#NagaraPanchami | ನಿಜ ನಾಗರಹಾವನ್ನು ತಂದು ವಿಶೇಷವಾಗಿ ಆರಾಧನೆ…! | ಎರಡು ದಿನಗಳ ಕಾಲ ನಾಗರಹಾವಿಗೆ ವಿಶೇಷ ಪೂಜೆ..! |

August 23, 2023
2:53 PM
ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ನಿಜ ನಾಗರಹಾವನ್ನು ಕಾಡಿನಿಂದ ತಂದು ವಿಶೇಷ ಪೂಜೆ ಮಾಡಿ ಮತ್ತೆ ಕಾಡಿಗೆ ಬಿಡುವ ವಿಶೇಷ ಆಚರಣೆ ಅನೇಕ ಸಮಯಗಳಿಂದ ನಡೆಯುತ್ತಿದೆ.

ಈಚೆಗೆ ನಾಗರಪಂಚಮಿ ಎಲ್ಲೆಡೆ ಸಂಭ್ರಮದಿಂದ ನಡೆಯಿತು. ತುಳುನಾಡಿನಲ್ಲಿ ನಾಗ ಬನಗಳಲ್ಲಿ, ನಾಗನ ಕಟ್ಟೆಗಳಲ್ಲಿ ನಾಗನ ಕಲ್ಲಿಗೆ ಹಾಲೆರೆದು ವಿಶೇಷ ಪೂಜೆಯ ಮೂಲಕ ಆಚರಣೆ ನಡೆಯಿತು. ಆದರೆ ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ನಿಜ ನಾಗರಹಾವನ್ನು ಕಾಡಿನಿಂದ ತಂದು ವಿಶೇಷ ಪೂಜೆ ಮಾಡಿ ಮತ್ತೆ ಕಾಡಿಗೆ ಬಿಡುವ ವಿಶೇಷ ಆಚರಣೆ ಅನೇಕ ಸಮಯಗಳಿಂದ ನಡೆಯುತ್ತಿದೆ.

ಮಹಾರಾಷ್ಟ್ರದ ಸಾಂಗ್ಲಿ ಬಳಿಯ ಬತ್ತಿಸ್ ಶಿರಾಳ ಎಂಬ ಊರಿನಲ್ಲಿ ಈ ಆಚರಣೆ ನಡೆಯುತ್ತದೆ. ಅಲ್ಲಿ ಪ್ರತಿವರ್ಷ ನಾಗರ ಪಂಚಮಿಯಂದು ಲೈವ್  ಆಗಿ ಆಚರಿಸುತ್ತಾರೆ. ಈ ಆಚರಣೆಗೆ ಎರಡು ದಿನ ಮುನ್ನ ಕಾಡಿಗೆ ಹೋಗಿ ಜನರು ನಿಜ ನಾಗರಹಾವನ್ನು ಹಿಡಿದುಕೊಂಡು ಬರುತ್ತಾರೆ. ಎಲ್ಲರೂ ಊರಿನ ಹೊರಭಾಗದಲ್ಲಿ ಸೇರುತ್ತಾರೆ ನಂತರ ಮೆರವಣಿಗೆ ಮೂಲಕ ಬರುತ್ತಾರೆ. ಮಣ್ಣಿನ ಮಡಿಕೆಯಲ್ಲಿ ನಿಜ ಹಾವನ್ನು  ಇರಿಸಿ ಮನೆಗೆ  ತಂದು ಮನೆಯಲ್ಲಿ ಎರಡು ದಿನಗಳ ಕಾಲ ಪೂಜಿಸಿ ನಂತರ ಪುನಃ ಕಾಡಿಗೆ ಹೋಗಿ ಬಿಟ್ಟು ಬರುತ್ತಾರೆ.

ಈ ಆಚರಣೆಯನ್ನು ನೂರಾರು ವರ್ಷಗಳಿಂದ ಈ ಹಳ್ಳಿಯ ಜನರು ಮಾಡುತ್ತಾ ಬಂದಿದ್ದಾರೆ. ಇನ್ನೊಂದು ವಿಶೇಷವೇನೆಂದರೆ, ಇದುವರೆಗೂ ಯಾವ ಹಾವಿಗೂ ಹಿಂಸೆ ತೊಂದರೆ ಮಾಡಿಲ್ಲ. ಈ ಸಮಯದಲ್ಲಿ ಯಾವ ಹಾವುಗಳು ಮನುಷ್ಯರಿಗೆ ಕಚ್ಚಿದ ಉದಾಹರಣೆಗಳು ಕಡಿಮೆ. ಇಂತಹ ವಿಶೇಷ ಆಚರಣೆಯ ಮೂಲಕ ನಾಗರಪಂಚಮಿಯು ಶಿರಾಳ ಎಂಬ ಊರಿನಲ್ಲಿ ಗಮನ ಸೆಳೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror