Advertisement
ಸುದ್ದಿಗಳು

#NagaraPanchami | ಎಲ್ಲೆಲ್ಲೂ ನಾಗರಪಂಚಮಿ ಸಂಭ್ರಮ | ಪ್ರಕೃತಿಯ ಆರಾಧನೆಯ ಭಾಗವಾಗಿ ಮಲೆನಾಡ ನಾಗರ ಪಂಚಮಿ

Share

ಈ ಬಾರಿ ನಾಗರ ಪಂಚಮಿಯನ್ನು #NagaraPanchami ಆಗಸ್ಟ್‌ 21 ರಂದು ಆಚರಿಸಲಾಗುವುದು. ಈ ದಿನದಂದು ನಾಗನನ್ನು ಪೂಜಿಸಲಾಗುತ್ತದೆ. ವಾಸುಕಿ ನಾಗನು ಸಮುದ್ರ ಮಂಥನ ಸಮಯದಲ್ಲಿ ದೇವತೆಗಳಿಗೆ ಸಹಾಯ ಮಾಡಿದ್ದನು. ಆದ್ದರಿಂದ ದೇವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಈ ಹಬ್ಬವನ್ನು ನಾಗಪಂಚಮಿಯ ದಿನದಂದು ಆಚರಿಸಲಾಗುತ್ತದೆ. 

ಹೀಗೆ ಮಲೆನಾಡು, ಕರಾವಳಿಯಲ್ಲಿ ನಾಗರ ಪಂಚಮಿಯ ದಿನ ಮಳೆ ಬಂದೇ ಬರುತ್ತೆ. ಮಳೆ ನಾಗರಕಲ್ಲನ್ನು ತೊಳೆದ ಬಳಿಕ ಪೂಜೆ ನಡೆಸಲಾಗುತ್ತದೆ. ಈ ನಂಬಿಕೆ ನಮ್ಮ ಜನರ ಮತ್ತು ಪ್ರಕೃತಿಯ ನಡುವಿನ ಆಳವಾದ ಸಂಬಂಧ ಯಾವ ಮಟ್ಟದ್ದು ಎಂಬುದಕ್ಕೆ ಸಾಕ್ಷಿ ಕೂಡ ಹೌದು. ಊರ ಹೊರಗಿನ ಕಾಡಿನ ಭಾಗದಲ್ಲಿರುವ ನಾಗರ ಕಟ್ಟೆಗೆ ಅಥವಾ ಅರಳಿ ಮರದ ಕೆಳಗಿನ ನಾಗರ ಮೂರ್ತಿಗೆ ಪೂಜೆ ಮಾಡಲಾಗುತ್ತದೆ. ಈ ಹಬ್ಬ ಪ್ರಕೃತಿಯ ಆರಾಧನೆ ಒಂದು ಭಾಗವಾಗಿ ಮಲೆನಾಡಲ್ಲಿ ಕಂಡು ಬರುತ್ತದೆ.

ನಾಗನಿಗೆ ಮಲೆನಾಡಿನ ಭಾಗದಲ್ಲಿ ಗುಡಿಗಳು ಕಡಿಮೆ. ಹಾಗೆ ನೆಲದ ಮೇಲೋ, ಅಥವ ಕಟ್ಟೆಯ ಮೇಲೆ ನಾಗರ ಕಲ್ಲುಗಳಿರುತ್ತವೆ. ಶತಶತಮಾನದ ನಾಗರ ಕಲ್ಲುಗಳು ಮಲೆನಾಡಿನ ಮೂಲೆ ಮೂಲೆಯಲ್ಲೂ ಕಾಣ ಸಿಗುತ್ತವೆ. ಅವಗಳಿಗೆ ಇದ್ದಂತೆಯೇ ಪೂಜೆಗಳು ನಡೆಯುತ್ತವೆ. ನಾಗರ ಪಂಚಮಿ ಬಳಿಕ ದೀಪಾವಳಿಗೆ ಇದೇ ನಾಗರ ಕ್ಲಲುಗಳಿಗೆ ಪೂಜೆ ನಡೆಯುತ್ತದೆ. ಬಳಿಕ ಒಂದು ವರ್ಷದ ವರೆಗೂ ಯಾವ ಪೂಜೆಗಳನ್ನು ಇವುಗಳಿಗೆ ಮಾಡಲಾಗುವುದಿಲ್ಲ. ಮತ್ತೆ ನಾಗರ ಪಂಚಮಿಗೆ ಅವುಗಳಿಗೆ ಪೂಜೆ ಮತ್ತು ನೈವೇದ್ಯ.

ಆ ದಿನದ ವಿಶೇಷವಾಗಿ ಪೂಜೆಗೆ ಹೂವು, ಹಣ್ಣು, ಹಾಲು ಹಾಗೂ ನೈವೇದ್ಯಕ್ಕೆ ರವೆ ಉಂಡೆ ಇಡಲಾಗುತ್ತದೆ. ಕೇದಿಗೆ ಹೂವು ವಿಶೇಷವಾಗಿ ಪೂಜೆಗೆ ಬಳಕೆ ಆಗುತ್ತದೆ. ಇನ್ನೂ ಹುತ್ತದ ಆರಾಧನೆ ಎಲ್ಲೂ ಕಂಡು ಬರುವುದಿಲ್ಲ. ಆ ದಿನ ರಾತ್ರಿ ಕೈಗೆ ಮದರಂಗಿ ಹಚ್ಚುವಂಥಹ ಪದ್ಧತಿ ಇದೆ. ಈ ಬಗ್ಗೆ ಒಂದು ಮಾತಿದೆ, ಹಾವಿನ ಹಬ್ಬದಲ್ಲಿ ಹಚ್ಚಿದ ಮದರಂಗಿ ಗೋವಿನ ಹಬ್ಬದ ತನಕ ಇರಬೇಕು ಎನ್ನಲಾಗುತ್ತದೆ. ಗೋವಿನ ಹಬ್ಬ ಎಂದರೆ ದೀಪಾವಳಿ, ಮಲೆನಾಡಲ್ಲಿ ದೀಪಾವಳಿಯ ದಿನ ಗೋವಿನ ಪೂಜೆ ಮಾಡಲಾಗುತ್ತದೆ.

ನಾಗ ದೇವರನ್ನು ವಿಶೇಷವಾಗಿ ಮಕ್ಕಳಿಲ್ಲದವರು ಪ್ರಾರ್ಥಿಸಿದರೆ ಸಂತಾನ ಭಾಗ್ಯ ಸಿಗಲಿದೆ ಎಂಬ ನಂಬಿಕೆ ಜನರಲ್ಲಿದೆ. ಮನೆಯ ಒಳಗಡೆ ನಾಗನನ್ನು ಪ್ರಾರ್ಥಿಸಲಾಗುತ್ತದೆ. ಆದರೆ ವಿಶೇಷವಾಗಿ ಮನೆಯ ಒಳಭಾಗದಲ್ಲಿ ನಾಗನನ್ನು ಪೂಜಿಸುವ ಪದ್ಧತಿ ಇಲ್ಲ.

(ಸಂಗ್ರಹ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

20 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago