ಸುನಾದ ಸಂಗೀತ ಕಲಾ ಶಾಲೆಯ ಶಿಷ್ಯ ವೃಂದದ ವತಿಯಿಂದ ಮೇ.8 ರಂದು ಭಾನುವಾರ ಪುತ್ತೂರಿನ ಸುದಾನ ವಸತಿಯುತ ಶಾಲಾ ಆವರಣದಲ್ಲಿ ನಾದ ವೈಭವಂ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿದ್ವಾನ್ ಸಂದೀಪ್ ನಾರಾಯಣ್ ಅವರಿಂದ ಹಾಡುಗಾರಿಕೆ ನಡೆಯಲಿದೆ.
ಸಂಜೆ 5.30 ರಿಂದ ನಡೆಯುವ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡುವರು. ಸಭಾಧ್ಯಕ್ಷತೆಯನ್ನು ಹಿರಿಯ ನ್ಯಾಯವಾದಿ ಕೆ ಆರ್ ಆಚಾರ್ಯ ವಹಿಸುವರು. ಸುನಾದ ಸಂಗೀತ ಕಲಾ ಶಾಲೆಯ ನಿರ್ದೇಶಕ ವಿದ್ವಾನ್ ಕಾಂಚನ ಈಶ್ವರ ಭಟ್, ನಾದ ವೈಭವಂ ಅಧ್ಯಕ್ಷ ಪ್ರಕಾಶ್ ಹಾಸನಡ್ಕ ವೇದಿಕೆಯಲ್ಲಿ ಉಪಸ್ಥಿತರಿರುವರು.
ಬಳಿಕ ನಡೆಯುವ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ವಿದ್ವಾನ್ ಸಂದೀಪ್ ನಾರಾಯಣ್ ಅವರಿಂದ ಹಾಡುಗಾರಿಕೆ ನಡೆಯಲಿದೆ.ವಯಲಿನ್ನಲ್ಲಿ ವಿದ್ವಾನ್ ಮೈಸೂರು ವಿ ಶ್ರೀಕಾಂತ್ , ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್, ಘಟಂ ನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ಭಾಗವಹಿಸುವರು ಎಂದು ನಾದ ವೈಭವಂ ಪ್ರಕಟಣೆ ತಿಳಿಸಿದೆ.
ವಿದ್ವಾನ್ ಸಂದೀಪ್ ನಾರಾಯಣ್ ಅವರ ಸಂಗೀತ ಕಛೇರಿಯ ಯೂಟ್ಯೂಬ್ ಕಡತ ವಿಡಿಯೋ
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…