ಮೇ. 8 | ಪುತ್ತೂರಿನಲ್ಲಿ ನಾದ ವೈಭವಂ | ಸಂದೀಪ್‌ ನಾರಾಯಣ್‌ ಅವರಿಂದ ಸಂಗೀತ ಕಛೇರಿ |

May 7, 2022
11:07 AM

ಸುನಾದ ಸಂಗೀತ ಕಲಾ ಶಾಲೆಯ ಶಿಷ್ಯ ವೃಂದದ ವತಿಯಿಂದ ಮೇ.8 ರಂದು ಭಾನುವಾರ  ಪುತ್ತೂರಿನ ಸುದಾನ ವಸತಿಯುತ ಶಾಲಾ ಆವರಣದಲ್ಲಿ ನಾದ ವೈಭವಂ  ನಡೆಯಲಿದೆ. ಕಾರ್ಯಕ್ರಮದಲ್ಲಿ ವಿದ್ವಾನ್‌ ಸಂದೀಪ್‌  ನಾರಾಯಣ್‌ ಅವರಿಂದ ಹಾಡುಗಾರಿಕೆ ನಡೆಯಲಿದೆ.

ವಿದ್ವಾನ್‌ ಸಂದೀಪ್‌ ನಾರಾಯಣ್

ಸಂಜೆ 5.30  ರಿಂದ ನಡೆಯುವ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡುವರು. ಸಭಾಧ್ಯಕ್ಷತೆಯನ್ನು  ಹಿರಿಯ ನ್ಯಾಯವಾದಿ ಕೆ ಆರ್‌ ಆಚಾರ್ಯ ವಹಿಸುವರು. ಸುನಾದ ಸಂಗೀತ ಕಲಾ ಶಾಲೆಯ ನಿರ್ದೇಶಕ ವಿದ್ವಾನ್‌ ಕಾಂಚನ ಈಶ್ವರ ಭಟ್‌, ನಾದ ವೈಭವಂ ಅಧ್ಯಕ್ಷ ಪ್ರಕಾಶ್‌ ಹಾಸನಡ್ಕ ವೇದಿಕೆಯಲ್ಲಿ ಉಪಸ್ಥಿತರಿರುವರು.

ಬಳಿಕ ನಡೆಯುವ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ವಿದ್ವಾನ್‌ ಸಂದೀಪ್‌  ನಾರಾಯಣ್‌ ಅವರಿಂದ ಹಾಡುಗಾರಿಕೆ ನಡೆಯಲಿದೆ.ವಯಲಿನ್‌ನಲ್ಲಿ  ವಿದ್ವಾನ್‌ ಮೈಸೂರು ವಿ ಶ್ರೀಕಾಂತ್‌ , ಮೃದಂಗದಲ್ಲಿ ವಿದ್ವಾನ್‌ ಕಾಂಚನ ಈಶ್ವರ ಭಟ್‌, ಘಟಂ ನಲ್ಲಿ ವಿದ್ವಾನ್‌ ಉಡುಪಿ ಶ್ರೀಧರ್‌ ಭಾಗವಹಿಸುವರು ಎಂದು ನಾದ ವೈಭವಂ ಪ್ರಕಟಣೆ ತಿಳಿಸಿದೆ.

ವಿದ್ವಾನ್‌ ಸಂದೀಪ್‌ ನಾರಾಯಣ್‌ ಅವರ ಸಂಗೀತ ಕಛೇರಿಯ ಯೂಟ್ಯೂಬ್‌ ಕಡತ ವಿಡಿಯೋ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror