ದೇಶದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ನಾಗಾಲ್ಯಾಂಡ್ನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೂಕುಸಿತದಲ್ಲಿ ಬೃಹತ್ ಬಂಡೆ ಕುಸಿದು ಅಪ್ಪಳಿಸಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಇದರಿಂದ ಇಬ್ಬರು ಮೃತಪಟ್ಟಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.
ನಾಗಾಲ್ಯಾಂಡ್ನ ದಿಮಾಪುರ್ ಮತ್ತು ಕೊಹಿಮಾ ನಡುವಿನ ಚುಮೌಕೆಡಿಮಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 29 ರಲ್ಲಿ ಭಾರೀ ಮಳೆಯ ನಡುವೆ ಸಂಜೆ 5 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಹಿಮಾ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳನ್ನು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಗುಡ್ಡದಿಂದ ಕುಸಿದ ಬಂಡೆಯು ಒಂದು ಕಾರನ್ನು ಪುಡಿ ಮಾಡಿ ಮತ್ತೆರಡು ವಾಹನಗಳನ್ನು ಪುಡಿ ಮಾಡಿದೆ. ಈ ದೃಶ್ಯ ಹಿಂದೆ ಕಾಯುತ್ತಿದ್ದ ಕಾರಿನ ಡ್ಯಾಶ್ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಭಾರೀ ಮಳೆ ಹಾಗೂ ರಸ್ತೆ ಬ್ಲಾಕ್ ಕಾರಣದಿಂದ ವಾಹನಗಳು ರಸ್ತೆಯಲ್ಲಿ ಕಾಯುತ್ತಿದ್ದವು. ಈ ಸಂದರ್ಭ ಗುಡ್ಡದಿಂದ ಬಂಡೆ ಅಪ್ಪಳಿಸಿದೆ.
(ಮೂಲ : ಪಿಟಿಐ )
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…