#NagaraPanchami | ಎಲ್ಲೆಲ್ಲೂ ನಾಗರಪಂಚಮಿ ಸಂಭ್ರಮ | ಪ್ರಕೃತಿಯ ಆರಾಧನೆಯ ಭಾಗವಾಗಿ ಮಲೆನಾಡ ನಾಗರ ಪಂಚಮಿ

August 19, 2023
5:02 PM
ಮಲೆನಾಡು ಮತ್ತು ಕರಾವಳಿಯಲ್ಲಿ ನಾಗರ ಪಂಚಮಿಯ ದಿನ ಮಳೆ ಬಂದೇ ಬರುತ್ತೆ. ಮಳೆ ನಾಗರಕಲ್ಲನ್ನು ತೊಳೆದ ಬಳಿಕ ಪೂಜೆ ನಡೆಸಲಾಗುತ್ತದೆ. ಈ ನಂಬಿಕೆ ನಮ್ಮ ಜನರ ಮತ್ತು ಪ್ರಕೃತಿಯ ನಡುವಿನ ಆಳವಾದ ಸಂಬಂಧ ಯಾವ ಮಟ್ಟದ್ದು ಎಂಬುದಕ್ಕೆ ಸಾಕ್ಷಿ ಕೂಡ ಹೌದು.

ಈ ಬಾರಿ ನಾಗರ ಪಂಚಮಿಯನ್ನು #NagaraPanchami ಆಗಸ್ಟ್‌ 21 ರಂದು ಆಚರಿಸಲಾಗುವುದು. ಈ ದಿನದಂದು ನಾಗನನ್ನು ಪೂಜಿಸಲಾಗುತ್ತದೆ. ವಾಸುಕಿ ನಾಗನು ಸಮುದ್ರ ಮಂಥನ ಸಮಯದಲ್ಲಿ ದೇವತೆಗಳಿಗೆ ಸಹಾಯ ಮಾಡಿದ್ದನು. ಆದ್ದರಿಂದ ದೇವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಈ ಹಬ್ಬವನ್ನು ನಾಗಪಂಚಮಿಯ ದಿನದಂದು ಆಚರಿಸಲಾಗುತ್ತದೆ. 

ಹೀಗೆ ಮಲೆನಾಡು, ಕರಾವಳಿಯಲ್ಲಿ ನಾಗರ ಪಂಚಮಿಯ ದಿನ ಮಳೆ ಬಂದೇ ಬರುತ್ತೆ. ಮಳೆ ನಾಗರಕಲ್ಲನ್ನು ತೊಳೆದ ಬಳಿಕ ಪೂಜೆ ನಡೆಸಲಾಗುತ್ತದೆ. ಈ ನಂಬಿಕೆ ನಮ್ಮ ಜನರ ಮತ್ತು ಪ್ರಕೃತಿಯ ನಡುವಿನ ಆಳವಾದ ಸಂಬಂಧ ಯಾವ ಮಟ್ಟದ್ದು ಎಂಬುದಕ್ಕೆ ಸಾಕ್ಷಿ ಕೂಡ ಹೌದು. ಊರ ಹೊರಗಿನ ಕಾಡಿನ ಭಾಗದಲ್ಲಿರುವ ನಾಗರ ಕಟ್ಟೆಗೆ ಅಥವಾ ಅರಳಿ ಮರದ ಕೆಳಗಿನ ನಾಗರ ಮೂರ್ತಿಗೆ ಪೂಜೆ ಮಾಡಲಾಗುತ್ತದೆ. ಈ ಹಬ್ಬ ಪ್ರಕೃತಿಯ ಆರಾಧನೆ ಒಂದು ಭಾಗವಾಗಿ ಮಲೆನಾಡಲ್ಲಿ ಕಂಡು ಬರುತ್ತದೆ.

ನಾಗನಿಗೆ ಮಲೆನಾಡಿನ ಭಾಗದಲ್ಲಿ ಗುಡಿಗಳು ಕಡಿಮೆ. ಹಾಗೆ ನೆಲದ ಮೇಲೋ, ಅಥವ ಕಟ್ಟೆಯ ಮೇಲೆ ನಾಗರ ಕಲ್ಲುಗಳಿರುತ್ತವೆ. ಶತಶತಮಾನದ ನಾಗರ ಕಲ್ಲುಗಳು ಮಲೆನಾಡಿನ ಮೂಲೆ ಮೂಲೆಯಲ್ಲೂ ಕಾಣ ಸಿಗುತ್ತವೆ. ಅವಗಳಿಗೆ ಇದ್ದಂತೆಯೇ ಪೂಜೆಗಳು ನಡೆಯುತ್ತವೆ. ನಾಗರ ಪಂಚಮಿ ಬಳಿಕ ದೀಪಾವಳಿಗೆ ಇದೇ ನಾಗರ ಕ್ಲಲುಗಳಿಗೆ ಪೂಜೆ ನಡೆಯುತ್ತದೆ. ಬಳಿಕ ಒಂದು ವರ್ಷದ ವರೆಗೂ ಯಾವ ಪೂಜೆಗಳನ್ನು ಇವುಗಳಿಗೆ ಮಾಡಲಾಗುವುದಿಲ್ಲ. ಮತ್ತೆ ನಾಗರ ಪಂಚಮಿಗೆ ಅವುಗಳಿಗೆ ಪೂಜೆ ಮತ್ತು ನೈವೇದ್ಯ.

ಆ ದಿನದ ವಿಶೇಷವಾಗಿ ಪೂಜೆಗೆ ಹೂವು, ಹಣ್ಣು, ಹಾಲು ಹಾಗೂ ನೈವೇದ್ಯಕ್ಕೆ ರವೆ ಉಂಡೆ ಇಡಲಾಗುತ್ತದೆ. ಕೇದಿಗೆ ಹೂವು ವಿಶೇಷವಾಗಿ ಪೂಜೆಗೆ ಬಳಕೆ ಆಗುತ್ತದೆ. ಇನ್ನೂ ಹುತ್ತದ ಆರಾಧನೆ ಎಲ್ಲೂ ಕಂಡು ಬರುವುದಿಲ್ಲ. ಆ ದಿನ ರಾತ್ರಿ ಕೈಗೆ ಮದರಂಗಿ ಹಚ್ಚುವಂಥಹ ಪದ್ಧತಿ ಇದೆ. ಈ ಬಗ್ಗೆ ಒಂದು ಮಾತಿದೆ, ಹಾವಿನ ಹಬ್ಬದಲ್ಲಿ ಹಚ್ಚಿದ ಮದರಂಗಿ ಗೋವಿನ ಹಬ್ಬದ ತನಕ ಇರಬೇಕು ಎನ್ನಲಾಗುತ್ತದೆ. ಗೋವಿನ ಹಬ್ಬ ಎಂದರೆ ದೀಪಾವಳಿ, ಮಲೆನಾಡಲ್ಲಿ ದೀಪಾವಳಿಯ ದಿನ ಗೋವಿನ ಪೂಜೆ ಮಾಡಲಾಗುತ್ತದೆ.

ನಾಗ ದೇವರನ್ನು ವಿಶೇಷವಾಗಿ ಮಕ್ಕಳಿಲ್ಲದವರು ಪ್ರಾರ್ಥಿಸಿದರೆ ಸಂತಾನ ಭಾಗ್ಯ ಸಿಗಲಿದೆ ಎಂಬ ನಂಬಿಕೆ ಜನರಲ್ಲಿದೆ. ಮನೆಯ ಒಳಗಡೆ ನಾಗನನ್ನು ಪ್ರಾರ್ಥಿಸಲಾಗುತ್ತದೆ. ಆದರೆ ವಿಶೇಷವಾಗಿ ಮನೆಯ ಒಳಭಾಗದಲ್ಲಿ ನಾಗನನ್ನು ಪೂಜಿಸುವ ಪದ್ಧತಿ ಇಲ್ಲ.

(ಸಂಗ್ರಹ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ
July 13, 2026
2:42 PM
by: ಸಾಯಿಶೇಖರ್ ಕರಿಕಳ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror