Advertisement
ವಿಶೇಷ ವರದಿಗಳು

#NagaraPanchami | ನಿಜ ನಾಗರಹಾವನ್ನು ತಂದು ವಿಶೇಷವಾಗಿ ಆರಾಧನೆ…! | ಎರಡು ದಿನಗಳ ಕಾಲ ನಾಗರಹಾವಿಗೆ ವಿಶೇಷ ಪೂಜೆ..! |

Share

ಈಚೆಗೆ ನಾಗರಪಂಚಮಿ ಎಲ್ಲೆಡೆ ಸಂಭ್ರಮದಿಂದ ನಡೆಯಿತು. ತುಳುನಾಡಿನಲ್ಲಿ ನಾಗ ಬನಗಳಲ್ಲಿ, ನಾಗನ ಕಟ್ಟೆಗಳಲ್ಲಿ ನಾಗನ ಕಲ್ಲಿಗೆ ಹಾಲೆರೆದು ವಿಶೇಷ ಪೂಜೆಯ ಮೂಲಕ ಆಚರಣೆ ನಡೆಯಿತು. ಆದರೆ ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ನಿಜ ನಾಗರಹಾವನ್ನು ಕಾಡಿನಿಂದ ತಂದು ವಿಶೇಷ ಪೂಜೆ ಮಾಡಿ ಮತ್ತೆ ಕಾಡಿಗೆ ಬಿಡುವ ವಿಶೇಷ ಆಚರಣೆ ಅನೇಕ ಸಮಯಗಳಿಂದ ನಡೆಯುತ್ತಿದೆ.

ಮಹಾರಾಷ್ಟ್ರದ ಸಾಂಗ್ಲಿ ಬಳಿಯ ಬತ್ತಿಸ್ ಶಿರಾಳ ಎಂಬ ಊರಿನಲ್ಲಿ ಈ ಆಚರಣೆ ನಡೆಯುತ್ತದೆ. ಅಲ್ಲಿ ಪ್ರತಿವರ್ಷ ನಾಗರ ಪಂಚಮಿಯಂದು ಲೈವ್  ಆಗಿ ಆಚರಿಸುತ್ತಾರೆ. ಈ ಆಚರಣೆಗೆ ಎರಡು ದಿನ ಮುನ್ನ ಕಾಡಿಗೆ ಹೋಗಿ ಜನರು ನಿಜ ನಾಗರಹಾವನ್ನು ಹಿಡಿದುಕೊಂಡು ಬರುತ್ತಾರೆ. ಎಲ್ಲರೂ ಊರಿನ ಹೊರಭಾಗದಲ್ಲಿ ಸೇರುತ್ತಾರೆ ನಂತರ ಮೆರವಣಿಗೆ ಮೂಲಕ ಬರುತ್ತಾರೆ. ಮಣ್ಣಿನ ಮಡಿಕೆಯಲ್ಲಿ ನಿಜ ಹಾವನ್ನು  ಇರಿಸಿ ಮನೆಗೆ  ತಂದು ಮನೆಯಲ್ಲಿ ಎರಡು ದಿನಗಳ ಕಾಲ ಪೂಜಿಸಿ ನಂತರ ಪುನಃ ಕಾಡಿಗೆ ಹೋಗಿ ಬಿಟ್ಟು ಬರುತ್ತಾರೆ.

ಈ ಆಚರಣೆಯನ್ನು ನೂರಾರು ವರ್ಷಗಳಿಂದ ಈ ಹಳ್ಳಿಯ ಜನರು ಮಾಡುತ್ತಾ ಬಂದಿದ್ದಾರೆ. ಇನ್ನೊಂದು ವಿಶೇಷವೇನೆಂದರೆ, ಇದುವರೆಗೂ ಯಾವ ಹಾವಿಗೂ ಹಿಂಸೆ ತೊಂದರೆ ಮಾಡಿಲ್ಲ. ಈ ಸಮಯದಲ್ಲಿ ಯಾವ ಹಾವುಗಳು ಮನುಷ್ಯರಿಗೆ ಕಚ್ಚಿದ ಉದಾಹರಣೆಗಳು ಕಡಿಮೆ. ಇಂತಹ ವಿಶೇಷ ಆಚರಣೆಯ ಮೂಲಕ ನಾಗರಪಂಚಮಿಯು ಶಿರಾಳ ಎಂಬ ಊರಿನಲ್ಲಿ ಗಮನ ಸೆಳೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

17 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

23 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago