Advertisement
ಸುದ್ದಿಗಳು

#NagaraPanchami | ಎಲ್ಲೆಲ್ಲೂ ನಾಗರಪಂಚಮಿ ಸಂಭ್ರಮ | ಪ್ರಕೃತಿಯ ಆರಾಧನೆಯ ಭಾಗವಾಗಿ ಮಲೆನಾಡ ನಾಗರ ಪಂಚಮಿ

Share

ಈ ಬಾರಿ ನಾಗರ ಪಂಚಮಿಯನ್ನು #NagaraPanchami ಆಗಸ್ಟ್‌ 21 ರಂದು ಆಚರಿಸಲಾಗುವುದು. ಈ ದಿನದಂದು ನಾಗನನ್ನು ಪೂಜಿಸಲಾಗುತ್ತದೆ. ವಾಸುಕಿ ನಾಗನು ಸಮುದ್ರ ಮಂಥನ ಸಮಯದಲ್ಲಿ ದೇವತೆಗಳಿಗೆ ಸಹಾಯ ಮಾಡಿದ್ದನು. ಆದ್ದರಿಂದ ದೇವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಈ ಹಬ್ಬವನ್ನು ನಾಗಪಂಚಮಿಯ ದಿನದಂದು ಆಚರಿಸಲಾಗುತ್ತದೆ. 

ಹೀಗೆ ಮಲೆನಾಡು, ಕರಾವಳಿಯಲ್ಲಿ ನಾಗರ ಪಂಚಮಿಯ ದಿನ ಮಳೆ ಬಂದೇ ಬರುತ್ತೆ. ಮಳೆ ನಾಗರಕಲ್ಲನ್ನು ತೊಳೆದ ಬಳಿಕ ಪೂಜೆ ನಡೆಸಲಾಗುತ್ತದೆ. ಈ ನಂಬಿಕೆ ನಮ್ಮ ಜನರ ಮತ್ತು ಪ್ರಕೃತಿಯ ನಡುವಿನ ಆಳವಾದ ಸಂಬಂಧ ಯಾವ ಮಟ್ಟದ್ದು ಎಂಬುದಕ್ಕೆ ಸಾಕ್ಷಿ ಕೂಡ ಹೌದು. ಊರ ಹೊರಗಿನ ಕಾಡಿನ ಭಾಗದಲ್ಲಿರುವ ನಾಗರ ಕಟ್ಟೆಗೆ ಅಥವಾ ಅರಳಿ ಮರದ ಕೆಳಗಿನ ನಾಗರ ಮೂರ್ತಿಗೆ ಪೂಜೆ ಮಾಡಲಾಗುತ್ತದೆ. ಈ ಹಬ್ಬ ಪ್ರಕೃತಿಯ ಆರಾಧನೆ ಒಂದು ಭಾಗವಾಗಿ ಮಲೆನಾಡಲ್ಲಿ ಕಂಡು ಬರುತ್ತದೆ.

ನಾಗನಿಗೆ ಮಲೆನಾಡಿನ ಭಾಗದಲ್ಲಿ ಗುಡಿಗಳು ಕಡಿಮೆ. ಹಾಗೆ ನೆಲದ ಮೇಲೋ, ಅಥವ ಕಟ್ಟೆಯ ಮೇಲೆ ನಾಗರ ಕಲ್ಲುಗಳಿರುತ್ತವೆ. ಶತಶತಮಾನದ ನಾಗರ ಕಲ್ಲುಗಳು ಮಲೆನಾಡಿನ ಮೂಲೆ ಮೂಲೆಯಲ್ಲೂ ಕಾಣ ಸಿಗುತ್ತವೆ. ಅವಗಳಿಗೆ ಇದ್ದಂತೆಯೇ ಪೂಜೆಗಳು ನಡೆಯುತ್ತವೆ. ನಾಗರ ಪಂಚಮಿ ಬಳಿಕ ದೀಪಾವಳಿಗೆ ಇದೇ ನಾಗರ ಕ್ಲಲುಗಳಿಗೆ ಪೂಜೆ ನಡೆಯುತ್ತದೆ. ಬಳಿಕ ಒಂದು ವರ್ಷದ ವರೆಗೂ ಯಾವ ಪೂಜೆಗಳನ್ನು ಇವುಗಳಿಗೆ ಮಾಡಲಾಗುವುದಿಲ್ಲ. ಮತ್ತೆ ನಾಗರ ಪಂಚಮಿಗೆ ಅವುಗಳಿಗೆ ಪೂಜೆ ಮತ್ತು ನೈವೇದ್ಯ.

ಆ ದಿನದ ವಿಶೇಷವಾಗಿ ಪೂಜೆಗೆ ಹೂವು, ಹಣ್ಣು, ಹಾಲು ಹಾಗೂ ನೈವೇದ್ಯಕ್ಕೆ ರವೆ ಉಂಡೆ ಇಡಲಾಗುತ್ತದೆ. ಕೇದಿಗೆ ಹೂವು ವಿಶೇಷವಾಗಿ ಪೂಜೆಗೆ ಬಳಕೆ ಆಗುತ್ತದೆ. ಇನ್ನೂ ಹುತ್ತದ ಆರಾಧನೆ ಎಲ್ಲೂ ಕಂಡು ಬರುವುದಿಲ್ಲ. ಆ ದಿನ ರಾತ್ರಿ ಕೈಗೆ ಮದರಂಗಿ ಹಚ್ಚುವಂಥಹ ಪದ್ಧತಿ ಇದೆ. ಈ ಬಗ್ಗೆ ಒಂದು ಮಾತಿದೆ, ಹಾವಿನ ಹಬ್ಬದಲ್ಲಿ ಹಚ್ಚಿದ ಮದರಂಗಿ ಗೋವಿನ ಹಬ್ಬದ ತನಕ ಇರಬೇಕು ಎನ್ನಲಾಗುತ್ತದೆ. ಗೋವಿನ ಹಬ್ಬ ಎಂದರೆ ದೀಪಾವಳಿ, ಮಲೆನಾಡಲ್ಲಿ ದೀಪಾವಳಿಯ ದಿನ ಗೋವಿನ ಪೂಜೆ ಮಾಡಲಾಗುತ್ತದೆ.

ನಾಗ ದೇವರನ್ನು ವಿಶೇಷವಾಗಿ ಮಕ್ಕಳಿಲ್ಲದವರು ಪ್ರಾರ್ಥಿಸಿದರೆ ಸಂತಾನ ಭಾಗ್ಯ ಸಿಗಲಿದೆ ಎಂಬ ನಂಬಿಕೆ ಜನರಲ್ಲಿದೆ. ಮನೆಯ ಒಳಗಡೆ ನಾಗನನ್ನು ಪ್ರಾರ್ಥಿಸಲಾಗುತ್ತದೆ. ಆದರೆ ವಿಶೇಷವಾಗಿ ಮನೆಯ ಒಳಭಾಗದಲ್ಲಿ ನಾಗನನ್ನು ಪೂಜಿಸುವ ಪದ್ಧತಿ ಇಲ್ಲ.

(ಸಂಗ್ರಹ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ

ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…

7 hours ago

ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ

ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…

7 hours ago

ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ

ಖಾರೀಫ್‌ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…

17 hours ago

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

1 day ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

1 day ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

2 days ago