Advertisement
ಮಾಹಿತಿ

ನಬಾರ್ಡ್ ನಿಂದ ಕೋಳಿ ಫಾರಂ ಸ್ಥಾಪನೆಗಾಗಿ ಶೇ.33 ರಷ್ಟು ಸಬ್ಸಿಡಿ

Share

ರಾಷ್ಟ್ರೀಯ ಜಾನುವಾರು ಮಿಷನ್ ಉದ್ಯಮಶೀಲತೆ ಅಭಿವೃದ್ಧಿ ಮತ್ತು ಉದ್ಯೋಗ ಯೋಜನೆಯ ಮೂಲಕ ಕೋಳಿ ಸಾಕಣೆಗೆ ಪರೋಕ್ಷ ಬಂಡವಾಳ ಸಹಾಯಧನವನ್ನು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ( ನಬಾರ್ಡ್) ಒದಗಿಸುತ್ತಿದೆ. ಅಂದರೆ ರೈತರು ವಾಣಿಜ್ಯ ಬ್ಯಾಂಕ್‍ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳು ಅಥವಾ ಸಹಕಾರಿ ಬ್ಯಾಂಕ್‍ಗಳಂತಹ ಸಾಲ ನೀಡು ಸಂಸ್ಥೆಗಳ ಮೂಲಕ ಅರ್ಜಿ ಸಲ್ಲಿಸಿ, ಸಾಲವನ್ನು ಮಂಜೂರು ಮಾಡಿ ಬ್ಯಾಂಕಿನಿಂದ ವಿತರಿಸಿದ ನಂತರ ಮತ್ತು ಯೋಜನೆಯನ್ನು ಅನುಷ್ಠಾನಗೊಳಿಸಿದ ನಂತರ ಈ ಸಬ್ಸಿಡಿಯನ್ನು ಸಾಲದ ಖಾತೆಗೆ ಜಮಾ ಮಾಡಲಾಗುತ್ತದೆ.

ಈ ಸಬ್ಸಿಡಿಯು ಸಾಮಾನ್ಯ ವರ್ಗದವರಿಗೆ ಒಟ್ಟು ಯೋಜನಾ ವೆಚ್ಚದ ಶೇ.25 ರಷ್ಟಿದ್ದರೆ, ಪರಿಶಿಷ್ಟ ಜಾತಿ/ ಪಂಗಡದವರಿಗೆ ಶೇ.33.33 ರಷ್ಟು ಲಭ್ಯವಿರುತ್ತದೆ, ಸಬ್ಸಿಡಿಗೆ ಅರ್ಹರಾಗಲು ರೈತರು ಯೋಜನಾ ವೆಚ್ಚದ ಕನಿಷ್ಠ ಶೇ.40ರಷ್ಟಾದರೂ ಬ್ಯಾಂಕ್ ಸಾಲವನ್ನು ಪಡೆದಿರಬೇಕು.

ಅಗತ್ಯ ದಾಖಲೆಗಳು:

  • ಗುರುತು ಮತ್ತು ವಿಳಾಸದ ಪುರಾವೆ
  • ಪಾಸ್‍ಫೋರ್ಟ್ ಮತ್ತು ಅಳತೆಯ ಭಾವಚಿತ್ರ
  • ಯೋಜನೆಯ ಸಂಪೂರ್ಣ ವಿವರಗಳು
  • ಆದಾಯದ ಪುರಾವೆ

ಅರ್ಜಿ ಸಲ್ಲಿಸುವ ವಿಧಾನ:

  • ನಿಮ್ಮ ಸ್ಥಳೀಯ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್, ಸಹಾಕಾರಿ ಬ್ಯಾಂಕ್, ಅಥವಾ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಬೆಂಬಲಿತ ಕೋಳಿ ಸಾಕಾಣಿಕೆ ಸಾಲಗಳನ್ನು ನೀಡುವ ಯಾವುದೇ ಬ್ಯಾಂಕ್ ಅನ್ನು ಗುರುತಿಸಿಕೊಳ್ಳಬೇಕು.
  • ಎಲ್ಲಾ ಆರ್ಥಿಕ ಮತ್ತು ತಾಂತ್ರಿಕ ಅಂಶಗಳೊಂದಿಗೆ ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಿಕೊಂಡು ನಿಮ್ಮ ಕೆವೈಸಿ ದಾಖಲೆಗಳ ಜೊತೆಗೆ ಬ್ಯಾಂಕಿಗೆ ಸಾಲದ ಅರ್ಜಿಯನ್ನು ಸಲ್ಲಿಸಿ.
  • ಬ್ಯಾಂಕ್ ನಿಮ್ಮ ಸಾಲವನ್ನು ಪ್ರಕ್ರಿಯೆಗೊಳಿಸಿ, ಪುನರ್ಧನ ಮತ್ತು ಸಬ್ಸಿಡಿಗಾಗಿ ನರ್ಬಾಡ್ ಗೆ ಅರ್ಜಿಯನ್ನು ಸಲ್ಲಿಸುತ್ತದೆ.
  • ಸಾಲದ ಅನುಮೋದನೆಯ ನಂತರ, ಯೋಜನೆಯ ಮಾರ್ಗಸೂಚಿಗಳ ಪ್ರಕಾರ ಸಬ್ಸಿಡಿ ಮೊತ್ತವನ್ನು ನಿಮ್ಮ ಸಾಲದ ಖಾತೆಗೆ ಜಮಾ ಮಾಡಲಾಗುತ್ತದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

55 minutes ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

13 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

23 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

1 day ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

2 days ago