜನಾ ವೆಚ್ಚದ ಕನಿಷ್ಠ ಶೇ.40ರಷ್ಟಾದರೂ ಬ್ಯಾಂಕ್ ಸಾಲವನ್ನು ಪಡೆದಿರಬೇಕು.

ಅಗತ್ಯ ದಾಖಲೆಗಳು:

  • ಗುರುತು ಮತ್ತು ವಿಳಾಸದ ಪುರಾವೆ
  • ಪಾಸ್‍ಫೋರ್ಟ್ ಮತ್ತು ಅಳತೆಯ ಭಾವಚಿತ್ರ
  • ಯೋಜನೆಯ ಸಂಪೂರ್ಣ ವಿವರಗಳು
  • ಆದಾಯದ ಪುರಾವೆ

ಅರ್ಜಿ ಸಲ್ಲಿಸುವ ವಿಧಾನ:

  • ನಿಮ್ಮ ಸ್ಥಳೀಯ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್, ಸಹಾಕಾರಿ ಬ್ಯಾಂಕ್, ಅಥವಾ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಬೆಂಬಲಿತ ಕೋಳಿ ಸಾಕಾಣಿಕೆ ಸಾಲಗಳನ್ನು ನೀಡುವ ಯಾವುದೇ ಬ್ಯಾಂಕ್ ಅನ್ನು ಗುರುತಿಸಿಕೊಳ್ಳಬೇಕು.
  • ಎಲ್ಲಾ ಆರ್ಥಿಕ ಮತ್ತು ತಾಂತ್ರಿಕ ಅಂಶಗಳೊಂದಿಗೆ ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಿಕೊಂಡು ನಿಮ್ಮ ಕೆವೈಸಿ ದಾಖಲೆಗಳ ಜೊತೆಗೆ ಬ್ಯಾಂಕಿಗೆ ಸಾಲದ ಅರ್ಜಿಯನ್ನು ಸಲ್ಲಿಸಿ.
  • ಬ್ಯಾಂಕ್ ನಿಮ್ಮ ಸಾಲವನ್ನು ಪ್ರಕ್ರಿಯೆಗೊಳಿಸಿ, ಪುನರ್ಧನ ಮತ್ತು ಸಬ್ಸಿಡಿಗಾಗಿ ನರ್ಬಾಡ್ ಗೆ ಅರ್ಜಿಯನ್ನು ಸಲ್ಲಿಸುತ್ತದೆ.
  • ಸಾಲದ ಅನುಮೋದನೆಯ ನಂತರ, ಯೋಜನೆಯ ಮಾರ್ಗಸೂಚಿಗಳ ಪ್ರಕಾರ ಸಬ್ಸಿಡಿ ಮೊತ್ತವನ್ನು ನಿಮ್ಮ ಸಾಲದ ಖಾತೆಗೆ ಜಮಾ ಮಾಡಲಾಗುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

3 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

10 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

18 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

19 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

21 hours ago