ನಾಡಿನಾದ್ಯಂತ ಇಂದು ನಾಗರ ಪಂಚಮಿ(Nagara Panchami) ಸಂಭ್ರಮ. ಇಂದು ಮನೆಮಂದಿಯೆಲ್ಲಾ ಸೇರಿ ನಾಗ ದೇವತೆಯ ಆರಾಧನೆ ಮಾಡುತ್ತಾರೆ. ನಾಗನ ಕಲ್ಲಿಗೆ ಹಾಲೆರೆದು ನಾಗಪ್ಪನನ್ನು ಪ್ರಾರ್ಥಿಸುತ್ತಾರೆ. ಮನೆಯಲ್ಲಿ ಸಿಹಿ(Sweet) ಅಡುಗೆ ಮಾಡಿ ನೈವೇದ್ಯಕ್ಕಿಟ್ಟು ಸುಖ, ಸಂತೋಷ, ನೆಮ್ಮದಿ ಪ್ರಾಪ್ತಿಗಾಗಿ ನಾಗರಾಜನನ್ನು ಪೂಜಿಸುತ್ತಾರೆ(Pooja). ಶ್ರೀ ಸರ್ಪರಾಜ ಅಷ್ಟೋತ್ತರ(Ashtothara) ಬಲು ಅಪರೂಪ ಮತ್ತು ವಿಶೇಷವಾದದ್ದು, ಪವಿತ್ರವಾದದ್ದು, ತುಂಬಾ ಶಕ್ತಿಯುತವಾದದ್ದು..
ಪರಮ ಪವಿತ್ರವಾದ ಶ್ರೀ ಸರ್ಪರಾಜ ದೇವರ ಅಷ್ಟೋತ್ತರದಲ್ಲಿ ಮಹಾವಿಶೇಷವಾದ ಸರ್ಪರಾಜರುಗಳ ನಾಮಗಳಿವೆ.. ಅನೇಕ ಚರಿತ್ರೆಗಳಲ್ಲಿ, ಪುರಾಣಗಳಲ್ಲಿ ಶಾಸ್ತ್ರಗಳಲ್ಲಿ ಈ ಸರ್ಪರಾಜರ ಬಗ್ಗೆ ಮಾಹಿತಿ ಸಿಕ್ಕುತ್ತವೆ.. ಅವುಗಳಲ್ಲಿ ಮುಖ್ಯವಾಗಿ “ನವನಾಗೇಂದ್ರ”ರ ಹೆಸರುಗಳು ತುಂಬಾ ವಿಶೇಷ.. ಶ್ರೀ ಅನಂತ ವಾಸುಕಿ, ಶ್ರೀ ತಕ್ಷಕ, ಶ್ರೀ ವಿಶ್ವತೋಮುಖ, ಶ್ರೀ ಕರ್ಕೋಟಕ, ಶ್ರೀ ಮಹಾಪದ್ಮ, ಶ್ರೀ ಪದ್ಮ, ಶ್ರೀ ಶಂಖ, ಶ್ರೀ ದೃತರಾಷ್ಟ್ರಾಯ… ಶ್ರೀ ಸರ್ಪರಾಜರ ಹೆಸರುಗಳು ಹೇಗೆ ವಿಶೇಷವೋ ಅದೇ ರೀತಿ 16 ಜನ ನಾಗಮಾತೆಯರು ಬಲು ವಿಶೇಷ.. ಶ್ರೀನಾಗಮಾತೆ, ಶ್ರೀ ನಾಗಭಗಿನಿ, ಶ್ರೀ ವಿಷಹರೆ, ಶ್ರೀ ಮೃತಸಂಜೀವಿನಿ, ಶ್ರೀ ಸಿದ್ಧಯೋಗಿನಿ, ಶ್ರೀ ಯೋಗಿನಿ, ಶ್ರೀ ಪ್ರಿಯಾ, ಶ್ರೀ ಜರತ್ಕಾರು, ಶ್ರೀ ಜಗದ್ ಗೌರಿ, ಶ್ರೀ ಮನಸಾ, ಶ್ರೀ ವೈಷ್ಣವೀ, ಶ್ರೀ ಶೈವೀ, ಶ್ರೀ ನಾಗೇಶ್ವರೀ, ಶ್ರೀ ಆಸ್ತಿಕ, ಶ್ರೀ ಮಾತಾ, ಶ್ರೀ ವಿಷಹರಾ ದೇವಿ.. ಸ್ತ್ರೀಯರು ಪ್ರತಿದಿವಸ ಈ ದೇವಿಯರ ಸ್ಮರಣೆ ಮಾಡುತ್ತಾರೋ ಅವರು ಧೀರ್ಘ ಸುಮಂಗಲಿಯಾಗಿರುತ್ತಾರೆ.., ಮನೆಯಲ್ಲಿ ಗಂಡಹೆಂಡತಿ ಅನ್ಯೋನ್ಯವಾಗಿರುತ್ತಾರೆ, ದಾಂಪತ್ಯ ಜೀವನ ಸುಖಕರವಾಗಿರುತ್ತದೆ..
ಅಷ್ಟೋತ್ತರ ಫಲ..
ಸಂಗ್ರಹ ಮಾಹಿತಿ
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…