#NagaraPanchami | ನಿಜ ನಾಗರಹಾವನ್ನು ತಂದು ವಿಶೇಷವಾಗಿ ಆರಾಧನೆ…! | ಎರಡು ದಿನಗಳ ಕಾಲ ನಾಗರಹಾವಿಗೆ ವಿಶೇಷ ಪೂಜೆ..! |

August 23, 2023
2:53 PM
ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ನಿಜ ನಾಗರಹಾವನ್ನು ಕಾಡಿನಿಂದ ತಂದು ವಿಶೇಷ ಪೂಜೆ ಮಾಡಿ ಮತ್ತೆ ಕಾಡಿಗೆ ಬಿಡುವ ವಿಶೇಷ ಆಚರಣೆ ಅನೇಕ ಸಮಯಗಳಿಂದ ನಡೆಯುತ್ತಿದೆ.

ಈಚೆಗೆ ನಾಗರಪಂಚಮಿ ಎಲ್ಲೆಡೆ ಸಂಭ್ರಮದಿಂದ ನಡೆಯಿತು. ತುಳುನಾಡಿನಲ್ಲಿ ನಾಗ ಬನಗಳಲ್ಲಿ, ನಾಗನ ಕಟ್ಟೆಗಳಲ್ಲಿ ನಾಗನ ಕಲ್ಲಿಗೆ ಹಾಲೆರೆದು ವಿಶೇಷ ಪೂಜೆಯ ಮೂಲಕ ಆಚರಣೆ ನಡೆಯಿತು. ಆದರೆ ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ನಿಜ ನಾಗರಹಾವನ್ನು ಕಾಡಿನಿಂದ ತಂದು ವಿಶೇಷ ಪೂಜೆ ಮಾಡಿ ಮತ್ತೆ ಕಾಡಿಗೆ ಬಿಡುವ ವಿಶೇಷ ಆಚರಣೆ ಅನೇಕ ಸಮಯಗಳಿಂದ ನಡೆಯುತ್ತಿದೆ.

ಮಹಾರಾಷ್ಟ್ರದ ಸಾಂಗ್ಲಿ ಬಳಿಯ ಬತ್ತಿಸ್ ಶಿರಾಳ ಎಂಬ ಊರಿನಲ್ಲಿ ಈ ಆಚರಣೆ ನಡೆಯುತ್ತದೆ. ಅಲ್ಲಿ ಪ್ರತಿವರ್ಷ ನಾಗರ ಪಂಚಮಿಯಂದು ಲೈವ್  ಆಗಿ ಆಚರಿಸುತ್ತಾರೆ. ಈ ಆಚರಣೆಗೆ ಎರಡು ದಿನ ಮುನ್ನ ಕಾಡಿಗೆ ಹೋಗಿ ಜನರು ನಿಜ ನಾಗರಹಾವನ್ನು ಹಿಡಿದುಕೊಂಡು ಬರುತ್ತಾರೆ. ಎಲ್ಲರೂ ಊರಿನ ಹೊರಭಾಗದಲ್ಲಿ ಸೇರುತ್ತಾರೆ ನಂತರ ಮೆರವಣಿಗೆ ಮೂಲಕ ಬರುತ್ತಾರೆ. ಮಣ್ಣಿನ ಮಡಿಕೆಯಲ್ಲಿ ನಿಜ ಹಾವನ್ನು  ಇರಿಸಿ ಮನೆಗೆ  ತಂದು ಮನೆಯಲ್ಲಿ ಎರಡು ದಿನಗಳ ಕಾಲ ಪೂಜಿಸಿ ನಂತರ ಪುನಃ ಕಾಡಿಗೆ ಹೋಗಿ ಬಿಟ್ಟು ಬರುತ್ತಾರೆ.

ಈ ಆಚರಣೆಯನ್ನು ನೂರಾರು ವರ್ಷಗಳಿಂದ ಈ ಹಳ್ಳಿಯ ಜನರು ಮಾಡುತ್ತಾ ಬಂದಿದ್ದಾರೆ. ಇನ್ನೊಂದು ವಿಶೇಷವೇನೆಂದರೆ, ಇದುವರೆಗೂ ಯಾವ ಹಾವಿಗೂ ಹಿಂಸೆ ತೊಂದರೆ ಮಾಡಿಲ್ಲ. ಈ ಸಮಯದಲ್ಲಿ ಯಾವ ಹಾವುಗಳು ಮನುಷ್ಯರಿಗೆ ಕಚ್ಚಿದ ಉದಾಹರಣೆಗಳು ಕಡಿಮೆ. ಇಂತಹ ವಿಶೇಷ ಆಚರಣೆಯ ಮೂಲಕ ನಾಗರಪಂಚಮಿಯು ಶಿರಾಳ ಎಂಬ ಊರಿನಲ್ಲಿ ಗಮನ ಸೆಳೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ
ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror