Advertisement
ಸುದ್ದಿಗಳು

ಏ.12 : ಕೇಶವಕೃಪಾ ವೇದ-ಯೋಗ-ಕಲಾ ಶಿಬಿರ ಆರಂಭ | 22 ನೇ ವರ್ಷದ ವೇದ ಶಿಬಿರ |

Share

ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರವು ಎ.22  ರಿಂದ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಾಗರಾಜ ಭಟ್‌, ವಿವಿಧ ಕಾರ್ಯಕ್ರಮಗಳಿಂದ ರಾಜ್ಯ ಹಾಗೂ ಅಂತರ್‍ರಾಜ್ಯಗಳಲ್ಲಿ ಜನಮೆಚ್ಚುಗೆ ಗಳಿಸಿದ ವೇದ-ಯೋಗ-ಕಲಾ ಶಿಬಿರವಾಗಿ ಇದೀಗ ಇಪ್ಪತ್ತೆರಡನೇ ವರ್ಷದ ಸಂಭ್ರಮದಲ್ಲಿದೆ. ಸಣ್ಣ ಮಕ್ಕಳ ದೊಡ್ಡ ರಜೆ ಆರಂಭವಾದೊಡನೆ ಹಲವಾರು ಶಿಬಿರಗಳು ಆರಂಭಗೊಳ್ಳುತ್ತದೆ. ನಾಟಕ ಶಿಬಿರ, ರಂಗ ತರಬೇತಿ ಶಿಬಿರ, ಚಿಣ್ಣರ ಶಿಬಿರ, ನಾಯಕತ್ವ ಶಿಬಿರ ಸೇರಿದಂತೆ ಇನ್ನಿತರ ಶಿಬಿರಗಳು ಅಲ್ಲಲ್ಲಿ ನಡೆದರೂ ಭಾರತದ ಸಾಂಸ್ಕೃತಿಕ ಮೌಲ್ಯಗಳಿಗೆ ಪ್ರಧಾನ ಭೂಮಿಕೆಗಳಾದ ವೇದ ಶಿಬಿರಗಳು ಮಾತ್ರ  ಕೆಲವು ಕಡೆ ನಡೆಯುತ್ತದೆಯಷ್ಟೆ. ಅಂತಹ ವೇದ ಶಿಬಿರಗಳಲ್ಲಿ ಒಂದಾದ ಸುಳ್ಯದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ ಶಿಬಿರವು ಕಳೆದ 21 ವರ್ಷಗಳಿಂದ ಸಂಪೂರ್ಣ ಉಚಿತವಾಗಿ ವೇದ-ಯೋಗ ಹಾಗೂ ಕಲಾ ಶಿಕ್ಷಣದೊಂದಿಗೆ ಅಶನ, ವಸನ, ವಸತಿ, ಪಠ್ಯ ಪುಸ್ತಕಗಳೂ, ವ್ಯಾಸಪೀಠ ಇತ್ಯಾದಿಗಳನ್ನು ನೀಡಿ ಸಂಪೂರ್ಣ ಉಚಿತವಾಗಿ ನಡೆಸಿಕೊಂಡು ಬರುತ್ತಿದೆ.

ಇಲ್ಲಿನ ವೇದ ಶಿಬಿರದ ವಿಶೇಷತೆಯೇನೆಂದರೆ ಇಲ್ಲಿ ಬರೇ ವೇದ ಪಾಠ ಮಾತ್ರವಲ್ಲದೆ ವೇದಾಂತರ್ಗತವಾದ ಜೀವನ ದರ್ಶನವನ್ನು ಜನಮಾನಸಕ್ಕೆ ಸಮರ್ಥವಾಗಿ ತಲುಪಿಸಲು ಮಾಧ್ಯಮವಾದ ಯೋಗಾಭ್ಯಾಸ, ಭಜನೆ, ಸಂಕೀರ್ತನೆಗಳು, ಹಾಡು-ಕುಣಿತ ಮುಂತಾದವುಗಳೂ ಅಲ್ಲದೆ ಇಂದಿನ ಮಕ್ಕಳಲ್ಲಿ ರಾಷ್ಟ್ರಪ್ರೇಮದ ಭಕ್ತಿ ತರಂಗವನ್ನು ಮೂಡಿಸುವ ಹಲವಾರು ವೈವಿಧ್ಯ ಕಾರ್ಯಕ್ರಮಗಳೊಂದಿಗೆ ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿ ಜಾದೂ, ಮಿಮಿಕ್ರಿ, ಮುಖವಾಡ ತಯಾರಿ, ಬೊಂಬೆ ತಯಾರಿ, ಮಾತುಗಾರಿಕೆ, ಜಾನಪದ ನೃತ್ಯಗಳು, ಹಾವುಗಳ ಮಾಹಿತಿ, ಯಕ್ಷಗಾನ ರಂಗಕಲೆ, ರಂಗಪಾಠಗಳು, ರಂಗಗೀತೆ, ಚಿತ್ರಕಲೆ ಹೀಗೆ ಹಲವಾರು ವಿಷಯಗಳಲ್ಲಿ ರಾಜ್ಯದ ಸುಪ್ರಸಿದ್ಧ ಸಂಪನ್ಮೂಲ ವ್ಯಕ್ತಿಗಳಿಂದ ಶಿಕ್ಷಣ ನೀಡಲಾಗುತ್ತದೆ. ಅಲ್ಲದೇ ಈ ವರ್ಷ ಮತ್ತೂ ಒಂದು ಹೆಜ್ಜೆ ಮುಂದಡಿಯಿಟ್ಟು ಇದೇ ಶಿಬಿರದಲ್ಲಿ ಮೂರು ವರ್ಷಗಳನ್ನು ಪೂರೈಸಿದ ವಿದ್ಯಾರ್ಥಿಗಳಿಗೆ ಅಗ್ನಿಮುಖ ಪ್ರಯೋಗ ಹಾಗೂ ದುರ್ಗಾಸಪ್ತಶತೀ ಪಾಠಗಳನ್ನು ಅಳವಡಿಸಿಕೊಳ್ಳಲಾಗುತ್ತದೆ. ಋಗ್ವೇದ ಹಾಗೂ ಯಜುರ್ವೇದ ವಿಭಾಗಗಳಲ್ಲಿ ಒಟ್ಟು 6 ತರಗತಿಗಳು ನಡೆಯಲಿದ್ದು, ರಾಜ್ಯದ ಪ್ರಸಿದ್ಧ ವೇದ ವಿದ್ವಾಂಸರು, ಕಲಾ ತಜ್ಞರು, ಯೋಗ ಶಿಕ್ಷಕರು, ಅಧ್ಯಾಪಕರಾಗಿ ಭಾಗವಹಿಸಲಿದ್ದಾರೆ. ಈ ಎಲ್ಲಾ ಕಾರಣಗಳಿಂದ ಶ್ರೀ ಕೇಶವಕೃಪಾ ವೇದ ಶಿಬಿರಕ್ಕೆ ವರ್ಷದಿಂದ ವರ್ಷಕ್ಕೆ ದಾಖಲೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅವಕಾಶಕ್ಕಾಗಿ ಹೆಸರು ನೋಂದಾಯಿಸುತ್ತಿದ್ದು, ಇವರೆಲ್ಲರಿಗೂ ಪ್ರವೇಶ ಪರೀಕ್ಷೆ ನಡೆಸಿ 120 ವಿದ್ಯಾರ್ಥಿಗಳಿಗಷ್ಟೇ ಅವಕಾಶ ಕಲ್ಪಿಸಲಾಗುತ್ತದೆ.

ಎ.12 ಮಂಗಳವಾರವಾರ ಬೆಳಗ್ಗೆ 10.30ಕ್ಕೆ ಶಿಬಿರದ ಹಿರಿಯ ವಿದ್ಯಾರ್ಥಿ, ಮೈಸೂರಿನ ನರರೋಗತಜ್ಞರಾದ ಡಾ| ಶಾಸ್ತಾರ ಪನೆಯಾಲ ಹಾಗೂ  ಸೀಮಾ ಶಾಸ್ತಾರ ದಂಪತಿಗಳು ಉದ್ಘಾಟಿಸಲಿದ್ದು, ಸರಣಿ ಶಿವಪೂಜಾ ಅಭಿಯಾನ 2021 ರ ಸಂಚಾಲಕರಾದ  ಗೋಪಾಲಕೃಷ್ಣ ಭಟ್ ‘ಶಿವನಿವಾಸ’ ಇವರು ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ವಿನಾಯಕ ಭಟ್ಟ, ಗಾಳಿಮನೆ ಇವರು ದಿಕ್ಸೂಚಿ ಉಪನ್ಯಾಸ ಮಾಡಲಿದ್ದು, ಸುಳ್ಯ ಹವ್ಯಕ ವಲಯದ ಅಧ್ಯಕ್ಷರಾದ  ವಿಷ್ಣುಕಿರಣ ನೀರಬಿದಿರೆ ಇವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.  ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಗೌರವಾಧ್ಯಕ್ಷರಾದ  ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿದ್ದು ಶುಭಾಶಂಸನೆಯನ್ನು ಮಾಡಲಿದ್ದಾರೆ.

ಸುದ್ದಿಗೋಷ್ಟಿಯಲ್ಲಿ  ಸರಣಿಶಿವಪೂಜಾ ಅಭಿಯಾನ 2021ರ ಸಂಚಾಲಕರಾದ  ಗೋಪಾಲಕೃಷ್ಣ ಭಟ್ ‘ಶಿವನಿವಾಸ’, ಶಿಬಿರ ಸಂಚಾಲಕ ವೇ| ಮೂ| ಅಭಿರಾಮ ಶರ್ಮಾ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago