MIRROR FOCUS

ವಿಶ್ವ ಬಿದಿರು ದಿನವನ್ನು ಆಚರಿಸಿದ ನಾಗಾಲ್ಯಾಂಡ್‌ | ಬಿದಿರು ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯೋಜಿಸಿದ ನಾಗಾಲ್ಯಾಂಡ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾಗಾಲ್ಯಾಂಡ್ ನಲ್ಲಿ ‘ವಿಶ್ವ ಬಿದಿರು ದಿನ’ವನ್ನು ಆಚರಿಸುವ ಮೂಲಕ ನಾಗಾಲ್ಯಾಂಡ್‌ನ ವಿವಿದೆಡೆ ಬಿದಿರು ಕೃಷಿಯನ್ನು ಬೆಳೆಸುವ ಕಡೆಗೆ ಹೆಜ್ಜೆ ಇರಿಸಿದೆ. ಇದಕ್ಕಾಗಿ “ಮುಂದಿನ ಪೀಳಿಗೆಯ ಬಿದಿರು” ಎನ್ನುವ ಹೆಸರಿನಲ್ಲಿ ನಾಗಾಲ್ಯಾಂಡ್ ಬಿದಿರು ಅಭಿವೃದ್ಧಿ ಸಂಸ್ಥೆ , ನಾಗಾಲ್ಯಾಂಡ್ ಬಿದಿರು ಸಂಪನ್ಮೂಲ ಕೇಂದ್ರ, ಚುಮೌಕೆಡಿಮಾ ಪ್ರದೇಶದಲ್ಲಿ  ಸೆಮಿನಾರ್‌  ಆಯೋಜಿಸಿದೆ.

Advertisement

ನಾಗಾಲ್ಯಾಂಡ್ ಬಿದಿರು ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ನುಜೋಟಾ ಸ್ವುರೊ ಮಾತನಾಡಿ, ಹಳ್ಳಿಗಳ ಅನೇಕ ಕುಶಲಕರ್ಮಿಗಳು ಸ್ಥಳೀಯ ತಂತ್ರಜ್ಞಾನದೊಂದಿಗೆ ಅತ್ಯುತ್ತಮ ಬಿದಿರಿನ ಕರಕುಶಲ ವಸ್ತುಗಳನ್ನು ಉತ್ಪಾದಿಸುತ್ತಿದ್ದಾರೆ. ಸೂಕ್ತ ಕೌಶಲಾಭಿವೃದ್ಧಿ ತರಬೇತಿ ನೀಡಿದರೆ ತಮ್ಮ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಸ್ಪರ್ಧಿಸುವ ಅವಕಾಶವಿದೆ ಎಂದು ತಿಳಿಸಿದರು. ಇದು ಗ್ರಾಮೀಣ ಪ್ರದೇಶದ ಉದ್ಯಮಿಗಳ ಆರ್ಥಿಕ ಸ್ಥಿತಿಯನ್ನು ದೊಡ್ಡ ರೀತಿಯಲ್ಲಿ ಉತ್ತಮಗೊಳಿಸುತ್ತದೆ ಎಂದು ಅವರು ಹೇಳಿದರು. ಚುಮೌಕೆಡಿಮಾ, ದಿಮಾಪುರ್ ಮತ್ತು ಪೆರೆನ್ ಜಿಲ್ಲೆಗಳನ್ನು ಬಿದಿರು ಆರ್ಥಿಕ ವಲಯ ಎಂದು ಗುರುತಿಸಲಾಗಿದೆ ಎಂದು ಹೇಳಿದ ಸ್ವುರೊ, ಎನ್‌ಬಿಡಿಎ ಈ ವಲಯದಲ್ಲಿ ಬಿದಿರಿನ ತೋಟದೊಂದಿಗೆ ಸಂಪರ್ಕ ಸಾಧಿಸುತ್ತದೆ ಮತ್ತು ಮುಂದಿನ ದಿನಗಳಲ್ಲಿ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯೋಜಿಸಿದೆ ಎಂದರು.

ನಾಗಾಲ್ಯಾಂಡ್ ಬಿದಿರು ಅಭಿವೃದ್ಧಿ ಸಂಸ್ಥೆ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಬಿದಿರು ಉದ್ಯಮವನ್ನು ದೊಡ್ಡ ಪ್ರಮಾಣದಲ್ಲಿ ಉತ್ತೇಜಿಸಲು ಯೋಜಿಸಿದೆ, ಇದಕ್ಕಾಗಿ  ಉದ್ಯಮಿಗಳ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯವಾಗಿರುತ್ತದೆ ಎಂದು ಹೇಳಿದರು.

ನಾಗಾಲ್ಯಾಂಡ್ 46 ಜಾತಿಯ ಬಿದಿರುಗಳಿಗೆ ನೆಲೆಯಾಗಿದೆ. ನಾಗಾಲ್ಯಾಂಡ್ ಬಿದಿರು ಮಿಷನ್ ಬಿದಿರು ಆಧಾರಿತ ಆರ್ಥಿಕ ಉಪಕ್ರಮಗಳನ್ನು ಉತ್ತೇಜಿಸಲು ಸಮರ್ಪಿಸಲಾಗಿದೆ. ಸ್ಥಳೀಯ ಸಮುದಾಯಗಳಿಗೆ ಬಿದಿರನ್ನು  ಉದ್ಯಮವಾಗಿ ಅಭಿವೃದ್ಧಿಪಡಿಸಲು ಸುಸ್ಥಿರ ಅಭ್ಯಾಸಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಮುಖ್ಯಮಂತ್ರಿ ನೆಫಿಯು ರಿಯೊ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

9 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

9 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

12 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

12 hours ago

ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |

ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ  ಜೂನ್‌ 29 ರಿಂದ, …

12 hours ago

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವದಿ ಲಾರಿ ಮುಷ್ಕರ | ಸಂಧಾನ ಮಾತುಕತೆಯೂ ವಿಫಲ |

ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…

12 hours ago