Advertisement
ಸುದ್ದಿಗಳು

#NagaraPanchami | ಎಲ್ಲೆಲ್ಲೂ ನಾಗರಪಂಚಮಿ ಸಂಭ್ರಮ | ಪ್ರಕೃತಿಯ ಆರಾಧನೆಯ ಭಾಗವಾಗಿ ಮಲೆನಾಡ ನಾಗರ ಪಂಚಮಿ

Share

ಈ ಬಾರಿ ನಾಗರ ಪಂಚಮಿಯನ್ನು #NagaraPanchami ಆಗಸ್ಟ್‌ 21 ರಂದು ಆಚರಿಸಲಾಗುವುದು. ಈ ದಿನದಂದು ನಾಗನನ್ನು ಪೂಜಿಸಲಾಗುತ್ತದೆ. ವಾಸುಕಿ ನಾಗನು ಸಮುದ್ರ ಮಂಥನ ಸಮಯದಲ್ಲಿ ದೇವತೆಗಳಿಗೆ ಸಹಾಯ ಮಾಡಿದ್ದನು. ಆದ್ದರಿಂದ ದೇವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಈ ಹಬ್ಬವನ್ನು ನಾಗಪಂಚಮಿಯ ದಿನದಂದು ಆಚರಿಸಲಾಗುತ್ತದೆ. 

ಹೀಗೆ ಮಲೆನಾಡು, ಕರಾವಳಿಯಲ್ಲಿ ನಾಗರ ಪಂಚಮಿಯ ದಿನ ಮಳೆ ಬಂದೇ ಬರುತ್ತೆ. ಮಳೆ ನಾಗರಕಲ್ಲನ್ನು ತೊಳೆದ ಬಳಿಕ ಪೂಜೆ ನಡೆಸಲಾಗುತ್ತದೆ. ಈ ನಂಬಿಕೆ ನಮ್ಮ ಜನರ ಮತ್ತು ಪ್ರಕೃತಿಯ ನಡುವಿನ ಆಳವಾದ ಸಂಬಂಧ ಯಾವ ಮಟ್ಟದ್ದು ಎಂಬುದಕ್ಕೆ ಸಾಕ್ಷಿ ಕೂಡ ಹೌದು. ಊರ ಹೊರಗಿನ ಕಾಡಿನ ಭಾಗದಲ್ಲಿರುವ ನಾಗರ ಕಟ್ಟೆಗೆ ಅಥವಾ ಅರಳಿ ಮರದ ಕೆಳಗಿನ ನಾಗರ ಮೂರ್ತಿಗೆ ಪೂಜೆ ಮಾಡಲಾಗುತ್ತದೆ. ಈ ಹಬ್ಬ ಪ್ರಕೃತಿಯ ಆರಾಧನೆ ಒಂದು ಭಾಗವಾಗಿ ಮಲೆನಾಡಲ್ಲಿ ಕಂಡು ಬರುತ್ತದೆ.

ನಾಗನಿಗೆ ಮಲೆನಾಡಿನ ಭಾಗದಲ್ಲಿ ಗುಡಿಗಳು ಕಡಿಮೆ. ಹಾಗೆ ನೆಲದ ಮೇಲೋ, ಅಥವ ಕಟ್ಟೆಯ ಮೇಲೆ ನಾಗರ ಕಲ್ಲುಗಳಿರುತ್ತವೆ. ಶತಶತಮಾನದ ನಾಗರ ಕಲ್ಲುಗಳು ಮಲೆನಾಡಿನ ಮೂಲೆ ಮೂಲೆಯಲ್ಲೂ ಕಾಣ ಸಿಗುತ್ತವೆ. ಅವಗಳಿಗೆ ಇದ್ದಂತೆಯೇ ಪೂಜೆಗಳು ನಡೆಯುತ್ತವೆ. ನಾಗರ ಪಂಚಮಿ ಬಳಿಕ ದೀಪಾವಳಿಗೆ ಇದೇ ನಾಗರ ಕ್ಲಲುಗಳಿಗೆ ಪೂಜೆ ನಡೆಯುತ್ತದೆ. ಬಳಿಕ ಒಂದು ವರ್ಷದ ವರೆಗೂ ಯಾವ ಪೂಜೆಗಳನ್ನು ಇವುಗಳಿಗೆ ಮಾಡಲಾಗುವುದಿಲ್ಲ. ಮತ್ತೆ ನಾಗರ ಪಂಚಮಿಗೆ ಅವುಗಳಿಗೆ ಪೂಜೆ ಮತ್ತು ನೈವೇದ್ಯ.

ಆ ದಿನದ ವಿಶೇಷವಾಗಿ ಪೂಜೆಗೆ ಹೂವು, ಹಣ್ಣು, ಹಾಲು ಹಾಗೂ ನೈವೇದ್ಯಕ್ಕೆ ರವೆ ಉಂಡೆ ಇಡಲಾಗುತ್ತದೆ. ಕೇದಿಗೆ ಹೂವು ವಿಶೇಷವಾಗಿ ಪೂಜೆಗೆ ಬಳಕೆ ಆಗುತ್ತದೆ. ಇನ್ನೂ ಹುತ್ತದ ಆರಾಧನೆ ಎಲ್ಲೂ ಕಂಡು ಬರುವುದಿಲ್ಲ. ಆ ದಿನ ರಾತ್ರಿ ಕೈಗೆ ಮದರಂಗಿ ಹಚ್ಚುವಂಥಹ ಪದ್ಧತಿ ಇದೆ. ಈ ಬಗ್ಗೆ ಒಂದು ಮಾತಿದೆ, ಹಾವಿನ ಹಬ್ಬದಲ್ಲಿ ಹಚ್ಚಿದ ಮದರಂಗಿ ಗೋವಿನ ಹಬ್ಬದ ತನಕ ಇರಬೇಕು ಎನ್ನಲಾಗುತ್ತದೆ. ಗೋವಿನ ಹಬ್ಬ ಎಂದರೆ ದೀಪಾವಳಿ, ಮಲೆನಾಡಲ್ಲಿ ದೀಪಾವಳಿಯ ದಿನ ಗೋವಿನ ಪೂಜೆ ಮಾಡಲಾಗುತ್ತದೆ.

ನಾಗ ದೇವರನ್ನು ವಿಶೇಷವಾಗಿ ಮಕ್ಕಳಿಲ್ಲದವರು ಪ್ರಾರ್ಥಿಸಿದರೆ ಸಂತಾನ ಭಾಗ್ಯ ಸಿಗಲಿದೆ ಎಂಬ ನಂಬಿಕೆ ಜನರಲ್ಲಿದೆ. ಮನೆಯ ಒಳಗಡೆ ನಾಗನನ್ನು ಪ್ರಾರ್ಥಿಸಲಾಗುತ್ತದೆ. ಆದರೆ ವಿಶೇಷವಾಗಿ ಮನೆಯ ಒಳಭಾಗದಲ್ಲಿ ನಾಗನನ್ನು ಪೂಜಿಸುವ ಪದ್ಧತಿ ಇಲ್ಲ.

(ಸಂಗ್ರಹ)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

1 hour ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

1 hour ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

19 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago