ದೇಶದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ನಾಗಾಲ್ಯಾಂಡ್ನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೂಕುಸಿತದಲ್ಲಿ ಬೃಹತ್ ಬಂಡೆ ಕುಸಿದು ಅಪ್ಪಳಿಸಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಇದರಿಂದ ಇಬ್ಬರು ಮೃತಪಟ್ಟಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.
ನಾಗಾಲ್ಯಾಂಡ್ನ ದಿಮಾಪುರ್ ಮತ್ತು ಕೊಹಿಮಾ ನಡುವಿನ ಚುಮೌಕೆಡಿಮಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 29 ರಲ್ಲಿ ಭಾರೀ ಮಳೆಯ ನಡುವೆ ಸಂಜೆ 5 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಹಿಮಾ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳನ್ನು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಗುಡ್ಡದಿಂದ ಕುಸಿದ ಬಂಡೆಯು ಒಂದು ಕಾರನ್ನು ಪುಡಿ ಮಾಡಿ ಮತ್ತೆರಡು ವಾಹನಗಳನ್ನು ಪುಡಿ ಮಾಡಿದೆ. ಈ ದೃಶ್ಯ ಹಿಂದೆ ಕಾಯುತ್ತಿದ್ದ ಕಾರಿನ ಡ್ಯಾಶ್ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಭಾರೀ ಮಳೆ ಹಾಗೂ ರಸ್ತೆ ಬ್ಲಾಕ್ ಕಾರಣದಿಂದ ವಾಹನಗಳು ರಸ್ತೆಯಲ್ಲಿ ಕಾಯುತ್ತಿದ್ದವು. ಈ ಸಂದರ್ಭ ಗುಡ್ಡದಿಂದ ಬಂಡೆ ಅಪ್ಪಳಿಸಿದೆ.
(ಮೂಲ : ಪಿಟಿಐ )
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…