Advertisement
ಅನುಕ್ರಮ

ನಾಗರಪಂಚಮಿ ನಾಡಿಗೆ ದೊಡ್ಡದು | ತುಳುನಾಡಿನಲ್ಲಿ ಭಕ್ತಿ ಭಾವದಿಂದ ನಾಗಾರಾಧನೆ |

Share

ಹಬ್ಬಗಳ ಸಂಭ್ರಮಕ್ಕೆ ನಾಂದಿ ಹಾಡುವುದು ನಾಗರಪಂಚಮಿ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಇಂದು ದೇವಾಲಯಗಳಲ್ಲಿ, ನಾಗನ ಕಟ್ಟೆಗಳಲ್ಲಿ ನಾಗ ದೇವರನ್ನು ಆರಾಧಿಸಲಾಗುತ್ತದೆ. ನಾಗನ ಕಲ್ಲಿಗೆ ಹಾಲೆರೆದು ಅಭಿಷೇಕ ಮಾಡಿ ನೈವೇದ್ಯ ಸಲ್ಲಿಸುವುದು ನಡೆಸಿಕೊಂಡು ಬಂದ ಪದ್ಧತಿ. ನಾಗನ ತಂಬಿಲವೂ ವಿಶೇಷವಾದ ಸೇವೆ. ದೇಶದೆಲ್ಲೆಡೆ ನಾಗರಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತದೆ.

ನಾಗರಪಂಚಮಿಯನ್ನು ಅಣ್ಣ ತಂಗಿ ಒಟ್ಟಾಗಿ ಆಚರಿಸುವ ಹಬ್ಬವೆಂಬ ಮಾತಿದೆ. ಇನ್ನು ತಂದೆ ಪರೀಕ್ಷಿತನ ಸಾವಿಗೆ ಒಂದು ಹಾವು ಕಾರಣವೆಂದು ‌ ಜನಮೇಯ ರಾಜ ಒಂದು ಸರ್ಪಯಾಗ ಮಾಡಿದನು. ಸರ್ಪಗಳೆಲ್ಲ ಯಜ್ಞ ಕುಂಡಕ್ಕೆ ಆಹುತಿಯಾಗ ತೊಡಗಿದುವು. ಆಗ ಸರ್ಪಗಳ ಹಿತೈಷಿ ಆಸ್ತಿಕ ಮುನಿಯು ಜನಮೇಯ ರಾಜನನ್ನು ಪ್ರಸನ್ನಗೊಳಿಸಿದನು. ಆಗ ರಾಜ ವರವೊಂದನ್ನು ಕೇಳೆಂದು ಹೇಳಿದಾಗ ಸರ್ಪಯಜ್ಞವನ್ನು ನಿಲ್ಲಿಸುವಂತೆ ಕೇಳಿಕೊಂಡನು. ಹೀಗೆ ಸರ್ಪಯಾಗ ನಿಂತ ದಿನವೇ ನಾಗರಪಂಚಮಿಯಾಗಿತ್ತು.

ಜಗತ್ತಿನಲ್ಲಿನ ಎಲ್ಲ ಜೀವಜಂತುಗಳು ಜಗತ್ತಿನ ಕಾರ್ಯಕ್ಕೆ ಪೂರಕವಾಗಿವೆ. ನಾಗರಪಂಚಮಿಯ ದಿನ ನಾಗಗಳ ಪೂಜೆಯಿಂದ ‘ಭಗವಂತನು ಅವುಗಳ ಮೂಲಕ ಕಾರ್ಯವನ್ನು ಮಾಡುತ್ತಿದ್ದಾನೆ’, ಎಂಬ ವಿಶಾಲ ದೃಷ್ಟಿಯಿಂದ ನಾಗನ ಪೂಜೆಯನ್ನು ಮಾಡಲಾಗುತ್ತದೆ. ಎಲ್ಲಾ ಕಷ್ಟಗಳನ್ನು ಎದುರಿಸಲು ಶಕ್ತಿ ಕೊಡೆಂದು ಪ್ರಾರ್ಥಿಸುವ ಸಮಯ ಈ ನಾಗರಪಂಚಮಿ.

ಪ್ರತಿ ಬಾರಿಯಂತೆ ಈ ವರ್ಷ ಗೌಜಿ ಗದ್ಧಲಗಳಿಗೆ ಅವಕಾಶವಿಲ್ಲ. ದೇವಸ್ಥಾಗಳಲ್ಲಿ ಸೇವೆಗಳಿಗೆ ಅವಕಾಶವಿಲ್ಲ. ಇನ್ನೂ ತರವಾಡು ಮನೆಗಳಲ್ಲಿ ವರ್ಷಾವಧಿ ತಂಬಿಲಗಳಲ್ಲೂ ಜನ ಸೇರುವ ಅವಕಾಶಕ್ಕೆ ನಿರ್ಬಂಧವಿದೆ. ಇದೆಲ್ಲ ಏನಿದ್ದರೂ ಭಕ್ತಿ ಭಾವಕ್ಕೇನು ಕೊರತೆಯಾಗದು.‌ ಮನದಾಳದಿಂದ ಕಷ್ಟಗಳೆಲ್ಲಾ ದೂರವಾಗಿ ಕೊರೋನಾ ಕಪಿಮುಷ್ಟಿಯಿಂದ ಜಗತ್ತೇ ಬಿಡುಗಡೆ ಹೊಂದಲಿ , ನಾಗರಪಂಚಮಿಯಂದು ದೇವರಲ್ಲೊಂದು ಮನದಾಳದ ಕೋರಿಕೆ.

 

# ಅಶ್ವಿನಿಮೂರ್ತಿ ಅಯ್ಯನಕಟ್ಟೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

4 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

9 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

21 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

2 days ago