Advertisement
Opinion

#NagaraPamchami | ಬಂದಿದೆ ನಾಗರ ಪಂಚಮಿ…. ನಾಗರ ಹಾವುಗಳು ಕಾಣಿಸುತ್ತಿಲ್ಲ….!!

Share

ನಮ್ಮ ಮಲೆನಾಡಿನಲ್ಲಿ ಒಂದು ಇಪ್ಪತ್ತು ವರ್ಷಗಳ ಹಿಂದೆ ಯಥೇಚ್ಛವಾಗಿ ಇದ್ದ “ನಾಗರ ಹಾವು ” ಸರ್ಪ ಸಂಕುಲ ಇವತ್ತು ಅಪರೂಪದಲ್ಲಿ ಅಪರೂಪವಾಗಿರುವುದು ಕಳವಳಕಾರಿಯಾಗಿದೆ.

ಈಗ ಹಿಂದೆಂದಿಗಿಂತ ನಾಗಾರಾಧನೆ ಹೆಚ್ಚಾಗಿದೆ‌ . ಯಾರೇ ಜಾತಕ ತಗೊಂಡು ಜ್ಯೋತಿಷಿಗಳ ಬಳಿ ಹೋದರೂ ” ಜಾತಕ ನಿಗೆ” ನಾಗದೋಷ ಇದೆ ಎಂದು ಹೇಳಿ “ಸರ್ಪ ಸಂಸ್ಕಾರ” ದ ಚೀಟಿ ಬರೆದು ಕೊಡುತ್ತಾರೆ.‌ಆದ ಕಾರಣ ಚಂದ ಚಂದದ ನಾಗ ಶಿಲ್ಪಗಳು , ಅದ್ದೂರಿ ನಾಗರ ಕಟ್ಟೆಯಲ್ಲಿ ಪ್ರತಿಷ್ಠಾಪಿತವಾಗಿ ವಿರಾಜಮಾನವಾಗಿ ನಾಗರ ಪಂಚಮಿಯಲ್ಲದೇ ಬೇರೆ ವಿಶೇಷ ದಿನಗಳಲ್ಲೂ ಪೂಜೆ ಪುನಸ್ಕಾರ ಪಡೆಯುತ್ತಿವೆ.

ಆದರೆ ನಾಗರ ಈ ವೈಭವತೆ ಪಡೆಯುವ ಹೊತ್ತಿನಲ್ಲೇ ನಿಜ ನಾಗರಹಾವುಗಳು ಕಣ್ಣಿಗೆ ಕಾಣಿಸುತ್ತಿಲ್ಲ…!!.  ಈ ಕಪ್ಪೆ , ಆಮೆ , ಏಡಿ ಮುಂತಾದವುಗಳ ಜೊತೆಯಲ್ಲಿ ನಾಗರ ಹಾವು ಕೇರೆ ಹಾವೂ ಕಾಣದಂತಾಗಿರುವುದು ನಿಸರ್ಗದ ಕಳವಳಕಾರಿ ಬೆಳವಣಿಗೆಯಾಗಿದೆ. ಈ “ನಿಜ ನಾಗರ ಹಾವಿ”ನ ಸಂತತಿ ಕ್ಷೀಣಿಸುತ್ತಿರುವ ಬಗ್ಗೆ ಯಾರು ಏನೆನ್ನುತ್ತಾರೋ ಗೊತ್ತಿಲ್ಲ…!?

ಈ ನಾಗ ಸಂತತಿ ಕ್ಷೀಣಿಸಲು ಇತ್ತೀಚೆಗೆ ಮಲೆನಾಡಿನಲ್ಲಿ ಹೆಚ್ಚಿರುವ ಜೆಸಿಬಿ ಕೆಲಸಗಳೂ ಬಹು ಮುಖ್ಯ ಕಾರಣ ಎನಿಸುತ್ತದೆ. ಜೆಸಿಬಿ ಕೆಲಸಗಳು ಮಣ್ಣಿನ ಅಡಿಯಲ್ಲಿನ‌ ನಾಗರ ಹಾವಿನ ಆವಾಸ ಸ್ಥಾನವನ್ನು ನಾಶ ಮಾಡುತ್ತಿರುವುದು ನಾಗರ ಹಾವು ಗಳಿಗೆ ನೆಲೆಯಿಲ್ಲದಂತಾಗಿದೆ. ಪ್ರಾಕೃತಿಕವಾಗಿಯೂ ಆಹಾರ ಸರಪಳಿಯಲ್ಲಿನ ತಪ್ಪಿರುವ ಕೊಂಡಿಯೂ ಕಾರಣವಾಗುತ್ತದೆ.

ಆಗುಂಬೆಯ ಕಾಳಿಂಗ ಸರ್ಪ ಉದ್ಯಾನ ಕೇಂದ್ರ ಮಾಡಿದ ಮೇಲೆ ಮಲೆನಾಡು ಕರಾವಳಿಯ ನೂರು ಕಿಮೀ ಫಸಲೆಯಲ್ಲಿ‌
(ಸುತ್ತ ಮುತ್ತಲಿನ ಪರಿಸರದಲ್ಲಿ) ಎಲ್ಲೇ ಕಾಳಿಂಗ ಸರ್ಪ ಕಾಣಿಸಿಕೊಂಡರೂ ಅದನ್ನು ಆಗುಂಬೆಗೆ ತೆಗೆದುಕೊಂಡು ಹೋಗಿ ಬಿಡುತ್ತಾರೆ.ಆಗುಂಬೆ – ಮಲೆನಾಡು ಪ್ರದೇಶದಲ್ಲಿ ವಿಪರೀತ ಹೆಚ್ಚಿದ ಕಾಳಿಂಗ ಸರ್ಪಗಳು.

ಪರಿಸರದಲ್ಲಿ ಯಾವತ್ತೂ ಏಕಜಾತಿಯ ಪ್ರಾಣಿ ಗಳೂ, ಕೃಷಿ ಹೆಚ್ಚಾಗುವುದು ನಿಸರ್ಗ ಸಹಜತೆಗೆ ವಿರೋಧವಾಗಿರುತ್ತದೆ.
ನಿಸರ್ಗದಲ್ಲಿ “ವೈವಿಧ್ಯತೆ ” ಇರಲೇ ಬೇಕು.ಆದರೆ ಈಗ ನಮ್ಮ ಮಲೆನಾಡಿನಲ್ಲಿ ವೈವಿಧ್ಯತೆಯೇ ಇಲ್ಲವಾಗಿದೆ. ಈ ಏಕಜಾತಿ ಸರಣಿಯಲ್ಲಿ ಅಡಿಕೆ ಕೃಷಿ, ಮಂಗನ ಸಂತತಿಯ ಜೊತೆಯಲ್ಲಿ ಕಾಳಿಂಗ ಸರ್ಪಗಳ ಹೆಚ್ಚಳ ಕೂಡ ಸೇರಿದೆ.

ಕಾಳಿಂಗ ಸರ್ಪಗಳು ತಾವಿದ್ದ ಸ್ಥಳದಿಂದ ಎಂಬತ್ತು ಕಿಲೋಮೀಟರ್ ವಿಸ್ತೀರ್ಣದಲ್ಲಿ ಸಂಚರಿಸುತ್ತವೆ. ಅವಕ್ಕೆ ಅವುಗಳ ಆಹಾರ ವಾದ ನಾಗರಹಾವುಗಳೂ , ಕೇರೆ ಹಾವುಗಳು ಎಲ್ಲೇ ಅಡಗಿದ್ದರೂ ತಿಳಿಯುತ್ತದೆ. ಕಾಳಿಂಗ ಸರ್ಪ ಗಳು ನಾಗರ ಹಾವುಗಳನ್ನು ಹುಡುಕಿ ಹುಡುಕಿ ತಿನ್ನುತ್ತಿವೆ….

ನಾನು ಈಗ್ಗೆ ಕೆಲವು ವರ್ಷಗಳಿಂದ ನಾಗರಹಾವು ಗಳನ್ನೇ ನೋಡಿಲ್ಲ..!!. “ನಾಗರ ಹಾವುಗಳು” ಇಲ್ಲವೇ ಇಲ್ಲ ಎನ್ನುವ ಮಟ್ಟಿಗೆ ಕಾಣೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಪಾಪದ ಜೀವಿಗಳಾದ ನಾಗರ ಹಾವು ಗಳು ಇತ್ತೀಚಿನ ವರ್ಷಗಳಲ್ಲಿ ಮನುಷ್ಯ ನಿಂದ ಪೂಜೆ ಪುನಸ್ಕಾರವನ್ನು ಪಡೆಯುವ ಕಾಲದಲ್ಲಿ ನಿಜ ನಾಗರ ಹಾವಿನ ಸಂತತಿ ನಾಶವಾಗುತ್ತಿರುವುದು ಚಿಂತನೆ ಮಾಡುವ ಸಂಗತಿಯಾಗಿದೆ.

ಮಲೆನಾಡು ಕರಾವಳಿಯ ಸುತ್ತ ಮುತ್ತ ಎಲ್ಲೇ ಕಾಳಿಂಗ ಸರ್ಪ ಸಿಕ್ಕರೂ ಆ ಕಾಳಿಂಗ ಸರ್ಪವನ್ನು ” ಆಗುಂಬೆ” ಗೆ ತಂದು ಬಿಡುವುದನ್ನ ನಿಲ್ಲಿಸಬೇಕು. ‌ಅರಣ್ಯ ಇಲಾಖೆ ಮತ್ತು ಪರಿಸರ ಪರರು ಈ ಬಗ್ಗೆ ಚಿಂತನೆ ನೆಡಸಿ ಕಾರ್ಯೋನ್ಮುಖವಾಗಲಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

10 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago