Advertisement
ಸುದ್ದಿಗಳು

#NagaraPanchami | ಎಲ್ಲೆಲ್ಲೂ ನಾಗರಪಂಚಮಿ ಸಂಭ್ರಮ | ಪ್ರಕೃತಿಯ ಆರಾಧನೆಯ ಭಾಗವಾಗಿ ಮಲೆನಾಡ ನಾಗರ ಪಂಚಮಿ

Share

ಈ ಬಾರಿ ನಾಗರ ಪಂಚಮಿಯನ್ನು #NagaraPanchami ಆಗಸ್ಟ್‌ 21 ರಂದು ಆಚರಿಸಲಾಗುವುದು. ಈ ದಿನದಂದು ನಾಗನನ್ನು ಪೂಜಿಸಲಾಗುತ್ತದೆ. ವಾಸುಕಿ ನಾಗನು ಸಮುದ್ರ ಮಂಥನ ಸಮಯದಲ್ಲಿ ದೇವತೆಗಳಿಗೆ ಸಹಾಯ ಮಾಡಿದ್ದನು. ಆದ್ದರಿಂದ ದೇವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಈ ಹಬ್ಬವನ್ನು ನಾಗಪಂಚಮಿಯ ದಿನದಂದು ಆಚರಿಸಲಾಗುತ್ತದೆ. 

ಹೀಗೆ ಮಲೆನಾಡು, ಕರಾವಳಿಯಲ್ಲಿ ನಾಗರ ಪಂಚಮಿಯ ದಿನ ಮಳೆ ಬಂದೇ ಬರುತ್ತೆ. ಮಳೆ ನಾಗರಕಲ್ಲನ್ನು ತೊಳೆದ ಬಳಿಕ ಪೂಜೆ ನಡೆಸಲಾಗುತ್ತದೆ. ಈ ನಂಬಿಕೆ ನಮ್ಮ ಜನರ ಮತ್ತು ಪ್ರಕೃತಿಯ ನಡುವಿನ ಆಳವಾದ ಸಂಬಂಧ ಯಾವ ಮಟ್ಟದ್ದು ಎಂಬುದಕ್ಕೆ ಸಾಕ್ಷಿ ಕೂಡ ಹೌದು. ಊರ ಹೊರಗಿನ ಕಾಡಿನ ಭಾಗದಲ್ಲಿರುವ ನಾಗರ ಕಟ್ಟೆಗೆ ಅಥವಾ ಅರಳಿ ಮರದ ಕೆಳಗಿನ ನಾಗರ ಮೂರ್ತಿಗೆ ಪೂಜೆ ಮಾಡಲಾಗುತ್ತದೆ. ಈ ಹಬ್ಬ ಪ್ರಕೃತಿಯ ಆರಾಧನೆ ಒಂದು ಭಾಗವಾಗಿ ಮಲೆನಾಡಲ್ಲಿ ಕಂಡು ಬರುತ್ತದೆ.

ನಾಗನಿಗೆ ಮಲೆನಾಡಿನ ಭಾಗದಲ್ಲಿ ಗುಡಿಗಳು ಕಡಿಮೆ. ಹಾಗೆ ನೆಲದ ಮೇಲೋ, ಅಥವ ಕಟ್ಟೆಯ ಮೇಲೆ ನಾಗರ ಕಲ್ಲುಗಳಿರುತ್ತವೆ. ಶತಶತಮಾನದ ನಾಗರ ಕಲ್ಲುಗಳು ಮಲೆನಾಡಿನ ಮೂಲೆ ಮೂಲೆಯಲ್ಲೂ ಕಾಣ ಸಿಗುತ್ತವೆ. ಅವಗಳಿಗೆ ಇದ್ದಂತೆಯೇ ಪೂಜೆಗಳು ನಡೆಯುತ್ತವೆ. ನಾಗರ ಪಂಚಮಿ ಬಳಿಕ ದೀಪಾವಳಿಗೆ ಇದೇ ನಾಗರ ಕ್ಲಲುಗಳಿಗೆ ಪೂಜೆ ನಡೆಯುತ್ತದೆ. ಬಳಿಕ ಒಂದು ವರ್ಷದ ವರೆಗೂ ಯಾವ ಪೂಜೆಗಳನ್ನು ಇವುಗಳಿಗೆ ಮಾಡಲಾಗುವುದಿಲ್ಲ. ಮತ್ತೆ ನಾಗರ ಪಂಚಮಿಗೆ ಅವುಗಳಿಗೆ ಪೂಜೆ ಮತ್ತು ನೈವೇದ್ಯ.

ಆ ದಿನದ ವಿಶೇಷವಾಗಿ ಪೂಜೆಗೆ ಹೂವು, ಹಣ್ಣು, ಹಾಲು ಹಾಗೂ ನೈವೇದ್ಯಕ್ಕೆ ರವೆ ಉಂಡೆ ಇಡಲಾಗುತ್ತದೆ. ಕೇದಿಗೆ ಹೂವು ವಿಶೇಷವಾಗಿ ಪೂಜೆಗೆ ಬಳಕೆ ಆಗುತ್ತದೆ. ಇನ್ನೂ ಹುತ್ತದ ಆರಾಧನೆ ಎಲ್ಲೂ ಕಂಡು ಬರುವುದಿಲ್ಲ. ಆ ದಿನ ರಾತ್ರಿ ಕೈಗೆ ಮದರಂಗಿ ಹಚ್ಚುವಂಥಹ ಪದ್ಧತಿ ಇದೆ. ಈ ಬಗ್ಗೆ ಒಂದು ಮಾತಿದೆ, ಹಾವಿನ ಹಬ್ಬದಲ್ಲಿ ಹಚ್ಚಿದ ಮದರಂಗಿ ಗೋವಿನ ಹಬ್ಬದ ತನಕ ಇರಬೇಕು ಎನ್ನಲಾಗುತ್ತದೆ. ಗೋವಿನ ಹಬ್ಬ ಎಂದರೆ ದೀಪಾವಳಿ, ಮಲೆನಾಡಲ್ಲಿ ದೀಪಾವಳಿಯ ದಿನ ಗೋವಿನ ಪೂಜೆ ಮಾಡಲಾಗುತ್ತದೆ.

ನಾಗ ದೇವರನ್ನು ವಿಶೇಷವಾಗಿ ಮಕ್ಕಳಿಲ್ಲದವರು ಪ್ರಾರ್ಥಿಸಿದರೆ ಸಂತಾನ ಭಾಗ್ಯ ಸಿಗಲಿದೆ ಎಂಬ ನಂಬಿಕೆ ಜನರಲ್ಲಿದೆ. ಮನೆಯ ಒಳಗಡೆ ನಾಗನನ್ನು ಪ್ರಾರ್ಥಿಸಲಾಗುತ್ತದೆ. ಆದರೆ ವಿಶೇಷವಾಗಿ ಮನೆಯ ಒಳಭಾಗದಲ್ಲಿ ನಾಗನನ್ನು ಪೂಜಿಸುವ ಪದ್ಧತಿ ಇಲ್ಲ.

(ಸಂಗ್ರಹ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

1 hour ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

2 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

24 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago