Advertisement
The Rural Mirror ವಾರದ ವಿಶೇಷ

ನಾಗಾಲ್ಯಾಂಡ್‌ ಆ ಹಳ್ಳಿಯ ಜನರ ಒಗ್ಗಟ್ಟು ದೇಶಕ್ಕೆ ಮಾದರಿ ಹೇಗೆ ಗೊತ್ತಾ….? | ಆ ವಿಡಿಯೋ ಒಗ್ಗಟ್ಟು ಸೂಚಿಸುತ್ತಿದೆ…! …! |

Share

ನಾಗಾಲ್ಯಾಂಡ್‌ ಒಂದಿಲ್ಲೊಂದು ಕಾರಣದಿಂದ ಸುದ್ದಿ ಮಾಡುತ್ತಲೇ ಇರುತ್ತದೆ. ಈ ಬಾರಿ ಆ ಪುಟ್ಟ ಹಳ್ಳಿಯ ಜನರ ಒಗ್ಗಟ್ಟಿನ ಮೂಲಕ ಸುದ್ದಿಯಾಗಿದೆ. ಅದು ಸುಮಾರು  2  ತಿಂಗಳ ಹಿಂದಿನ ಕತೆ. ಈ ಗ್ರಾಮದ ಸಾವಿರಾರು ಮಂದಿ ಸೇರಿ ಕಮರಿಗೆ ಬಿದ್ದ ಲಾರಿಯನ್ನು ಎಳೆದು ಮೇಲಕ್ಕೆತ್ತಿದ ರೀತಿ ಹಾಗೂ ಒಗ್ಗಟ್ಟು ಇಡೀ ದೇಶಕ್ಕೆ ಮಾದರಿಯಾಯಿತು.

ನಾಗಾಲ್ಯಾಂಡ್‌ನ ಫೆಕ್‌ ಜಿಲ್ಲೆಯ ಕುಟ್ಸಾಪೋ  ಗ್ರಾಮದಲ್ಲಿ ನಡೆದ ಘಟನೆ ಇದು. ಶುಂಠಿ ತುಂಬಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಮುಖ್ಯ ರಸ್ತೆಯಿಂದ  ಸುಮಾರು 100-120 ಅಡಿಗಳಷ್ಟು ಕೆಳಗೆ ಬಿದ್ದಿತ್ತು. ಲಾರಿಯಲ್ಲಿ ಒಟ್ಟು 8 ಜನರಿದ್ದರು, ಮತ್ತು ಚಾಲಕನಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿತ್ತು.ಮೂಲಭೂತ ಸೌಲಭ್ಯದ ಕೊರತೆ ಇರುವ ಈ ಹಳ್ಳಿಯ ಜನರು ಲಾರಿಗೆ ಹಗ್ಗ ಕಟ್ಟಿ ಊರಿನ ಜನರೆಲ್ಲಾ ಸೇರಿ ಎಳೆದೇ ಬಿದ್ದ ಲಾರಿಯನ್ನು ಮೇಲಕ್ಕೆತ್ತಿದ್ದರು. ಈ ಹಳ್ಳಿಯಲ್ಲಿ  ಯಾರಿಗೆ ಏನೇ ಆದರೂ ಎಲ್ಲರೂ ಒಂದಾಗಿ ಸಹಾಯ ಮಾಡುವುದು  ಇಲ್ಲಿನ ಜನರ ಸ್ವಭಾವ. ಹೀಗಾಗಿ ಅಲ್ಲಿ ಇದು ಅಚ್ಚರಿಯ ಸಂಗತಿಯಲ್ಲ, ಆದರೆ ಅಧಿಕಾರಿಯೊಬ್ಬರು ಹಾಗೂ ಜನಪ್ರತಿನಿಧಿಯೊಬ್ಬರು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಬಳಿಕ ಎಲ್ಲೆಡೆ ಈ ಹಳ್ಳಿಯ ಒಗ್ಗಟ್ಟು ಬೆಳಕಿಗೆ ಬಂದಿದೆ ಹಾಗೂ ಅಚ್ಚರಿಗೂ ಕಾರಣವಾಯಿತು.

ಗ್ರಾಮಸ್ಥರ ಪ್ರಕಾರ, ನಾಗಾಲ್ಯಾಂಡ್ ನ ಈ ಪ್ರದೇಶದಲ್ಲಿ ಕಿರಿದಾದ ರಸ್ತೆ ಇರುವುದರಿಂದ ಲಾರಿಯು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿತ್ತು. ಈ ಜಿಲ್ಲೆಯಲ್ಲಿ ಬಹುತೇಕ ಮಂದಿ ಶುಂಠಿ ಬೆಳೆಯುತ್ತಾರೆ, ಹೀಗಾಗಿ ಇದರ ಸಾಗಾಟದ ಸಂದರ್ಭ ಲಾರಿ ಉರುಳಿ ಬಿದ್ದಿತ್ತು. ಹೀಗೆ ಬಿದ್ದ ಲಾರಿಯನ್ನು ತಕ್ಷಣವೇ ತೆಗೆಯುವ ಪ್ರಯತ್ನ ನಡೆದಿರಲಿಲ್ಲ. ಊರಿನ ಜಾತ್ರೆ ಮುಗಿದ ಬಳಿಕ ಜನರೆಲ್ಲಾ ಸೇರಿ ಲಾರಿಯನ್ನು ಎಳೆದರು. ಸುಮಾರು ಅರ್ಧ ಗಂಟೆಯ ಪ್ರಯತ್ನದಲ್ಲಿ  ಗ್ರಾಮಸ್ಥರು ಲಾರಿಯನ್ನು ಎಳೆದರು. ಬಳ್ಳಿ ಕಟ್ಟಿ ಎಳೆಯುತ್ತಾ ಬಂದರೆ , ಲಾರಿ ಹಿಂದಕ್ಕೆ ಜಾರದಂತೆ ಸಲಾಕೆ ಇತ್ಯಾದಿಗಳನ್ನು ಕಟ್ಟಿದ್ದರು.

ಈ ಘಟನೆಯ ಬಗ್ಗೆ ಮಾತನಾಡಿದ ಅಲ್ಲಿನ ವಿಭಾಗೀಯ ಅಧಿಕಾರಿ ಭವಾನಿ ಅವರು, ಈ ಗ್ರಾಮದ ನಿವಾಸಿಗಳು ಸೌಹಾರ್ದತೆ ಹಾಗೂ ಒಗ್ಗಟ್ಟಿಗೆ ಅಚ್ಚರಿ ಪಡಬೇಕಿಲ್ಲ. ಇಲ್ಲಿ ಇದು ಮಾಮೂಲು ಸಂಗತಿಯಾಗಿದೆ.ಈ ಪ್ರದೇಶದಲ್ಲಿ ಮೂಲಭೂತ ಸೌಲಭ್ಯದ ಕೊರತೆ ಇದೆ. ಇಲ್ಲಿನ ಒಂದು ಕುಟುಂಬವು ತೊಂದರೆಯಲ್ಲಿದ್ದರೆ ಇಡೀ ಗ್ರಾಮವೇ ಅವರ ಜೊತೆ ನಿಲ್ಲುತ್ತದೆ ಎನ್ನುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

3 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

7 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

8 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

10 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

11 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago