Advertisement
ವಿಶೇಷ ವರದಿಗಳು

#NagaraPanchami | ನಿಜ ನಾಗರಹಾವನ್ನು ತಂದು ವಿಶೇಷವಾಗಿ ಆರಾಧನೆ…! | ಎರಡು ದಿನಗಳ ಕಾಲ ನಾಗರಹಾವಿಗೆ ವಿಶೇಷ ಪೂಜೆ..! |

Share

ಈಚೆಗೆ ನಾಗರಪಂಚಮಿ ಎಲ್ಲೆಡೆ ಸಂಭ್ರಮದಿಂದ ನಡೆಯಿತು. ತುಳುನಾಡಿನಲ್ಲಿ ನಾಗ ಬನಗಳಲ್ಲಿ, ನಾಗನ ಕಟ್ಟೆಗಳಲ್ಲಿ ನಾಗನ ಕಲ್ಲಿಗೆ ಹಾಲೆರೆದು ವಿಶೇಷ ಪೂಜೆಯ ಮೂಲಕ ಆಚರಣೆ ನಡೆಯಿತು. ಆದರೆ ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ನಿಜ ನಾಗರಹಾವನ್ನು ಕಾಡಿನಿಂದ ತಂದು ವಿಶೇಷ ಪೂಜೆ ಮಾಡಿ ಮತ್ತೆ ಕಾಡಿಗೆ ಬಿಡುವ ವಿಶೇಷ ಆಚರಣೆ ಅನೇಕ ಸಮಯಗಳಿಂದ ನಡೆಯುತ್ತಿದೆ.

ಮಹಾರಾಷ್ಟ್ರದ ಸಾಂಗ್ಲಿ ಬಳಿಯ ಬತ್ತಿಸ್ ಶಿರಾಳ ಎಂಬ ಊರಿನಲ್ಲಿ ಈ ಆಚರಣೆ ನಡೆಯುತ್ತದೆ. ಅಲ್ಲಿ ಪ್ರತಿವರ್ಷ ನಾಗರ ಪಂಚಮಿಯಂದು ಲೈವ್  ಆಗಿ ಆಚರಿಸುತ್ತಾರೆ. ಈ ಆಚರಣೆಗೆ ಎರಡು ದಿನ ಮುನ್ನ ಕಾಡಿಗೆ ಹೋಗಿ ಜನರು ನಿಜ ನಾಗರಹಾವನ್ನು ಹಿಡಿದುಕೊಂಡು ಬರುತ್ತಾರೆ. ಎಲ್ಲರೂ ಊರಿನ ಹೊರಭಾಗದಲ್ಲಿ ಸೇರುತ್ತಾರೆ ನಂತರ ಮೆರವಣಿಗೆ ಮೂಲಕ ಬರುತ್ತಾರೆ. ಮಣ್ಣಿನ ಮಡಿಕೆಯಲ್ಲಿ ನಿಜ ಹಾವನ್ನು  ಇರಿಸಿ ಮನೆಗೆ  ತಂದು ಮನೆಯಲ್ಲಿ ಎರಡು ದಿನಗಳ ಕಾಲ ಪೂಜಿಸಿ ನಂತರ ಪುನಃ ಕಾಡಿಗೆ ಹೋಗಿ ಬಿಟ್ಟು ಬರುತ್ತಾರೆ.

ಈ ಆಚರಣೆಯನ್ನು ನೂರಾರು ವರ್ಷಗಳಿಂದ ಈ ಹಳ್ಳಿಯ ಜನರು ಮಾಡುತ್ತಾ ಬಂದಿದ್ದಾರೆ. ಇನ್ನೊಂದು ವಿಶೇಷವೇನೆಂದರೆ, ಇದುವರೆಗೂ ಯಾವ ಹಾವಿಗೂ ಹಿಂಸೆ ತೊಂದರೆ ಮಾಡಿಲ್ಲ. ಈ ಸಮಯದಲ್ಲಿ ಯಾವ ಹಾವುಗಳು ಮನುಷ್ಯರಿಗೆ ಕಚ್ಚಿದ ಉದಾಹರಣೆಗಳು ಕಡಿಮೆ. ಇಂತಹ ವಿಶೇಷ ಆಚರಣೆಯ ಮೂಲಕ ನಾಗರಪಂಚಮಿಯು ಶಿರಾಳ ಎಂಬ ಊರಿನಲ್ಲಿ ಗಮನ ಸೆಳೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

15 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago