Advertisement
ಮಾಹಿತಿ

ನಾಡಿನಾದ್ಯಂತ ನಾಗರ ಪಂಚಮಿ ಸಂಭ್ರಮ : ಶ್ರೀನಾಗರಾಜ ದೇವರ ಅಷ್ಟೋತ್ತರ ಅಥವಾ ಸರ್ಪರಾಜ ಅಷ್ಟೋತ್ತರದ ಮಹತ್ವಗಳು

Share

ನಾಡಿನಾದ್ಯಂತ ಇಂದು ನಾಗರ ಪಂಚಮಿ(Nagara Panchami) ಸಂಭ್ರಮ. ಇಂದು ಮನೆಮಂದಿಯೆಲ್ಲಾ ಸೇರಿ ನಾಗ ದೇವತೆಯ ಆರಾಧನೆ ಮಾಡುತ್ತಾರೆ. ನಾಗನ ಕಲ್ಲಿಗೆ ಹಾಲೆರೆದು ನಾಗಪ್ಪನನ್ನು ಪ್ರಾರ್ಥಿಸುತ್ತಾರೆ. ಮನೆಯಲ್ಲಿ ಸಿಹಿ(Sweet) ಅಡುಗೆ ಮಾಡಿ ನೈವೇದ್ಯಕ್ಕಿಟ್ಟು ಸುಖ, ಸಂತೋಷ, ನೆಮ್ಮದಿ ಪ್ರಾಪ್ತಿಗಾಗಿ ನಾಗರಾಜನನ್ನು ಪೂಜಿಸುತ್ತಾರೆ(Pooja). ಶ್ರೀ ಸರ್ಪರಾಜ ಅಷ್ಟೋತ್ತರ(Ashtothara) ಬಲು ಅಪರೂಪ ಮತ್ತು ವಿಶೇಷವಾದದ್ದು, ಪವಿತ್ರವಾದದ್ದು, ತುಂಬಾ ಶಕ್ತಿಯುತವಾದದ್ದು..

ಪರಮ ಪವಿತ್ರವಾದ ಶ್ರೀ ಸರ್ಪರಾಜ ದೇವರ ಅಷ್ಟೋತ್ತರದಲ್ಲಿ ಮಹಾವಿಶೇಷವಾದ ಸರ್ಪರಾಜರುಗಳ ನಾಮಗಳಿವೆ..  ಅನೇಕ ಚರಿತ್ರೆಗಳಲ್ಲಿ, ಪುರಾಣಗಳಲ್ಲಿ ಶಾಸ್ತ್ರಗಳಲ್ಲಿ ಈ ಸರ್ಪರಾಜರ ಬಗ್ಗೆ ಮಾಹಿತಿ ಸಿಕ್ಕುತ್ತವೆ.. ಅವುಗಳಲ್ಲಿ ಮುಖ್ಯವಾಗಿ “ನವನಾಗೇಂದ್ರ”ರ ಹೆಸರುಗಳು ತುಂಬಾ ವಿಶೇಷ.. ಶ್ರೀ ಅನಂತ ವಾಸುಕಿ, ಶ್ರೀ ತಕ್ಷಕ, ಶ್ರೀ ವಿಶ್ವತೋಮುಖ, ಶ್ರೀ ಕರ್ಕೋಟಕ, ಶ್ರೀ ಮಹಾಪದ್ಮ, ಶ್ರೀ ಪದ್ಮ, ಶ್ರೀ ಶಂಖ, ಶ್ರೀ ದೃತರಾಷ್ಟ್ರಾಯ… ಶ್ರೀ ಸರ್ಪರಾಜರ ಹೆಸರುಗಳು ಹೇಗೆ ವಿಶೇಷವೋ ಅದೇ ರೀತಿ 16 ಜನ ನಾಗಮಾತೆಯರು ಬಲು ವಿಶೇಷ.. ಶ್ರೀನಾಗಮಾತೆ, ಶ್ರೀ ನಾಗಭಗಿನಿ, ಶ್ರೀ ವಿಷಹರೆ, ಶ್ರೀ ಮೃತಸಂಜೀವಿನಿ, ಶ್ರೀ ಸಿದ್ಧಯೋಗಿನಿ, ಶ್ರೀ ಯೋಗಿನಿ, ಶ್ರೀ ಪ್ರಿಯಾ, ಶ್ರೀ ಜರತ್ಕಾರು, ಶ್ರೀ ಜಗದ್ ಗೌರಿ, ಶ್ರೀ ಮನಸಾ, ಶ್ರೀ ವೈಷ್ಣವೀ, ಶ್ರೀ ಶೈವೀ, ಶ್ರೀ ನಾಗೇಶ್ವರೀ, ಶ್ರೀ ಆಸ್ತಿಕ, ಶ್ರೀ ಮಾತಾ, ಶ್ರೀ ವಿಷಹರಾ ದೇವಿ.. ಸ್ತ್ರೀಯರು ಪ್ರತಿದಿವಸ ಈ ದೇವಿಯರ ಸ್ಮರಣೆ ಮಾಡುತ್ತಾರೋ ಅವರು ಧೀರ್ಘ ಸುಮಂಗಲಿಯಾಗಿರುತ್ತಾರೆ.., ಮನೆಯಲ್ಲಿ ಗಂಡಹೆಂಡತಿ ಅನ್ಯೋನ್ಯವಾಗಿರುತ್ತಾರೆ, ದಾಂಪತ್ಯ ಜೀವನ ಸುಖಕರವಾಗಿರುತ್ತದೆ..

ಅಷ್ಟೋತ್ತರ ಫಲ..

  1. ಯಾರು ಪ್ರತಿದಿನವೂ ಶ್ರೀ ನವನಾಗೇಂದ್ರರ ಪ್ರಾರ್ಥನೆ ಮತ್ತು ಶ್ರೀ ನಾಗಮಾತೆಯರನ್ನು ಸ್ಮರಿಸಿ, ಸರ್ಪರಾಜ ಅಷ್ಟೋತ್ತರ ಓದಿದರೆ, ನಿಮ್ಮ ಮನೆಯ ಮೇಲೆ ಸರ್ಪದೇವರ ಆಶೀರ್ವಾದವಿದ್ದು , ಸರ್ವಭಯ, ಸರ್ಪಭಯ, ಶತೃಭಯ ನಿವಾರಣೆಯಾಗುತ್ತದೆ ..
  2. ನವನಾಗೇಂದ್ರರು ಮತ್ತು ನಾಗದೇವತೆಯರ ಸ್ಮರಣೆ ಮಾಡಿ , ಸರ್ಪರಾಜ ಅಷ್ಟೋತ್ತರ ಓದಿ, ಹುತ್ತಕ್ಕೆ ನಮಸ್ಕಾರ ಮಾಡುತ್ತಾ ಬಂದರೆ, ಮನೆಯಲ್ಲಿ ಜಗಳ ನಿವಾರಣೆಯಾಗಿ , ಸಂತೋಷದ ಜೀವನ ಮಾಡುವಿರಿ.. ಎಲ್ಲರೂ ಆರೋಗ್ಯವಾಗಿರುತ್ತಾರೆ..
  3. ಯಾರಿಗೆ “ಸಂತಾನಭಾಗ್ಯ” ಇರುವುದಿಲ್ಲವೋ ಅವರು ಅಶ್ವತ್ಥ ಮರದ ಕೆಳಗೆ ಇರುವ ನಾಗರಕಲ್ಲಿಗೆ ಪೂಜೆ ಮಾಡಿಸಿ, ಸರ್ಪರಾಜ ಅಷ್ಟೋತ್ತರ ಓದಿ ,ಮಂಡಲ ಪೂಜೆ ಮಾಡಿಸಿದರೆ ಸಂತಾನ ಭಾಗ್ಯವಾಗುತ್ತದೆ..
  4. ಗಂಡ ಹೆಂಡತಿ ವಿರಸ ಇರುವವರು, ವಿಚ್ಛೇದನ ಸಮಸ್ಯೆ ಇರುವವರು, ಷಷ್ಠಿ ಅಥವಾ ಅಷ್ಟಮಿಯ ದಿನ ಶ್ರೀ ಸರ್ಪರಾಜ ದೇವರ ಅಷ್ಟೋತ್ತರ ಹೇಳಿ, ತನಿ ಎರೆದರೆ ಸರ್ವ ಸಮಸ್ಯೆ ನಿವಾರಣೆಯಾಗುತ್ತದೆ ..
  5. ಯಾರಿಗೆ “ಫಿಟ್ಸ್” ಖಾಯಿಲೆ ಇದೆಯೋ ಅಂಥವರು ಓದಿದರೆ , ಫಿಟ್ಸ್ ಬರುವುದಿಲ್ಲ..
  6. ಕಾಲಸರ್ಪದೋಷ ಇರುವವರು ಓದಿದರೆ ಕಾಲಸರ್ಪದೋಷ, ಕಾಲಸರ್ಪಯೋಗವಾಗಿ ಉತ್ತಮ ಫಲ ಕೊಡುತ್ತದೆ ..
  7. ಯಾವುದೇ ತರಹ ಪಂಚಮರಾಹು, ಸಪ್ತಮ ರಾಹು, ಅಷ್ಟಮರಾಹು ದೋಷಗಳು ಶ್ರೀ ನಾಗರಾಜ ಅಷ್ಟೋತ್ತರ ಓದಿದರೆ ನಿವಾರಣೆಯಾಗುತ್ತದೆ ..
  8. ಯಾರು ಸರ್ಪಸಂಸ್ಕಾರ ಮಾಡಿ ನಾಗರ ಪ್ರತಿಷ್ಠೆ ಮಾಡಿಸಿದ್ದರೂ, ತೊಂದರೆ ಅನುಭವಿಸುತ್ತಿದ್ದರೆ, ಶ್ರೀ ನಾಗರಾಜ ದೇವರ ಅಷ್ಟೋತ್ತರವನ್ನು 48 ದಿವಸ ಓದಿ ಪೂಜೆ ಮಾಡಿದರೆ ಸರ್ವ ಸಮಸ್ಯೆಗಳು ನಿವಾರಣೆಯಾಗುತ್ತದೆ ..
  9. ಗರ್ಭದೋಷದ ತೊಂದರೆ ಇರುವವರು ಹಾಗೂ ರಜಸ್ವಲೆ ದೋಷ ಇರುವವರು, ಶ್ರೀ ನಾಗರಾಜ ಅಷ್ಟೋತ್ತರ ಪ್ರತಿದಿನ ಓದುತ್ತಾ ಬಂದರೆ ದೋಷ ನಿವಾರಣೆಯಾಗುತ್ತದೆ .. ಆರೋಗ್ಯ ಭಾಗ್ಯವಾಗುತ್ತದೆ..
  10. ಅಶ್ವಿನೀ ನಕ್ಷತ್ರ, ಮಖಾ ನಕ್ಷತ್ರ, ಮೂಲಾ ನಕ್ಷತ್ರ ಉಳ್ಳವರು ಮತ್ತು ಜಾತಕದಲ್ಲಿ ಸರ್ಪದೋಷ ಇರುವವರು , ಶ್ರೀ ನಾಗರಾಜ ಅಷ್ಟೋತ್ತರ ಓದಿದರೆ ದೋಷ ನಿವಾರಣೆಯಾಗುತ್ತದೆ ..
  11. ಸರ್ಪದೋಷದಿಂದ ವಿವಾಹ ಸಮಸ್ಯೆ ಇರುವವರು ಪ್ರತಿದಿನ ಶ್ರೀ ಸರ್ಪರಾಜ ಅಷ್ಟೋತ್ತರ ಮತ್ತು ಶ್ರೀ ಸುಬ್ರಹ್ಮಣ್ಯ ಸ್ವಾಮಿ ಅಷ್ಟೋತ್ತರ ಓದಿದರೆ ವಿವಾಹ ಸಮಸ್ಯೆ ನಿವಾರಣೆಯಾಗುತ್ತದೆ .., ದಾಂಪತ್ಯ ಚೆನ್ನಾಗಿರುತ್ತದೆ.. –

ಸಂಗ್ರಹ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

10 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

16 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago