Advertisement
ಅನುಕ್ರಮ

ನಾಗರಪಂಚಮಿ ನಾಡಿಗೆ ದೊಡ್ಡದು | ತುಳುನಾಡಿನಲ್ಲಿ ಭಕ್ತಿ ಭಾವದಿಂದ ನಾಗಾರಾಧನೆ |

Share

ಹಬ್ಬಗಳ ಸಂಭ್ರಮಕ್ಕೆ ನಾಂದಿ ಹಾಡುವುದು ನಾಗರಪಂಚಮಿ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಇಂದು ದೇವಾಲಯಗಳಲ್ಲಿ, ನಾಗನ ಕಟ್ಟೆಗಳಲ್ಲಿ ನಾಗ ದೇವರನ್ನು ಆರಾಧಿಸಲಾಗುತ್ತದೆ. ನಾಗನ ಕಲ್ಲಿಗೆ ಹಾಲೆರೆದು ಅಭಿಷೇಕ ಮಾಡಿ ನೈವೇದ್ಯ ಸಲ್ಲಿಸುವುದು ನಡೆಸಿಕೊಂಡು ಬಂದ ಪದ್ಧತಿ. ನಾಗನ ತಂಬಿಲವೂ ವಿಶೇಷವಾದ ಸೇವೆ. ದೇಶದೆಲ್ಲೆಡೆ ನಾಗರಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತದೆ.

ನಾಗರಪಂಚಮಿಯನ್ನು ಅಣ್ಣ ತಂಗಿ ಒಟ್ಟಾಗಿ ಆಚರಿಸುವ ಹಬ್ಬವೆಂಬ ಮಾತಿದೆ. ಇನ್ನು ತಂದೆ ಪರೀಕ್ಷಿತನ ಸಾವಿಗೆ ಒಂದು ಹಾವು ಕಾರಣವೆಂದು ‌ ಜನಮೇಯ ರಾಜ ಒಂದು ಸರ್ಪಯಾಗ ಮಾಡಿದನು. ಸರ್ಪಗಳೆಲ್ಲ ಯಜ್ಞ ಕುಂಡಕ್ಕೆ ಆಹುತಿಯಾಗ ತೊಡಗಿದುವು. ಆಗ ಸರ್ಪಗಳ ಹಿತೈಷಿ ಆಸ್ತಿಕ ಮುನಿಯು ಜನಮೇಯ ರಾಜನನ್ನು ಪ್ರಸನ್ನಗೊಳಿಸಿದನು. ಆಗ ರಾಜ ವರವೊಂದನ್ನು ಕೇಳೆಂದು ಹೇಳಿದಾಗ ಸರ್ಪಯಜ್ಞವನ್ನು ನಿಲ್ಲಿಸುವಂತೆ ಕೇಳಿಕೊಂಡನು. ಹೀಗೆ ಸರ್ಪಯಾಗ ನಿಂತ ದಿನವೇ ನಾಗರಪಂಚಮಿಯಾಗಿತ್ತು.

ಜಗತ್ತಿನಲ್ಲಿನ ಎಲ್ಲ ಜೀವಜಂತುಗಳು ಜಗತ್ತಿನ ಕಾರ್ಯಕ್ಕೆ ಪೂರಕವಾಗಿವೆ. ನಾಗರಪಂಚಮಿಯ ದಿನ ನಾಗಗಳ ಪೂಜೆಯಿಂದ ‘ಭಗವಂತನು ಅವುಗಳ ಮೂಲಕ ಕಾರ್ಯವನ್ನು ಮಾಡುತ್ತಿದ್ದಾನೆ’, ಎಂಬ ವಿಶಾಲ ದೃಷ್ಟಿಯಿಂದ ನಾಗನ ಪೂಜೆಯನ್ನು ಮಾಡಲಾಗುತ್ತದೆ. ಎಲ್ಲಾ ಕಷ್ಟಗಳನ್ನು ಎದುರಿಸಲು ಶಕ್ತಿ ಕೊಡೆಂದು ಪ್ರಾರ್ಥಿಸುವ ಸಮಯ ಈ ನಾಗರಪಂಚಮಿ.

ಪ್ರತಿ ಬಾರಿಯಂತೆ ಈ ವರ್ಷ ಗೌಜಿ ಗದ್ಧಲಗಳಿಗೆ ಅವಕಾಶವಿಲ್ಲ. ದೇವಸ್ಥಾಗಳಲ್ಲಿ ಸೇವೆಗಳಿಗೆ ಅವಕಾಶವಿಲ್ಲ. ಇನ್ನೂ ತರವಾಡು ಮನೆಗಳಲ್ಲಿ ವರ್ಷಾವಧಿ ತಂಬಿಲಗಳಲ್ಲೂ ಜನ ಸೇರುವ ಅವಕಾಶಕ್ಕೆ ನಿರ್ಬಂಧವಿದೆ. ಇದೆಲ್ಲ ಏನಿದ್ದರೂ ಭಕ್ತಿ ಭಾವಕ್ಕೇನು ಕೊರತೆಯಾಗದು.‌ ಮನದಾಳದಿಂದ ಕಷ್ಟಗಳೆಲ್ಲಾ ದೂರವಾಗಿ ಕೊರೋನಾ ಕಪಿಮುಷ್ಟಿಯಿಂದ ಜಗತ್ತೇ ಬಿಡುಗಡೆ ಹೊಂದಲಿ , ನಾಗರಪಂಚಮಿಯಂದು ದೇವರಲ್ಲೊಂದು ಮನದಾಳದ ಕೋರಿಕೆ.

 

# ಅಶ್ವಿನಿಮೂರ್ತಿ ಅಯ್ಯನಕಟ್ಟೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

8 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago