Advertisement
ಅನುಕ್ರಮ

ನಾಗರಪಂಚಮಿ ನಾಡಿಗೆ ದೊಡ್ಡದು | ತುಳುನಾಡಿನಲ್ಲಿ ಭಕ್ತಿ ಭಾವದಿಂದ ನಾಗಾರಾಧನೆ |

Share

ಹಬ್ಬಗಳ ಸಂಭ್ರಮಕ್ಕೆ ನಾಂದಿ ಹಾಡುವುದು ನಾಗರಪಂಚಮಿ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಇಂದು ದೇವಾಲಯಗಳಲ್ಲಿ, ನಾಗನ ಕಟ್ಟೆಗಳಲ್ಲಿ ನಾಗ ದೇವರನ್ನು ಆರಾಧಿಸಲಾಗುತ್ತದೆ. ನಾಗನ ಕಲ್ಲಿಗೆ ಹಾಲೆರೆದು ಅಭಿಷೇಕ ಮಾಡಿ ನೈವೇದ್ಯ ಸಲ್ಲಿಸುವುದು ನಡೆಸಿಕೊಂಡು ಬಂದ ಪದ್ಧತಿ. ನಾಗನ ತಂಬಿಲವೂ ವಿಶೇಷವಾದ ಸೇವೆ. ದೇಶದೆಲ್ಲೆಡೆ ನಾಗರಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತದೆ.

ನಾಗರಪಂಚಮಿಯನ್ನು ಅಣ್ಣ ತಂಗಿ ಒಟ್ಟಾಗಿ ಆಚರಿಸುವ ಹಬ್ಬವೆಂಬ ಮಾತಿದೆ. ಇನ್ನು ತಂದೆ ಪರೀಕ್ಷಿತನ ಸಾವಿಗೆ ಒಂದು ಹಾವು ಕಾರಣವೆಂದು ‌ ಜನಮೇಯ ರಾಜ ಒಂದು ಸರ್ಪಯಾಗ ಮಾಡಿದನು. ಸರ್ಪಗಳೆಲ್ಲ ಯಜ್ಞ ಕುಂಡಕ್ಕೆ ಆಹುತಿಯಾಗ ತೊಡಗಿದುವು. ಆಗ ಸರ್ಪಗಳ ಹಿತೈಷಿ ಆಸ್ತಿಕ ಮುನಿಯು ಜನಮೇಯ ರಾಜನನ್ನು ಪ್ರಸನ್ನಗೊಳಿಸಿದನು. ಆಗ ರಾಜ ವರವೊಂದನ್ನು ಕೇಳೆಂದು ಹೇಳಿದಾಗ ಸರ್ಪಯಜ್ಞವನ್ನು ನಿಲ್ಲಿಸುವಂತೆ ಕೇಳಿಕೊಂಡನು. ಹೀಗೆ ಸರ್ಪಯಾಗ ನಿಂತ ದಿನವೇ ನಾಗರಪಂಚಮಿಯಾಗಿತ್ತು.

ಜಗತ್ತಿನಲ್ಲಿನ ಎಲ್ಲ ಜೀವಜಂತುಗಳು ಜಗತ್ತಿನ ಕಾರ್ಯಕ್ಕೆ ಪೂರಕವಾಗಿವೆ. ನಾಗರಪಂಚಮಿಯ ದಿನ ನಾಗಗಳ ಪೂಜೆಯಿಂದ ‘ಭಗವಂತನು ಅವುಗಳ ಮೂಲಕ ಕಾರ್ಯವನ್ನು ಮಾಡುತ್ತಿದ್ದಾನೆ’, ಎಂಬ ವಿಶಾಲ ದೃಷ್ಟಿಯಿಂದ ನಾಗನ ಪೂಜೆಯನ್ನು ಮಾಡಲಾಗುತ್ತದೆ. ಎಲ್ಲಾ ಕಷ್ಟಗಳನ್ನು ಎದುರಿಸಲು ಶಕ್ತಿ ಕೊಡೆಂದು ಪ್ರಾರ್ಥಿಸುವ ಸಮಯ ಈ ನಾಗರಪಂಚಮಿ.

ಪ್ರತಿ ಬಾರಿಯಂತೆ ಈ ವರ್ಷ ಗೌಜಿ ಗದ್ಧಲಗಳಿಗೆ ಅವಕಾಶವಿಲ್ಲ. ದೇವಸ್ಥಾಗಳಲ್ಲಿ ಸೇವೆಗಳಿಗೆ ಅವಕಾಶವಿಲ್ಲ. ಇನ್ನೂ ತರವಾಡು ಮನೆಗಳಲ್ಲಿ ವರ್ಷಾವಧಿ ತಂಬಿಲಗಳಲ್ಲೂ ಜನ ಸೇರುವ ಅವಕಾಶಕ್ಕೆ ನಿರ್ಬಂಧವಿದೆ. ಇದೆಲ್ಲ ಏನಿದ್ದರೂ ಭಕ್ತಿ ಭಾವಕ್ಕೇನು ಕೊರತೆಯಾಗದು.‌ ಮನದಾಳದಿಂದ ಕಷ್ಟಗಳೆಲ್ಲಾ ದೂರವಾಗಿ ಕೊರೋನಾ ಕಪಿಮುಷ್ಟಿಯಿಂದ ಜಗತ್ತೇ ಬಿಡುಗಡೆ ಹೊಂದಲಿ , ನಾಗರಪಂಚಮಿಯಂದು ದೇವರಲ್ಲೊಂದು ಮನದಾಳದ ಕೋರಿಕೆ.

 

# ಅಶ್ವಿನಿಮೂರ್ತಿ ಅಯ್ಯನಕಟ್ಟೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

5 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

16 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

20 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

1 day ago