Advertisement
ಸುದ್ದಿಗಳು

ಏ.12 : ಕೇಶವಕೃಪಾ ವೇದ-ಯೋಗ-ಕಲಾ ಶಿಬಿರ ಆರಂಭ | 22 ನೇ ವರ್ಷದ ವೇದ ಶಿಬಿರ |

Share

ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರವು ಎ.22  ರಿಂದ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಾಗರಾಜ ಭಟ್‌, ವಿವಿಧ ಕಾರ್ಯಕ್ರಮಗಳಿಂದ ರಾಜ್ಯ ಹಾಗೂ ಅಂತರ್‍ರಾಜ್ಯಗಳಲ್ಲಿ ಜನಮೆಚ್ಚುಗೆ ಗಳಿಸಿದ ವೇದ-ಯೋಗ-ಕಲಾ ಶಿಬಿರವಾಗಿ ಇದೀಗ ಇಪ್ಪತ್ತೆರಡನೇ ವರ್ಷದ ಸಂಭ್ರಮದಲ್ಲಿದೆ. ಸಣ್ಣ ಮಕ್ಕಳ ದೊಡ್ಡ ರಜೆ ಆರಂಭವಾದೊಡನೆ ಹಲವಾರು ಶಿಬಿರಗಳು ಆರಂಭಗೊಳ್ಳುತ್ತದೆ. ನಾಟಕ ಶಿಬಿರ, ರಂಗ ತರಬೇತಿ ಶಿಬಿರ, ಚಿಣ್ಣರ ಶಿಬಿರ, ನಾಯಕತ್ವ ಶಿಬಿರ ಸೇರಿದಂತೆ ಇನ್ನಿತರ ಶಿಬಿರಗಳು ಅಲ್ಲಲ್ಲಿ ನಡೆದರೂ ಭಾರತದ ಸಾಂಸ್ಕೃತಿಕ ಮೌಲ್ಯಗಳಿಗೆ ಪ್ರಧಾನ ಭೂಮಿಕೆಗಳಾದ ವೇದ ಶಿಬಿರಗಳು ಮಾತ್ರ  ಕೆಲವು ಕಡೆ ನಡೆಯುತ್ತದೆಯಷ್ಟೆ. ಅಂತಹ ವೇದ ಶಿಬಿರಗಳಲ್ಲಿ ಒಂದಾದ ಸುಳ್ಯದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ ಶಿಬಿರವು ಕಳೆದ 21 ವರ್ಷಗಳಿಂದ ಸಂಪೂರ್ಣ ಉಚಿತವಾಗಿ ವೇದ-ಯೋಗ ಹಾಗೂ ಕಲಾ ಶಿಕ್ಷಣದೊಂದಿಗೆ ಅಶನ, ವಸನ, ವಸತಿ, ಪಠ್ಯ ಪುಸ್ತಕಗಳೂ, ವ್ಯಾಸಪೀಠ ಇತ್ಯಾದಿಗಳನ್ನು ನೀಡಿ ಸಂಪೂರ್ಣ ಉಚಿತವಾಗಿ ನಡೆಸಿಕೊಂಡು ಬರುತ್ತಿದೆ.

