Advertisement
ಸುದ್ದಿಗಳು

#NagaraPanchami | ಎಲ್ಲೆಲ್ಲೂ ನಾಗರಪಂಚಮಿ ಸಂಭ್ರಮ | ಪ್ರಕೃತಿಯ ಆರಾಧನೆಯ ಭಾಗವಾಗಿ ಮಲೆನಾಡ ನಾಗರ ಪಂಚಮಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಬಾರಿ ನಾಗರ ಪಂಚಮಿಯನ್ನು #NagaraPanchami ಆಗಸ್ಟ್‌ 21 ರಂದು ಆಚರಿಸಲಾಗುವುದು. ಈ ದಿನದಂದು ನಾಗನನ್ನು ಪೂಜಿಸಲಾಗುತ್ತದೆ. ವಾಸುಕಿ ನಾಗನು ಸಮುದ್ರ ಮಂಥನ ಸಮಯದಲ್ಲಿ ದೇವತೆಗಳಿಗೆ ಸಹಾಯ ಮಾಡಿದ್ದನು. ಆದ್ದರಿಂದ ದೇವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಈ ಹಬ್ಬವನ್ನು ನಾಗಪಂಚಮಿಯ ದಿನದಂದು ಆಚರಿಸಲಾಗುತ್ತದೆ. 

Advertisement
Advertisement
Advertisement
Advertisement
Advertisement

ಹೀಗೆ ಮಲೆನಾಡು, ಕರಾವಳಿಯಲ್ಲಿ ನಾಗರ ಪಂಚಮಿಯ ದಿನ ಮಳೆ ಬಂದೇ ಬರುತ್ತೆ. ಮಳೆ ನಾಗರಕಲ್ಲನ್ನು ತೊಳೆದ ಬಳಿಕ ಪೂಜೆ ನಡೆಸಲಾಗುತ್ತದೆ. ಈ ನಂಬಿಕೆ ನಮ್ಮ ಜನರ ಮತ್ತು ಪ್ರಕೃತಿಯ ನಡುವಿನ ಆಳವಾದ ಸಂಬಂಧ ಯಾವ ಮಟ್ಟದ್ದು ಎಂಬುದಕ್ಕೆ ಸಾಕ್ಷಿ ಕೂಡ ಹೌದು. ಊರ ಹೊರಗಿನ ಕಾಡಿನ ಭಾಗದಲ್ಲಿರುವ ನಾಗರ ಕಟ್ಟೆಗೆ ಅಥವಾ ಅರಳಿ ಮರದ ಕೆಳಗಿನ ನಾಗರ ಮೂರ್ತಿಗೆ ಪೂಜೆ ಮಾಡಲಾಗುತ್ತದೆ. ಈ ಹಬ್ಬ ಪ್ರಕೃತಿಯ ಆರಾಧನೆ ಒಂದು ಭಾಗವಾಗಿ ಮಲೆನಾಡಲ್ಲಿ ಕಂಡು ಬರುತ್ತದೆ.

Advertisement

ನಾಗನಿಗೆ ಮಲೆನಾಡಿನ ಭಾಗದಲ್ಲಿ ಗುಡಿಗಳು ಕಡಿಮೆ. ಹಾಗೆ ನೆಲದ ಮೇಲೋ, ಅಥವ ಕಟ್ಟೆಯ ಮೇಲೆ ನಾಗರ ಕಲ್ಲುಗಳಿರುತ್ತವೆ. ಶತಶತಮಾನದ ನಾಗರ ಕಲ್ಲುಗಳು ಮಲೆನಾಡಿನ ಮೂಲೆ ಮೂಲೆಯಲ್ಲೂ ಕಾಣ ಸಿಗುತ್ತವೆ. ಅವಗಳಿಗೆ ಇದ್ದಂತೆಯೇ ಪೂಜೆಗಳು ನಡೆಯುತ್ತವೆ. ನಾಗರ ಪಂಚಮಿ ಬಳಿಕ ದೀಪಾವಳಿಗೆ ಇದೇ ನಾಗರ ಕ್ಲಲುಗಳಿಗೆ ಪೂಜೆ ನಡೆಯುತ್ತದೆ. ಬಳಿಕ ಒಂದು ವರ್ಷದ ವರೆಗೂ ಯಾವ ಪೂಜೆಗಳನ್ನು ಇವುಗಳಿಗೆ ಮಾಡಲಾಗುವುದಿಲ್ಲ. ಮತ್ತೆ ನಾಗರ ಪಂಚಮಿಗೆ ಅವುಗಳಿಗೆ ಪೂಜೆ ಮತ್ತು ನೈವೇದ್ಯ.

ಆ ದಿನದ ವಿಶೇಷವಾಗಿ ಪೂಜೆಗೆ ಹೂವು, ಹಣ್ಣು, ಹಾಲು ಹಾಗೂ ನೈವೇದ್ಯಕ್ಕೆ ರವೆ ಉಂಡೆ ಇಡಲಾಗುತ್ತದೆ. ಕೇದಿಗೆ ಹೂವು ವಿಶೇಷವಾಗಿ ಪೂಜೆಗೆ ಬಳಕೆ ಆಗುತ್ತದೆ. ಇನ್ನೂ ಹುತ್ತದ ಆರಾಧನೆ ಎಲ್ಲೂ ಕಂಡು ಬರುವುದಿಲ್ಲ. ಆ ದಿನ ರಾತ್ರಿ ಕೈಗೆ ಮದರಂಗಿ ಹಚ್ಚುವಂಥಹ ಪದ್ಧತಿ ಇದೆ. ಈ ಬಗ್ಗೆ ಒಂದು ಮಾತಿದೆ, ಹಾವಿನ ಹಬ್ಬದಲ್ಲಿ ಹಚ್ಚಿದ ಮದರಂಗಿ ಗೋವಿನ ಹಬ್ಬದ ತನಕ ಇರಬೇಕು ಎನ್ನಲಾಗುತ್ತದೆ. ಗೋವಿನ ಹಬ್ಬ ಎಂದರೆ ದೀಪಾವಳಿ, ಮಲೆನಾಡಲ್ಲಿ ದೀಪಾವಳಿಯ ದಿನ ಗೋವಿನ ಪೂಜೆ ಮಾಡಲಾಗುತ್ತದೆ.

Advertisement

ನಾಗ ದೇವರನ್ನು ವಿಶೇಷವಾಗಿ ಮಕ್ಕಳಿಲ್ಲದವರು ಪ್ರಾರ್ಥಿಸಿದರೆ ಸಂತಾನ ಭಾಗ್ಯ ಸಿಗಲಿದೆ ಎಂಬ ನಂಬಿಕೆ ಜನರಲ್ಲಿದೆ. ಮನೆಯ ಒಳಗಡೆ ನಾಗನನ್ನು ಪ್ರಾರ್ಥಿಸಲಾಗುತ್ತದೆ. ಆದರೆ ವಿಶೇಷವಾಗಿ ಮನೆಯ ಒಳಭಾಗದಲ್ಲಿ ನಾಗನನ್ನು ಪೂಜಿಸುವ ಪದ್ಧತಿ ಇಲ್ಲ.

(ಸಂಗ್ರಹ)

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭೂಮಿ,ಕಾವೇರಿ 2.0 ತಂತ್ರಾಂಶ ಲೋಪದೋಷ ನಿವಾರಣೆಗೆ ಕ್ರಮ

ವಿಧಾನ ಪರಿಷತ್  ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…

5 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…

5 hours ago

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |

ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ  ವಿದ್ಯುತ್ ಮಾರ್ಗವನ್ನು ಮತ್ತಷ್ಟು…

5 hours ago

ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…

6 hours ago

ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26  ಲಕ್ಷ…

6 hours ago

ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…

7 hours ago