ಸುನಾದ ಸಂಗೀತ ಕಲಾ ಶಾಲೆಯ ಶಿಷ್ಯ ವೃಂದದ ವತಿಯಿಂದ ಮೇ.8 ರಂದು ಭಾನುವಾರ ಪುತ್ತೂರಿನ ಸುದಾನ ವಸತಿಯುತ ಶಾಲಾ ಆವರಣದಲ್ಲಿ ನಾದ ವೈಭವಂ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿದ್ವಾನ್ ಸಂದೀಪ್ ನಾರಾಯಣ್ ಅವರಿಂದ ಹಾಡುಗಾರಿಕೆ ನಡೆಯಲಿದೆ.
ಸಂಜೆ 5.30 ರಿಂದ ನಡೆಯುವ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡುವರು. ಸಭಾಧ್ಯಕ್ಷತೆಯನ್ನು ಹಿರಿಯ ನ್ಯಾಯವಾದಿ ಕೆ ಆರ್ ಆಚಾರ್ಯ ವಹಿಸುವರು. ಸುನಾದ ಸಂಗೀತ ಕಲಾ ಶಾಲೆಯ ನಿರ್ದೇಶಕ ವಿದ್ವಾನ್ ಕಾಂಚನ ಈಶ್ವರ ಭಟ್, ನಾದ ವೈಭವಂ ಅಧ್ಯಕ್ಷ ಪ್ರಕಾಶ್ ಹಾಸನಡ್ಕ ವೇದಿಕೆಯಲ್ಲಿ ಉಪಸ್ಥಿತರಿರುವರು.
ಬಳಿಕ ನಡೆಯುವ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ವಿದ್ವಾನ್ ಸಂದೀಪ್ ನಾರಾಯಣ್ ಅವರಿಂದ ಹಾಡುಗಾರಿಕೆ ನಡೆಯಲಿದೆ.ವಯಲಿನ್ನಲ್ಲಿ ವಿದ್ವಾನ್ ಮೈಸೂರು ವಿ ಶ್ರೀಕಾಂತ್ , ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್, ಘಟಂ ನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ಭಾಗವಹಿಸುವರು ಎಂದು ನಾದ ವೈಭವಂ ಪ್ರಕಟಣೆ ತಿಳಿಸಿದೆ.
ವಿದ್ವಾನ್ ಸಂದೀಪ್ ನಾರಾಯಣ್ ಅವರ ಸಂಗೀತ ಕಛೇರಿಯ ಯೂಟ್ಯೂಬ್ ಕಡತ ವಿಡಿಯೋ
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…