ಸುದ್ದಿಗಳು

#NagaraPanchami | ಎಲ್ಲೆಲ್ಲೂ ನಾಗರಪಂಚಮಿ ಸಂಭ್ರಮ | ಪ್ರಕೃತಿಯ ಆರಾಧನೆಯ ಭಾಗವಾಗಿ ಮಲೆನಾಡ ನಾಗರ ಪಂಚಮಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಬಾರಿ ನಾಗರ ಪಂಚಮಿಯನ್ನು #NagaraPanchami ಆಗಸ್ಟ್‌ 21 ರಂದು ಆಚರಿಸಲಾಗುವುದು. ಈ ದಿನದಂದು ನಾಗನನ್ನು ಪೂಜಿಸಲಾಗುತ್ತದೆ. ವಾಸುಕಿ ನಾಗನು ಸಮುದ್ರ ಮಂಥನ ಸಮಯದಲ್ಲಿ ದೇವತೆಗಳಿಗೆ ಸಹಾಯ ಮಾಡಿದ್ದನು. ಆದ್ದರಿಂದ ದೇವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಈ ಹಬ್ಬವನ್ನು ನಾಗಪಂಚಮಿಯ ದಿನದಂದು ಆಚರಿಸಲಾಗುತ್ತದೆ. 

Advertisement

ಹೀಗೆ ಮಲೆನಾಡು, ಕರಾವಳಿಯಲ್ಲಿ ನಾಗರ ಪಂಚಮಿಯ ದಿನ ಮಳೆ ಬಂದೇ ಬರುತ್ತೆ. ಮಳೆ ನಾಗರಕಲ್ಲನ್ನು ತೊಳೆದ ಬಳಿಕ ಪೂಜೆ ನಡೆಸಲಾಗುತ್ತದೆ. ಈ ನಂಬಿಕೆ ನಮ್ಮ ಜನರ ಮತ್ತು ಪ್ರಕೃತಿಯ ನಡುವಿನ ಆಳವಾದ ಸಂಬಂಧ ಯಾವ ಮಟ್ಟದ್ದು ಎಂಬುದಕ್ಕೆ ಸಾಕ್ಷಿ ಕೂಡ ಹೌದು. ಊರ ಹೊರಗಿನ ಕಾಡಿನ ಭಾಗದಲ್ಲಿರುವ ನಾಗರ ಕಟ್ಟೆಗೆ ಅಥವಾ ಅರಳಿ ಮರದ ಕೆಳಗಿನ ನಾಗರ ಮೂರ್ತಿಗೆ ಪೂಜೆ ಮಾಡಲಾಗುತ್ತದೆ. ಈ ಹಬ್ಬ ಪ್ರಕೃತಿಯ ಆರಾಧನೆ ಒಂದು ಭಾಗವಾಗಿ ಮಲೆನಾಡಲ್ಲಿ ಕಂಡು ಬರುತ್ತದೆ.

ನಾಗನಿಗೆ ಮಲೆನಾಡಿನ ಭಾಗದಲ್ಲಿ ಗುಡಿಗಳು ಕಡಿಮೆ. ಹಾಗೆ ನೆಲದ ಮೇಲೋ, ಅಥವ ಕಟ್ಟೆಯ ಮೇಲೆ ನಾಗರ ಕಲ್ಲುಗಳಿರುತ್ತವೆ. ಶತಶತಮಾನದ ನಾಗರ ಕಲ್ಲುಗಳು ಮಲೆನಾಡಿನ ಮೂಲೆ ಮೂಲೆಯಲ್ಲೂ ಕಾಣ ಸಿಗುತ್ತವೆ. ಅವಗಳಿಗೆ ಇದ್ದಂತೆಯೇ ಪೂಜೆಗಳು ನಡೆಯುತ್ತವೆ. ನಾಗರ ಪಂಚಮಿ ಬಳಿಕ ದೀಪಾವಳಿಗೆ ಇದೇ ನಾಗರ ಕ್ಲಲುಗಳಿಗೆ ಪೂಜೆ ನಡೆಯುತ್ತದೆ. ಬಳಿಕ ಒಂದು ವರ್ಷದ ವರೆಗೂ ಯಾವ ಪೂಜೆಗಳನ್ನು ಇವುಗಳಿಗೆ ಮಾಡಲಾಗುವುದಿಲ್ಲ. ಮತ್ತೆ ನಾಗರ ಪಂಚಮಿಗೆ ಅವುಗಳಿಗೆ ಪೂಜೆ ಮತ್ತು ನೈವೇದ್ಯ.

ಆ ದಿನದ ವಿಶೇಷವಾಗಿ ಪೂಜೆಗೆ ಹೂವು, ಹಣ್ಣು, ಹಾಲು ಹಾಗೂ ನೈವೇದ್ಯಕ್ಕೆ ರವೆ ಉಂಡೆ ಇಡಲಾಗುತ್ತದೆ. ಕೇದಿಗೆ ಹೂವು ವಿಶೇಷವಾಗಿ ಪೂಜೆಗೆ ಬಳಕೆ ಆಗುತ್ತದೆ. ಇನ್ನೂ ಹುತ್ತದ ಆರಾಧನೆ ಎಲ್ಲೂ ಕಂಡು ಬರುವುದಿಲ್ಲ. ಆ ದಿನ ರಾತ್ರಿ ಕೈಗೆ ಮದರಂಗಿ ಹಚ್ಚುವಂಥಹ ಪದ್ಧತಿ ಇದೆ. ಈ ಬಗ್ಗೆ ಒಂದು ಮಾತಿದೆ, ಹಾವಿನ ಹಬ್ಬದಲ್ಲಿ ಹಚ್ಚಿದ ಮದರಂಗಿ ಗೋವಿನ ಹಬ್ಬದ ತನಕ ಇರಬೇಕು ಎನ್ನಲಾಗುತ್ತದೆ. ಗೋವಿನ ಹಬ್ಬ ಎಂದರೆ ದೀಪಾವಳಿ, ಮಲೆನಾಡಲ್ಲಿ ದೀಪಾವಳಿಯ ದಿನ ಗೋವಿನ ಪೂಜೆ ಮಾಡಲಾಗುತ್ತದೆ.

ನಾಗ ದೇವರನ್ನು ವಿಶೇಷವಾಗಿ ಮಕ್ಕಳಿಲ್ಲದವರು ಪ್ರಾರ್ಥಿಸಿದರೆ ಸಂತಾನ ಭಾಗ್ಯ ಸಿಗಲಿದೆ ಎಂಬ ನಂಬಿಕೆ ಜನರಲ್ಲಿದೆ. ಮನೆಯ ಒಳಗಡೆ ನಾಗನನ್ನು ಪ್ರಾರ್ಥಿಸಲಾಗುತ್ತದೆ. ಆದರೆ ವಿಶೇಷವಾಗಿ ಮನೆಯ ಒಳಭಾಗದಲ್ಲಿ ನಾಗನನ್ನು ಪೂಜಿಸುವ ಪದ್ಧತಿ ಇಲ್ಲ.

(ಸಂಗ್ರಹ)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

15 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

15 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

16 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

24 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

1 day ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

1 day ago