ವಿಶೇಷ ವರದಿಗಳು

#NagaraPanchami | ನಿಜ ನಾಗರಹಾವನ್ನು ತಂದು ವಿಶೇಷವಾಗಿ ಆರಾಧನೆ…! | ಎರಡು ದಿನಗಳ ಕಾಲ ನಾಗರಹಾವಿಗೆ ವಿಶೇಷ ಪೂಜೆ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈಚೆಗೆ ನಾಗರಪಂಚಮಿ ಎಲ್ಲೆಡೆ ಸಂಭ್ರಮದಿಂದ ನಡೆಯಿತು. ತುಳುನಾಡಿನಲ್ಲಿ ನಾಗ ಬನಗಳಲ್ಲಿ, ನಾಗನ ಕಟ್ಟೆಗಳಲ್ಲಿ ನಾಗನ ಕಲ್ಲಿಗೆ ಹಾಲೆರೆದು ವಿಶೇಷ ಪೂಜೆಯ ಮೂಲಕ ಆಚರಣೆ ನಡೆಯಿತು. ಆದರೆ ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ನಿಜ ನಾಗರಹಾವನ್ನು ಕಾಡಿನಿಂದ ತಂದು ವಿಶೇಷ ಪೂಜೆ ಮಾಡಿ ಮತ್ತೆ ಕಾಡಿಗೆ ಬಿಡುವ ವಿಶೇಷ ಆಚರಣೆ ಅನೇಕ ಸಮಯಗಳಿಂದ ನಡೆಯುತ್ತಿದೆ.

Advertisement

ಮಹಾರಾಷ್ಟ್ರದ ಸಾಂಗ್ಲಿ ಬಳಿಯ ಬತ್ತಿಸ್ ಶಿರಾಳ ಎಂಬ ಊರಿನಲ್ಲಿ ಈ ಆಚರಣೆ ನಡೆಯುತ್ತದೆ. ಅಲ್ಲಿ ಪ್ರತಿವರ್ಷ ನಾಗರ ಪಂಚಮಿಯಂದು ಲೈವ್  ಆಗಿ ಆಚರಿಸುತ್ತಾರೆ. ಈ ಆಚರಣೆಗೆ ಎರಡು ದಿನ ಮುನ್ನ ಕಾಡಿಗೆ ಹೋಗಿ ಜನರು ನಿಜ ನಾಗರಹಾವನ್ನು ಹಿಡಿದುಕೊಂಡು ಬರುತ್ತಾರೆ. ಎಲ್ಲರೂ ಊರಿನ ಹೊರಭಾಗದಲ್ಲಿ ಸೇರುತ್ತಾರೆ ನಂತರ ಮೆರವಣಿಗೆ ಮೂಲಕ ಬರುತ್ತಾರೆ. ಮಣ್ಣಿನ ಮಡಿಕೆಯಲ್ಲಿ ನಿಜ ಹಾವನ್ನು  ಇರಿಸಿ ಮನೆಗೆ  ತಂದು ಮನೆಯಲ್ಲಿ ಎರಡು ದಿನಗಳ ಕಾಲ ಪೂಜಿಸಿ ನಂತರ ಪುನಃ ಕಾಡಿಗೆ ಹೋಗಿ ಬಿಟ್ಟು ಬರುತ್ತಾರೆ.

Advertisement

ಈ ಆಚರಣೆಯನ್ನು ನೂರಾರು ವರ್ಷಗಳಿಂದ ಈ ಹಳ್ಳಿಯ ಜನರು ಮಾಡುತ್ತಾ ಬಂದಿದ್ದಾರೆ. ಇನ್ನೊಂದು ವಿಶೇಷವೇನೆಂದರೆ, ಇದುವರೆಗೂ ಯಾವ ಹಾವಿಗೂ ಹಿಂಸೆ ತೊಂದರೆ ಮಾಡಿಲ್ಲ. ಈ ಸಮಯದಲ್ಲಿ ಯಾವ ಹಾವುಗಳು ಮನುಷ್ಯರಿಗೆ ಕಚ್ಚಿದ ಉದಾಹರಣೆಗಳು ಕಡಿಮೆ. ಇಂತಹ ವಿಶೇಷ ಆಚರಣೆಯ ಮೂಲಕ ನಾಗರಪಂಚಮಿಯು ಶಿರಾಳ ಎಂಬ ಊರಿನಲ್ಲಿ ಗಮನ ಸೆಳೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

7 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

7 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

7 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

7 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

7 hours ago

ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ

ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…

7 hours ago