ಸುನಾದ ಸಂಗೀತ ಕಲಾ ಶಾಲೆಯ ಶಿಷ್ಯ ವೃಂದದ ವತಿಯಿಂದ ಮೇ.8 ರಂದು ಭಾನುವಾರ ಪುತ್ತೂರಿನ ಸುದಾನ ವಸತಿಯುತ ಶಾಲಾ ಆವರಣದಲ್ಲಿ ನಾದ ವೈಭವಂ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿದ್ವಾನ್ ಸಂದೀಪ್ ನಾರಾಯಣ್ ಅವರಿಂದ ಹಾಡುಗಾರಿಕೆ ನಡೆಯಲಿದೆ.
ಸಂಜೆ 5.30 ರಿಂದ ನಡೆಯುವ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡುವರು. ಸಭಾಧ್ಯಕ್ಷತೆಯನ್ನು ಹಿರಿಯ ನ್ಯಾಯವಾದಿ ಕೆ ಆರ್ ಆಚಾರ್ಯ ವಹಿಸುವರು. ಸುನಾದ ಸಂಗೀತ ಕಲಾ ಶಾಲೆಯ ನಿರ್ದೇಶಕ ವಿದ್ವಾನ್ ಕಾಂಚನ ಈಶ್ವರ ಭಟ್, ನಾದ ವೈಭವಂ ಅಧ್ಯಕ್ಷ ಪ್ರಕಾಶ್ ಹಾಸನಡ್ಕ ವೇದಿಕೆಯಲ್ಲಿ ಉಪಸ್ಥಿತರಿರುವರು.
ಬಳಿಕ ನಡೆಯುವ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ವಿದ್ವಾನ್ ಸಂದೀಪ್ ನಾರಾಯಣ್ ಅವರಿಂದ ಹಾಡುಗಾರಿಕೆ ನಡೆಯಲಿದೆ.ವಯಲಿನ್ನಲ್ಲಿ ವಿದ್ವಾನ್ ಮೈಸೂರು ವಿ ಶ್ರೀಕಾಂತ್ , ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್, ಘಟಂ ನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ಭಾಗವಹಿಸುವರು ಎಂದು ನಾದ ವೈಭವಂ ಪ್ರಕಟಣೆ ತಿಳಿಸಿದೆ.
ವಿದ್ವಾನ್ ಸಂದೀಪ್ ನಾರಾಯಣ್ ಅವರ ಸಂಗೀತ ಕಛೇರಿಯ ಯೂಟ್ಯೂಬ್ ಕಡತ ವಿಡಿಯೋ
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…