ಅನುಕ್ರಮ

ನಾಗರಪಂಚಮಿ ನಾಡಿಗೆ ದೊಡ್ಡದು | ತುಳುನಾಡಿನಲ್ಲಿ ಭಕ್ತಿ ಭಾವದಿಂದ ನಾಗಾರಾಧನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಬ್ಬಗಳ ಸಂಭ್ರಮಕ್ಕೆ ನಾಂದಿ ಹಾಡುವುದು ನಾಗರಪಂಚಮಿ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಇಂದು ದೇವಾಲಯಗಳಲ್ಲಿ, ನಾಗನ ಕಟ್ಟೆಗಳಲ್ಲಿ ನಾಗ ದೇವರನ್ನು ಆರಾಧಿಸಲಾಗುತ್ತದೆ. ನಾಗನ ಕಲ್ಲಿಗೆ ಹಾಲೆರೆದು ಅಭಿಷೇಕ ಮಾಡಿ ನೈವೇದ್ಯ ಸಲ್ಲಿಸುವುದು ನಡೆಸಿಕೊಂಡು ಬಂದ ಪದ್ಧತಿ. ನಾಗನ ತಂಬಿಲವೂ ವಿಶೇಷವಾದ ಸೇವೆ. ದೇಶದೆಲ್ಲೆಡೆ ನಾಗರಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತದೆ.

Advertisement
Advertisement

ನಾಗರಪಂಚಮಿಯನ್ನು ಅಣ್ಣ ತಂಗಿ ಒಟ್ಟಾಗಿ ಆಚರಿಸುವ ಹಬ್ಬವೆಂಬ ಮಾತಿದೆ. ಇನ್ನು ತಂದೆ ಪರೀಕ್ಷಿತನ ಸಾವಿಗೆ ಒಂದು ಹಾವು ಕಾರಣವೆಂದು ‌ ಜನಮೇಯ ರಾಜ ಒಂದು ಸರ್ಪಯಾಗ ಮಾಡಿದನು. ಸರ್ಪಗಳೆಲ್ಲ ಯಜ್ಞ ಕುಂಡಕ್ಕೆ ಆಹುತಿಯಾಗ ತೊಡಗಿದುವು. ಆಗ ಸರ್ಪಗಳ ಹಿತೈಷಿ ಆಸ್ತಿಕ ಮುನಿಯು ಜನಮೇಯ ರಾಜನನ್ನು ಪ್ರಸನ್ನಗೊಳಿಸಿದನು. ಆಗ ರಾಜ ವರವೊಂದನ್ನು ಕೇಳೆಂದು ಹೇಳಿದಾಗ ಸರ್ಪಯಜ್ಞವನ್ನು ನಿಲ್ಲಿಸುವಂತೆ ಕೇಳಿಕೊಂಡನು. ಹೀಗೆ ಸರ್ಪಯಾಗ ನಿಂತ ದಿನವೇ ನಾಗರಪಂಚಮಿಯಾಗಿತ್ತು.

ಜಗತ್ತಿನಲ್ಲಿನ ಎಲ್ಲ ಜೀವಜಂತುಗಳು ಜಗತ್ತಿನ ಕಾರ್ಯಕ್ಕೆ ಪೂರಕವಾಗಿವೆ. ನಾಗರಪಂಚಮಿಯ ದಿನ ನಾಗಗಳ ಪೂಜೆಯಿಂದ ‘ಭಗವಂತನು ಅವುಗಳ ಮೂಲಕ ಕಾರ್ಯವನ್ನು ಮಾಡುತ್ತಿದ್ದಾನೆ’, ಎಂಬ ವಿಶಾಲ ದೃಷ್ಟಿಯಿಂದ ನಾಗನ ಪೂಜೆಯನ್ನು ಮಾಡಲಾಗುತ್ತದೆ. ಎಲ್ಲಾ ಕಷ್ಟಗಳನ್ನು ಎದುರಿಸಲು ಶಕ್ತಿ ಕೊಡೆಂದು ಪ್ರಾರ್ಥಿಸುವ ಸಮಯ ಈ ನಾಗರಪಂಚಮಿ.

ಪ್ರತಿ ಬಾರಿಯಂತೆ ಈ ವರ್ಷ ಗೌಜಿ ಗದ್ಧಲಗಳಿಗೆ ಅವಕಾಶವಿಲ್ಲ. ದೇವಸ್ಥಾಗಳಲ್ಲಿ ಸೇವೆಗಳಿಗೆ ಅವಕಾಶವಿಲ್ಲ. ಇನ್ನೂ ತರವಾಡು ಮನೆಗಳಲ್ಲಿ ವರ್ಷಾವಧಿ ತಂಬಿಲಗಳಲ್ಲೂ ಜನ ಸೇರುವ ಅವಕಾಶಕ್ಕೆ ನಿರ್ಬಂಧವಿದೆ. ಇದೆಲ್ಲ ಏನಿದ್ದರೂ ಭಕ್ತಿ ಭಾವಕ್ಕೇನು ಕೊರತೆಯಾಗದು.‌ ಮನದಾಳದಿಂದ ಕಷ್ಟಗಳೆಲ್ಲಾ ದೂರವಾಗಿ ಕೊರೋನಾ ಕಪಿಮುಷ್ಟಿಯಿಂದ ಜಗತ್ತೇ ಬಿಡುಗಡೆ ಹೊಂದಲಿ , ನಾಗರಪಂಚಮಿಯಂದು ದೇವರಲ್ಲೊಂದು ಮನದಾಳದ ಕೋರಿಕೆ.

Advertisement

 

# ಅಶ್ವಿನಿಮೂರ್ತಿ ಅಯ್ಯನಕಟ್ಟೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

1 day ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

1 day ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

1 day ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

2 days ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

2 days ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

2 days ago