Opinion

#NagaraPanchami | ನಾಡಿನಾದ್ಯಂತ ನಾಗರಪಂಚಮಿ‌ ಸಂಭ್ರಮ | ಇಂದು ಅರಶಿನ ಎಲೆ, ಹುಡಿಗೆ ವಿಶೇಷ ಸ್ಥಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಯುರ್ವೇದ ಔಷಧಿಯಲ್ಲಿ ಅರಸಿನವು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನು ಬ್ಯಾಕ್ಟೀರಿಯಾ ನಿವಾರಕ, ವೈರಸ್‌ ನಿವಾರಕ ಹಾಗೂಅಲರ್ಜಿನಿವಾರಕ ಮತ್ತು ಊತ ಗಾಯಗಳಿಗೆ ಅತ್ಯಂತ ಉಪಯೋಗಕಾರಿಯಾಗಿದೆ.

Advertisement

ಇದನ್ನು ಅನೇಕ ಚರ್ಮರೋಗಗಳಲ್ಲಿ ಮಧುಮೇಹದಲ್ಲಿ ಶ್ವಾಸಕೋಶ ಸಂಬಂಧ ಕಾಯಿಲೆಗಳಲ್ಲಿ ಔಷಧಿ ರೂಪದಲ್ಲಿ ಉಪಯೋಗಿಸಲಾಗುತ್ತದೆ. ಹಾಗೂ ಸೌಂದರ್ಯವರ್ಧಕವಾಗಿಯೂ ಉಪಯೋಗಿಸಲಾಗುವುದು ಇದನ್ನು ದಿನನಿತ್ಯದ ಆಹಾರದಲ್ಲೂ ಸಹ ಬಳಸಲಾಗುವುದು. ಅರಸಿನ ಎಲೆಯನ್ನು ಕರಾವಳಿಯ ಜಿಲ್ಲೆಗಳಲ್ಲಿ ನಾಗರಪಂಚಮಿಯ ಹಬ್ಬದಂದು ಸಿಹಿ ಕಡಬು ತಯಾರಿಸಲು ಉಪಯೋಗಿಸುವುದು ಸಾಂಪ್ರದಾಯಿಕವಾಗಿದೆ.

ಇದು ರುಚಿಯ ಜೊತೆಗೆ ಆರೋಗ್ಯಕರವಾದ ಒಂದು ತಿಂಡಿ ಆಗಿದೆ. ಅರಸಿನದ ಎಲೆಗಳನ್ನು ಸುಟ್ಟ ಗಾಯಗಳಲ್ಲಿ, ಚರ್ಮದ ರೋಗಗಳಲ್ಲಿ ಹಾಗೂ ಸೌಂದರ್ಯವರ್ಧಕವಾಗಿ ಉಪಯೋಗಿಸಲಾಗುವುದು. ತೆಂಗಿನ ಮರದಂತೆ ಅರಿಶಿನ ಕೂಡ ತನ್ನ ಪ್ರತಿ ಭಾಗದಲ್ಲಿ ಒಂದಲ್ಲ ಒಂದು ಪ್ರಯೋಜನ ನೀಡುವ ಗಿಡಮೂಲಿಕೆಯಾಗಿದೆ.

ಹಿಂದೂ ಧರ್ಮದಲ್ಲಿ ನಾಗರಪಂಚಮಿಗೆ ವಿಶೇಷ ಮಹತ್ವವಿದೆ. ಈ ದಿನದಂದು ನಾಗದೇವತೆಯನ್ನು ಪೂಜಿಸುವುದರಿಂದ ಮನೆಯಲ್ಲಿ ಸಂತೋಷ ಸಂಭ್ರಮ ಉಂಟಾಗುತ್ತದೆ ಎಂದು ನಂಬಲಾಗಿದೆ. ಹಾಗೆ ಇಂದು ಅರಶಿನ ಹುಡಿಯನ್ನು ನಾಗನ ಕಲ್ಲುಗಳಿಗೆ ಗಂಧವಾಗಿ ಉಪಯೋಗಿಸಲಾಗುತ್ತದೆ. ಭಕ್ತರಿಗೂ ಇದನ್ನೇ ಪ್ರಸಾದವಾಗಿ ನೀಡಲಾಗುತ್ತದೆ.
ಎಲ್ಲರಿಗೂ ನಾಗರ ಪಂಚಮಿ ಹಬ್ಬದ ಶುಭಾಶಯಗಳು, ಎಲ್ಲರೂ ಆರೋಗ್ಯವಂತರಾಗಿರಲಿ ಎಂದು ಹಾರೈಸುವ..

ಬರಹ :
ಡಾ.ಜ್ಯೋತಿ ಕೆ. , ಲಕ್ಷ್ಮೀ ಕ್ಲಿನಿಕ್ ಮಂಗಳೂರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

12 hours ago

ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ  ಸಂಭವನೀಯ ದಾಳಿಯ ಬಗ್ಗೆ…

12 hours ago

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

22 hours ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

24 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

24 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago