Advertisement
MIRROR FOCUS

ವಿಶ್ವ ಬಿದಿರು ದಿನವನ್ನು ಆಚರಿಸಿದ ನಾಗಾಲ್ಯಾಂಡ್‌ | ಬಿದಿರು ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯೋಜಿಸಿದ ನಾಗಾಲ್ಯಾಂಡ್‌ |

Share

ನಾಗಾಲ್ಯಾಂಡ್ ನಲ್ಲಿ ‘ವಿಶ್ವ ಬಿದಿರು ದಿನ’ವನ್ನು ಆಚರಿಸುವ ಮೂಲಕ ನಾಗಾಲ್ಯಾಂಡ್‌ನ ವಿವಿದೆಡೆ ಬಿದಿರು ಕೃಷಿಯನ್ನು ಬೆಳೆಸುವ ಕಡೆಗೆ ಹೆಜ್ಜೆ ಇರಿಸಿದೆ. ಇದಕ್ಕಾಗಿ “ಮುಂದಿನ ಪೀಳಿಗೆಯ ಬಿದಿರು” ಎನ್ನುವ ಹೆಸರಿನಲ್ಲಿ ನಾಗಾಲ್ಯಾಂಡ್ ಬಿದಿರು ಅಭಿವೃದ್ಧಿ ಸಂಸ್ಥೆ , ನಾಗಾಲ್ಯಾಂಡ್ ಬಿದಿರು ಸಂಪನ್ಮೂಲ ಕೇಂದ್ರ, ಚುಮೌಕೆಡಿಮಾ ಪ್ರದೇಶದಲ್ಲಿ  ಸೆಮಿನಾರ್‌  ಆಯೋಜಿಸಿದೆ.

ನಾಗಾಲ್ಯಾಂಡ್ ಬಿದಿರು ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ನುಜೋಟಾ ಸ್ವುರೊ ಮಾತನಾಡಿ, ಹಳ್ಳಿಗಳ ಅನೇಕ ಕುಶಲಕರ್ಮಿಗಳು ಸ್ಥಳೀಯ ತಂತ್ರಜ್ಞಾನದೊಂದಿಗೆ ಅತ್ಯುತ್ತಮ ಬಿದಿರಿನ ಕರಕುಶಲ ವಸ್ತುಗಳನ್ನು ಉತ್ಪಾದಿಸುತ್ತಿದ್ದಾರೆ. ಸೂಕ್ತ ಕೌಶಲಾಭಿವೃದ್ಧಿ ತರಬೇತಿ ನೀಡಿದರೆ ತಮ್ಮ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಸ್ಪರ್ಧಿಸುವ ಅವಕಾಶವಿದೆ ಎಂದು ತಿಳಿಸಿದರು. ಇದು ಗ್ರಾಮೀಣ ಪ್ರದೇಶದ ಉದ್ಯಮಿಗಳ ಆರ್ಥಿಕ ಸ್ಥಿತಿಯನ್ನು ದೊಡ್ಡ ರೀತಿಯಲ್ಲಿ ಉತ್ತಮಗೊಳಿಸುತ್ತದೆ ಎಂದು ಅವರು ಹೇಳಿದರು. ಚುಮೌಕೆಡಿಮಾ, ದಿಮಾಪುರ್ ಮತ್ತು ಪೆರೆನ್ ಜಿಲ್ಲೆಗಳನ್ನು ಬಿದಿರು ಆರ್ಥಿಕ ವಲಯ ಎಂದು ಗುರುತಿಸಲಾಗಿದೆ ಎಂದು ಹೇಳಿದ ಸ್ವುರೊ, ಎನ್‌ಬಿಡಿಎ ಈ ವಲಯದಲ್ಲಿ ಬಿದಿರಿನ ತೋಟದೊಂದಿಗೆ ಸಂಪರ್ಕ ಸಾಧಿಸುತ್ತದೆ ಮತ್ತು ಮುಂದಿನ ದಿನಗಳಲ್ಲಿ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯೋಜಿಸಿದೆ ಎಂದರು.

Advertisement

ನಾಗಾಲ್ಯಾಂಡ್ ಬಿದಿರು ಅಭಿವೃದ್ಧಿ ಸಂಸ್ಥೆ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಬಿದಿರು ಉದ್ಯಮವನ್ನು ದೊಡ್ಡ ಪ್ರಮಾಣದಲ್ಲಿ ಉತ್ತೇಜಿಸಲು ಯೋಜಿಸಿದೆ, ಇದಕ್ಕಾಗಿ  ಉದ್ಯಮಿಗಳ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯವಾಗಿರುತ್ತದೆ ಎಂದು ಹೇಳಿದರು.

ನಾಗಾಲ್ಯಾಂಡ್ 46 ಜಾತಿಯ ಬಿದಿರುಗಳಿಗೆ ನೆಲೆಯಾಗಿದೆ. ನಾಗಾಲ್ಯಾಂಡ್ ಬಿದಿರು ಮಿಷನ್ ಬಿದಿರು ಆಧಾರಿತ ಆರ್ಥಿಕ ಉಪಕ್ರಮಗಳನ್ನು ಉತ್ತೇಜಿಸಲು ಸಮರ್ಪಿಸಲಾಗಿದೆ. ಸ್ಥಳೀಯ ಸಮುದಾಯಗಳಿಗೆ ಬಿದಿರನ್ನು  ಉದ್ಯಮವಾಗಿ ಅಭಿವೃದ್ಧಿಪಡಿಸಲು ಸುಸ್ಥಿರ ಅಭ್ಯಾಸಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಮುಖ್ಯಮಂತ್ರಿ ನೆಫಿಯು ರಿಯೊ ಹೇಳಿದ್ದಾರೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

2 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

23 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

23 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

1 day ago