Advertisement
ಅನುಕ್ರಮ

ನಾಗರಪಂಚಮಿ ನಾಡಿಗೆ ದೊಡ್ಡದು | ತುಳುನಾಡಿನಲ್ಲಿ ಭಕ್ತಿ ಭಾವದಿಂದ ನಾಗಾರಾಧನೆ |

Share

ಹಬ್ಬಗಳ ಸಂಭ್ರಮಕ್ಕೆ ನಾಂದಿ ಹಾಡುವುದು ನಾಗರಪಂಚಮಿ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಇಂದು ದೇವಾಲಯಗಳಲ್ಲಿ, ನಾಗನ ಕಟ್ಟೆಗಳಲ್ಲಿ ನಾಗ ದೇವರನ್ನು ಆರಾಧಿಸಲಾಗುತ್ತದೆ. ನಾಗನ ಕಲ್ಲಿಗೆ ಹಾಲೆರೆದು ಅಭಿಷೇಕ ಮಾಡಿ ನೈವೇದ್ಯ ಸಲ್ಲಿಸುವುದು ನಡೆಸಿಕೊಂಡು ಬಂದ ಪದ್ಧತಿ. ನಾಗನ ತಂಬಿಲವೂ ವಿಶೇಷವಾದ ಸೇವೆ. ದೇಶದೆಲ್ಲೆಡೆ ನಾಗರಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತದೆ.

ನಾಗರಪಂಚಮಿಯನ್ನು ಅಣ್ಣ ತಂಗಿ ಒಟ್ಟಾಗಿ ಆಚರಿಸುವ ಹಬ್ಬವೆಂಬ ಮಾತಿದೆ. ಇನ್ನು ತಂದೆ ಪರೀಕ್ಷಿತನ ಸಾವಿಗೆ ಒಂದು ಹಾವು ಕಾರಣವೆಂದು ‌ ಜನಮೇಯ ರಾಜ ಒಂದು ಸರ್ಪಯಾಗ ಮಾಡಿದನು. ಸರ್ಪಗಳೆಲ್ಲ ಯಜ್ಞ ಕುಂಡಕ್ಕೆ ಆಹುತಿಯಾಗ ತೊಡಗಿದುವು. ಆಗ ಸರ್ಪಗಳ ಹಿತೈಷಿ ಆಸ್ತಿಕ ಮುನಿಯು ಜನಮೇಯ ರಾಜನನ್ನು ಪ್ರಸನ್ನಗೊಳಿಸಿದನು. ಆಗ ರಾಜ ವರವೊಂದನ್ನು ಕೇಳೆಂದು ಹೇಳಿದಾಗ ಸರ್ಪಯಜ್ಞವನ್ನು ನಿಲ್ಲಿಸುವಂತೆ ಕೇಳಿಕೊಂಡನು. ಹೀಗೆ ಸರ್ಪಯಾಗ ನಿಂತ ದಿನವೇ ನಾಗರಪಂಚಮಿಯಾಗಿತ್ತು.

ಜಗತ್ತಿನಲ್ಲಿನ ಎಲ್ಲ ಜೀವಜಂತುಗಳು ಜಗತ್ತಿನ ಕಾರ್ಯಕ್ಕೆ ಪೂರಕವಾಗಿವೆ. ನಾಗರಪಂಚಮಿಯ ದಿನ ನಾಗಗಳ ಪೂಜೆಯಿಂದ ‘ಭಗವಂತನು ಅವುಗಳ ಮೂಲಕ ಕಾರ್ಯವನ್ನು ಮಾಡುತ್ತಿದ್ದಾನೆ’, ಎಂಬ ವಿಶಾಲ ದೃಷ್ಟಿಯಿಂದ ನಾಗನ ಪೂಜೆಯನ್ನು ಮಾಡಲಾಗುತ್ತದೆ. ಎಲ್ಲಾ ಕಷ್ಟಗಳನ್ನು ಎದುರಿಸಲು ಶಕ್ತಿ ಕೊಡೆಂದು ಪ್ರಾರ್ಥಿಸುವ ಸಮಯ ಈ ನಾಗರಪಂಚಮಿ.

ಪ್ರತಿ ಬಾರಿಯಂತೆ ಈ ವರ್ಷ ಗೌಜಿ ಗದ್ಧಲಗಳಿಗೆ ಅವಕಾಶವಿಲ್ಲ. ದೇವಸ್ಥಾಗಳಲ್ಲಿ ಸೇವೆಗಳಿಗೆ ಅವಕಾಶವಿಲ್ಲ. ಇನ್ನೂ ತರವಾಡು ಮನೆಗಳಲ್ಲಿ ವರ್ಷಾವಧಿ ತಂಬಿಲಗಳಲ್ಲೂ ಜನ ಸೇರುವ ಅವಕಾಶಕ್ಕೆ ನಿರ್ಬಂಧವಿದೆ. ಇದೆಲ್ಲ ಏನಿದ್ದರೂ ಭಕ್ತಿ ಭಾವಕ್ಕೇನು ಕೊರತೆಯಾಗದು.‌ ಮನದಾಳದಿಂದ ಕಷ್ಟಗಳೆಲ್ಲಾ ದೂರವಾಗಿ ಕೊರೋನಾ ಕಪಿಮುಷ್ಟಿಯಿಂದ ಜಗತ್ತೇ ಬಿಡುಗಡೆ ಹೊಂದಲಿ , ನಾಗರಪಂಚಮಿಯಂದು ದೇವರಲ್ಲೊಂದು ಮನದಾಳದ ಕೋರಿಕೆ.

 

# ಅಶ್ವಿನಿಮೂರ್ತಿ ಅಯ್ಯನಕಟ್ಟೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

6 minutes ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

20 minutes ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

8 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

8 hours ago

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

11 hours ago