Advertisement
ಅನುಕ್ರಮ

ನಾಗರಪಂಚಮಿ ನಾಡಿಗೆ ದೊಡ್ಡದು | ತುಳುನಾಡಿನಲ್ಲಿ ಭಕ್ತಿ ಭಾವದಿಂದ ನಾಗಾರಾಧನೆ |

Share

ಹಬ್ಬಗಳ ಸಂಭ್ರಮಕ್ಕೆ ನಾಂದಿ ಹಾಡುವುದು ನಾಗರಪಂಚಮಿ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಇಂದು ದೇವಾಲಯಗಳಲ್ಲಿ, ನಾಗನ ಕಟ್ಟೆಗಳಲ್ಲಿ ನಾಗ ದೇವರನ್ನು ಆರಾಧಿಸಲಾಗುತ್ತದೆ. ನಾಗನ ಕಲ್ಲಿಗೆ ಹಾಲೆರೆದು ಅಭಿಷೇಕ ಮಾಡಿ ನೈವೇದ್ಯ ಸಲ್ಲಿಸುವುದು ನಡೆಸಿಕೊಂಡು ಬಂದ ಪದ್ಧತಿ. ನಾಗನ ತಂಬಿಲವೂ ವಿಶೇಷವಾದ ಸೇವೆ. ದೇಶದೆಲ್ಲೆಡೆ ನಾಗರಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತದೆ.

ನಾಗರಪಂಚಮಿಯನ್ನು ಅಣ್ಣ ತಂಗಿ ಒಟ್ಟಾಗಿ ಆಚರಿಸುವ ಹಬ್ಬವೆಂಬ ಮಾತಿದೆ. ಇನ್ನು ತಂದೆ ಪರೀಕ್ಷಿತನ ಸಾವಿಗೆ ಒಂದು ಹಾವು ಕಾರಣವೆಂದು ‌ ಜನಮೇಯ ರಾಜ ಒಂದು ಸರ್ಪಯಾಗ ಮಾಡಿದನು. ಸರ್ಪಗಳೆಲ್ಲ ಯಜ್ಞ ಕುಂಡಕ್ಕೆ ಆಹುತಿಯಾಗ ತೊಡಗಿದುವು. ಆಗ ಸರ್ಪಗಳ ಹಿತೈಷಿ ಆಸ್ತಿಕ ಮುನಿಯು ಜನಮೇಯ ರಾಜನನ್ನು ಪ್ರಸನ್ನಗೊಳಿಸಿದನು. ಆಗ ರಾಜ ವರವೊಂದನ್ನು ಕೇಳೆಂದು ಹೇಳಿದಾಗ ಸರ್ಪಯಜ್ಞವನ್ನು ನಿಲ್ಲಿಸುವಂತೆ ಕೇಳಿಕೊಂಡನು. ಹೀಗೆ ಸರ್ಪಯಾಗ ನಿಂತ ದಿನವೇ ನಾಗರಪಂಚಮಿಯಾಗಿತ್ತು.

ಜಗತ್ತಿನಲ್ಲಿನ ಎಲ್ಲ ಜೀವಜಂತುಗಳು ಜಗತ್ತಿನ ಕಾರ್ಯಕ್ಕೆ ಪೂರಕವಾಗಿವೆ. ನಾಗರಪಂಚಮಿಯ ದಿನ ನಾಗಗಳ ಪೂಜೆಯಿಂದ ‘ಭಗವಂತನು ಅವುಗಳ ಮೂಲಕ ಕಾರ್ಯವನ್ನು ಮಾಡುತ್ತಿದ್ದಾನೆ’, ಎಂಬ ವಿಶಾಲ ದೃಷ್ಟಿಯಿಂದ ನಾಗನ ಪೂಜೆಯನ್ನು ಮಾಡಲಾಗುತ್ತದೆ. ಎಲ್ಲಾ ಕಷ್ಟಗಳನ್ನು ಎದುರಿಸಲು ಶಕ್ತಿ ಕೊಡೆಂದು ಪ್ರಾರ್ಥಿಸುವ ಸಮಯ ಈ ನಾಗರಪಂಚಮಿ.

ಪ್ರತಿ ಬಾರಿಯಂತೆ ಈ ವರ್ಷ ಗೌಜಿ ಗದ್ಧಲಗಳಿಗೆ ಅವಕಾಶವಿಲ್ಲ. ದೇವಸ್ಥಾಗಳಲ್ಲಿ ಸೇವೆಗಳಿಗೆ ಅವಕಾಶವಿಲ್ಲ. ಇನ್ನೂ ತರವಾಡು ಮನೆಗಳಲ್ಲಿ ವರ್ಷಾವಧಿ ತಂಬಿಲಗಳಲ್ಲೂ ಜನ ಸೇರುವ ಅವಕಾಶಕ್ಕೆ ನಿರ್ಬಂಧವಿದೆ. ಇದೆಲ್ಲ ಏನಿದ್ದರೂ ಭಕ್ತಿ ಭಾವಕ್ಕೇನು ಕೊರತೆಯಾಗದು.‌ ಮನದಾಳದಿಂದ ಕಷ್ಟಗಳೆಲ್ಲಾ ದೂರವಾಗಿ ಕೊರೋನಾ ಕಪಿಮುಷ್ಟಿಯಿಂದ ಜಗತ್ತೇ ಬಿಡುಗಡೆ ಹೊಂದಲಿ , ನಾಗರಪಂಚಮಿಯಂದು ದೇವರಲ್ಲೊಂದು ಮನದಾಳದ ಕೋರಿಕೆ.

 

# ಅಶ್ವಿನಿಮೂರ್ತಿ ಅಯ್ಯನಕಟ್ಟೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

5 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

6 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

10 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

18 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

19 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

20 hours ago