Advertisement
MIRROR FOCUS

ವಿಶ್ವ ಬಿದಿರು ದಿನವನ್ನು ಆಚರಿಸಿದ ನಾಗಾಲ್ಯಾಂಡ್‌ | ಬಿದಿರು ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯೋಜಿಸಿದ ನಾಗಾಲ್ಯಾಂಡ್‌ |

Share

ನಾಗಾಲ್ಯಾಂಡ್ ನಲ್ಲಿ ‘ವಿಶ್ವ ಬಿದಿರು ದಿನ’ವನ್ನು ಆಚರಿಸುವ ಮೂಲಕ ನಾಗಾಲ್ಯಾಂಡ್‌ನ ವಿವಿದೆಡೆ ಬಿದಿರು ಕೃಷಿಯನ್ನು ಬೆಳೆಸುವ ಕಡೆಗೆ ಹೆಜ್ಜೆ ಇರಿಸಿದೆ. ಇದಕ್ಕಾಗಿ “ಮುಂದಿನ ಪೀಳಿಗೆಯ ಬಿದಿರು” ಎನ್ನುವ ಹೆಸರಿನಲ್ಲಿ ನಾಗಾಲ್ಯಾಂಡ್ ಬಿದಿರು ಅಭಿವೃದ್ಧಿ ಸಂಸ್ಥೆ , ನಾಗಾಲ್ಯಾಂಡ್ ಬಿದಿರು ಸಂಪನ್ಮೂಲ ಕೇಂದ್ರ, ಚುಮೌಕೆಡಿಮಾ ಪ್ರದೇಶದಲ್ಲಿ  ಸೆಮಿನಾರ್‌  ಆಯೋಜಿಸಿದೆ.

ನಾಗಾಲ್ಯಾಂಡ್ ಬಿದಿರು ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ನುಜೋಟಾ ಸ್ವುರೊ ಮಾತನಾಡಿ, ಹಳ್ಳಿಗಳ ಅನೇಕ ಕುಶಲಕರ್ಮಿಗಳು ಸ್ಥಳೀಯ ತಂತ್ರಜ್ಞಾನದೊಂದಿಗೆ ಅತ್ಯುತ್ತಮ ಬಿದಿರಿನ ಕರಕುಶಲ ವಸ್ತುಗಳನ್ನು ಉತ್ಪಾದಿಸುತ್ತಿದ್ದಾರೆ. ಸೂಕ್ತ ಕೌಶಲಾಭಿವೃದ್ಧಿ ತರಬೇತಿ ನೀಡಿದರೆ ತಮ್ಮ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಸ್ಪರ್ಧಿಸುವ ಅವಕಾಶವಿದೆ ಎಂದು ತಿಳಿಸಿದರು. ಇದು ಗ್ರಾಮೀಣ ಪ್ರದೇಶದ ಉದ್ಯಮಿಗಳ ಆರ್ಥಿಕ ಸ್ಥಿತಿಯನ್ನು ದೊಡ್ಡ ರೀತಿಯಲ್ಲಿ ಉತ್ತಮಗೊಳಿಸುತ್ತದೆ ಎಂದು ಅವರು ಹೇಳಿದರು. ಚುಮೌಕೆಡಿಮಾ, ದಿಮಾಪುರ್ ಮತ್ತು ಪೆರೆನ್ ಜಿಲ್ಲೆಗಳನ್ನು ಬಿದಿರು ಆರ್ಥಿಕ ವಲಯ ಎಂದು ಗುರುತಿಸಲಾಗಿದೆ ಎಂದು ಹೇಳಿದ ಸ್ವುರೊ, ಎನ್‌ಬಿಡಿಎ ಈ ವಲಯದಲ್ಲಿ ಬಿದಿರಿನ ತೋಟದೊಂದಿಗೆ ಸಂಪರ್ಕ ಸಾಧಿಸುತ್ತದೆ ಮತ್ತು ಮುಂದಿನ ದಿನಗಳಲ್ಲಿ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯೋಜಿಸಿದೆ ಎಂದರು.

ನಾಗಾಲ್ಯಾಂಡ್ ಬಿದಿರು ಅಭಿವೃದ್ಧಿ ಸಂಸ್ಥೆ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಬಿದಿರು ಉದ್ಯಮವನ್ನು ದೊಡ್ಡ ಪ್ರಮಾಣದಲ್ಲಿ ಉತ್ತೇಜಿಸಲು ಯೋಜಿಸಿದೆ, ಇದಕ್ಕಾಗಿ  ಉದ್ಯಮಿಗಳ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯವಾಗಿರುತ್ತದೆ ಎಂದು ಹೇಳಿದರು.

ನಾಗಾಲ್ಯಾಂಡ್ 46 ಜಾತಿಯ ಬಿದಿರುಗಳಿಗೆ ನೆಲೆಯಾಗಿದೆ. ನಾಗಾಲ್ಯಾಂಡ್ ಬಿದಿರು ಮಿಷನ್ ಬಿದಿರು ಆಧಾರಿತ ಆರ್ಥಿಕ ಉಪಕ್ರಮಗಳನ್ನು ಉತ್ತೇಜಿಸಲು ಸಮರ್ಪಿಸಲಾಗಿದೆ. ಸ್ಥಳೀಯ ಸಮುದಾಯಗಳಿಗೆ ಬಿದಿರನ್ನು  ಉದ್ಯಮವಾಗಿ ಅಭಿವೃದ್ಧಿಪಡಿಸಲು ಸುಸ್ಥಿರ ಅಭ್ಯಾಸಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಮುಖ್ಯಮಂತ್ರಿ ನೆಫಿಯು ರಿಯೊ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

16 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago