ನಾಡಿನಾದ್ಯಂತ ಇಂದು ನಾಗರ ಪಂಚಮಿ(Nagara Panchami) ಸಂಭ್ರಮ. ಇಂದು ಮನೆಮಂದಿಯೆಲ್ಲಾ ಸೇರಿ ನಾಗ ದೇವತೆಯ ಆರಾಧನೆ ಮಾಡುತ್ತಾರೆ. ನಾಗನ ಕಲ್ಲಿಗೆ ಹಾಲೆರೆದು ನಾಗಪ್ಪನನ್ನು ಪ್ರಾರ್ಥಿಸುತ್ತಾರೆ. ಮನೆಯಲ್ಲಿ ಸಿಹಿ(Sweet) ಅಡುಗೆ ಮಾಡಿ ನೈವೇದ್ಯಕ್ಕಿಟ್ಟು ಸುಖ, ಸಂತೋಷ, ನೆಮ್ಮದಿ ಪ್ರಾಪ್ತಿಗಾಗಿ ನಾಗರಾಜನನ್ನು ಪೂಜಿಸುತ್ತಾರೆ(Pooja). ಶ್ರೀ ಸರ್ಪರಾಜ ಅಷ್ಟೋತ್ತರ(Ashtothara) ಬಲು ಅಪರೂಪ ಮತ್ತು ವಿಶೇಷವಾದದ್ದು, ಪವಿತ್ರವಾದದ್ದು, ತುಂಬಾ ಶಕ್ತಿಯುತವಾದದ್ದು..
ಪರಮ ಪವಿತ್ರವಾದ ಶ್ರೀ ಸರ್ಪರಾಜ ದೇವರ ಅಷ್ಟೋತ್ತರದಲ್ಲಿ ಮಹಾವಿಶೇಷವಾದ ಸರ್ಪರಾಜರುಗಳ ನಾಮಗಳಿವೆ.. ಅನೇಕ ಚರಿತ್ರೆಗಳಲ್ಲಿ, ಪುರಾಣಗಳಲ್ಲಿ ಶಾಸ್ತ್ರಗಳಲ್ಲಿ ಈ ಸರ್ಪರಾಜರ ಬಗ್ಗೆ ಮಾಹಿತಿ ಸಿಕ್ಕುತ್ತವೆ.. ಅವುಗಳಲ್ಲಿ ಮುಖ್ಯವಾಗಿ “ನವನಾಗೇಂದ್ರ”ರ ಹೆಸರುಗಳು ತುಂಬಾ ವಿಶೇಷ.. ಶ್ರೀ ಅನಂತ ವಾಸುಕಿ, ಶ್ರೀ ತಕ್ಷಕ, ಶ್ರೀ ವಿಶ್ವತೋಮುಖ, ಶ್ರೀ ಕರ್ಕೋಟಕ, ಶ್ರೀ ಮಹಾಪದ್ಮ, ಶ್ರೀ ಪದ್ಮ, ಶ್ರೀ ಶಂಖ, ಶ್ರೀ ದೃತರಾಷ್ಟ್ರಾಯ… ಶ್ರೀ ಸರ್ಪರಾಜರ ಹೆಸರುಗಳು ಹೇಗೆ ವಿಶೇಷವೋ ಅದೇ ರೀತಿ 16 ಜನ ನಾಗಮಾತೆಯರು ಬಲು ವಿಶೇಷ.. ಶ್ರೀನಾಗಮಾತೆ, ಶ್ರೀ ನಾಗಭಗಿನಿ, ಶ್ರೀ ವಿಷಹರೆ, ಶ್ರೀ ಮೃತಸಂಜೀವಿನಿ, ಶ್ರೀ ಸಿದ್ಧಯೋಗಿನಿ, ಶ್ರೀ ಯೋಗಿನಿ, ಶ್ರೀ ಪ್ರಿಯಾ, ಶ್ರೀ ಜರತ್ಕಾರು, ಶ್ರೀ ಜಗದ್ ಗೌರಿ, ಶ್ರೀ ಮನಸಾ, ಶ್ರೀ ವೈಷ್ಣವೀ, ಶ್ರೀ ಶೈವೀ, ಶ್ರೀ ನಾಗೇಶ್ವರೀ, ಶ್ರೀ ಆಸ್ತಿಕ, ಶ್ರೀ ಮಾತಾ, ಶ್ರೀ ವಿಷಹರಾ ದೇವಿ.. ಸ್ತ್ರೀಯರು ಪ್ರತಿದಿವಸ ಈ ದೇವಿಯರ ಸ್ಮರಣೆ ಮಾಡುತ್ತಾರೋ ಅವರು ಧೀರ್ಘ ಸುಮಂಗಲಿಯಾಗಿರುತ್ತಾರೆ.., ಮನೆಯಲ್ಲಿ ಗಂಡಹೆಂಡತಿ ಅನ್ಯೋನ್ಯವಾಗಿರುತ್ತಾರೆ, ದಾಂಪತ್ಯ ಜೀವನ ಸುಖಕರವಾಗಿರುತ್ತದೆ..
ಅಷ್ಟೋತ್ತರ ಫಲ..
ಸಂಗ್ರಹ ಮಾಹಿತಿ
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…