ಇಲ್ಲಿನ ವೇದ ಶಿಬಿರದ ವಿಶೇಷತೆಯೇನೆಂದರೆ ಇಲ್ಲಿ ಬರೇ ವೇದ ಪಾಠ ಮಾತ್ರವಲ್ಲದೆ ವೇದಾಂತರ್ಗತವಾದ ಜೀವನ ದರ್ಶನವನ್ನು ಜನಮಾನಸಕ್ಕೆ ಸಮರ್ಥವಾಗಿ ತಲುಪಿಸಲು ಮಾಧ್ಯಮವಾದ ಯೋಗಾಭ್ಯಾಸ, ಭಜನೆ, ಸಂಕೀರ್ತನೆಗಳು, ಹಾಡು-ಕುಣಿತ ಮುಂತಾದವುಗಳೂ ಅಲ್ಲದೆ ಇಂದಿನ ಮಕ್ಕಳಲ್ಲಿ ರಾಷ್ಟ್ರಪ್ರೇಮದ ಭಕ್ತಿ ತರಂಗವನ್ನು ಮೂಡಿಸುವ ಹಲವಾರು ವೈವಿಧ್ಯ ಕಾರ್ಯಕ್ರಮಗಳೊಂದಿಗೆ ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿ ಜಾದೂ, ಮಿಮಿಕ್ರಿ, ಮುಖವಾಡ ತಯಾರಿ, ಬೊಂಬೆ ತಯಾರಿ, ಮಾತುಗಾರಿಕೆ, ಜಾನಪದ ನೃತ್ಯಗಳು, ಹಾವುಗಳ ಮಾಹಿತಿ, ಯಕ್ಷಗಾನ ರಂಗಕಲೆ, ರಂಗಪಾಠಗಳು, ರಂಗಗೀತೆ, ಚಿತ್ರಕಲೆ ಹೀಗೆ ಹಲವಾರು ವಿಷಯಗಳಲ್ಲಿ ರಾಜ್ಯದ ಸುಪ್ರಸಿದ್ಧ ಸಂಪನ್ಮೂಲ ವ್ಯಕ್ತಿಗಳಿಂದ ಶಿಕ್ಷಣ ನೀಡಲಾಗುತ್ತದೆ. ಅಲ್ಲದೇ ಈ ವರ್ಷ ಮತ್ತೂ ಒಂದು ಹೆಜ್ಜೆ ಮುಂದಡಿಯಿಟ್ಟು ಇದೇ ಶಿಬಿರದಲ್ಲಿ ಮೂರು ವರ್ಷಗಳನ್ನು ಪೂರೈಸಿದ ವಿದ್ಯಾರ್ಥಿಗಳಿಗೆ ಅಗ್ನಿಮುಖ ಪ್ರಯೋಗ ಹಾಗೂ ದುರ್ಗಾಸಪ್ತಶತೀ ಪಾಠಗಳನ್ನು ಅಳವಡಿಸಿಕೊಳ್ಳಲಾಗುತ್ತದೆ. ಋಗ್ವೇದ ಹಾಗೂ ಯಜುರ್ವೇದ ವಿಭಾಗಗಳಲ್ಲಿ ಒಟ್ಟು 6 ತರಗತಿಗಳು ನಡೆಯಲಿದ್ದು, ರಾಜ್ಯದ ಪ್ರಸಿದ್ಧ ವೇದ ವಿದ್ವಾಂಸರು, ಕಲಾ ತಜ್ಞರು, ಯೋಗ ಶಿಕ್ಷಕರು, ಅಧ್ಯಾಪಕರಾಗಿ ಭಾಗವಹಿಸಲಿದ್ದಾರೆ. ಈ ಎಲ್ಲಾ ಕಾರಣಗಳಿಂದ ಶ್ರೀ ಕೇಶವಕೃಪಾ ವೇದ ಶಿಬಿರಕ್ಕೆ ವರ್ಷದಿಂದ ವರ್ಷಕ್ಕೆ ದಾಖಲೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅವಕಾಶಕ್ಕಾಗಿ ಹೆಸರು ನೋಂದಾಯಿಸುತ್ತಿದ್ದು, ಇವರೆಲ್ಲರಿಗೂ ಪ್ರವೇಶ ಪರೀಕ್ಷೆ ನಡೆಸಿ 120 ವಿದ್ಯಾರ್ಥಿಗಳಿಗಷ್ಟೇ ಅವಕಾಶ ಕಲ್ಪಿಸಲಾಗುತ್ತದೆ.

ಎ.12 ಮಂಗಳವಾರವಾರ ಬೆಳಗ್ಗೆ 10.30ಕ್ಕೆ ಶಿಬಿರದ ಹಿರಿಯ ವಿದ್ಯಾರ್ಥಿ, ಮೈಸೂರಿನ ನರರೋಗತಜ್ಞರಾದ ಡಾ| ಶಾಸ್ತಾರ ಪನೆಯಾಲ ಹಾಗೂ  ಸೀಮಾ ಶಾಸ್ತಾರ ದಂಪತಿಗಳು ಉದ್ಘಾಟಿಸಲಿದ್ದು, ಸರಣಿ ಶಿವಪೂಜಾ ಅಭಿಯಾನ 2021 ರ ಸಂಚಾಲಕರಾದ  ಗೋಪಾಲಕೃಷ್ಣ ಭಟ್ ‘ಶಿವನಿವಾಸ’ ಇವರು ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ವಿನಾಯಕ ಭಟ್ಟ, ಗಾಳಿಮನೆ ಇವರು ದಿಕ್ಸೂಚಿ ಉಪನ್ಯಾಸ ಮಾಡಲಿದ್ದು, ಸುಳ್ಯ ಹವ್ಯಕ ವಲಯದ ಅಧ್ಯಕ್ಷರಾದ  ವಿಷ್ಣುಕಿರಣ ನೀರಬಿದಿರೆ ಇವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.  ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಗೌರವಾಧ್ಯಕ್ಷರಾದ  ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿದ್ದು ಶುಭಾಶಂಸನೆಯನ್ನು ಮಾಡಲಿದ್ದಾರೆ.

ಸುದ್ದಿಗೋಷ್ಟಿಯಲ್ಲಿ  ಸರಣಿಶಿವಪೂಜಾ ಅಭಿಯಾನ 2021ರ ಸಂಚಾಲಕರಾದ  ಗೋಪಾಲಕೃಷ್ಣ ಭಟ್ ‘ಶಿವನಿವಾಸ’, ಶಿಬಿರ ಸಂಚಾಲಕ ವೇ| ಮೂ| ಅಭಿರಾಮ ಶರ್ಮಾ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

12 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

13 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

14 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

15 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago